AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2021 Highlights: ಜಿಲ್ಲೆಗೊಂದು ಗೋಶಾಲೆ, ಮೇಕೆ-ಕುರಿ-ಕೋಳಿ ತಳಿ ಸಂವರ್ಧನೆಗೆ ಹೊಸ ಯೋಜನೆ

Karnataka Budget 2021: ಗೋಹತ್ಯೆ ನಿಷೇಧ ಕಾನೂನು ಜಾರಿಯಾದ ನಂತರ ವಿವಿಧ ಜಿಲ್ಲೆಗಳಲ್ಲಿ ಅನಾಥ ಗೋವುಗಳು ರಸ್ತೆಯ ಮೇಲೆ ಕಾಣಿಸಿಕೊಳ್ಳುವ ಪ್ರಮಾಣ ಹೆಚ್ಚಾಗಿತ್ತು. ವಯಸ್ಸಾದ ಮತ್ತು ಅಂಗವಿಕಲ ಗೋವುಗಳನ್ನು ಸಾಕುವ ಕಷ್ಟಗಳ ಬಗ್ಗೆ ರೈತರು ಸಹ ಅಸಹಾಯಕತೆ ತೋಡಿಕೊಂಡಿದ್ದರು.

Karnataka Budget 2021 Highlights: ಜಿಲ್ಲೆಗೊಂದು ಗೋಶಾಲೆ, ಮೇಕೆ-ಕುರಿ-ಕೋಳಿ ತಳಿ ಸಂವರ್ಧನೆಗೆ ಹೊಸ ಯೋಜನೆ
ಪ್ರಾತಿನಿಧಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on: Mar 08, 2021 | 1:08 PM

Share

ಬೆಂಗಳೂರು: ಗೋಹತ್ಯೆ ನಿಷೇಧ ಕಾನೂನು ಜಾರಿಯಾದ ನಂತರ ವಿವಿಧ ಜಿಲ್ಲೆಗಳಲ್ಲಿ ಅನಾಥ ಗೋವುಗಳು ರಸ್ತೆಯ ಮೇಲೆ ಕಾಣಿಸಿಕೊಳ್ಳುವ ಪ್ರಮಾಣ ಹೆಚ್ಚಾಗಿತ್ತು. ವಯಸ್ಸಾದ ಮತ್ತು ಅಂಗವಿಕಲ ಗೋವುಗಳನ್ನು ಸಾಕುವ ಕಷ್ಟಗಳ ಬಗ್ಗೆ ರೈತರು ಸಹ ಅಸಹಾಯಕತೆ ತೋಡಿಕೊಂಡಿದ್ದರು. ಬಜೆಟ್ ಭಾಷಣದಲ್ಲಿ ಇದಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಿಲ್ಲೆಗೊಂದು ಗೋಶಾಲೆ ನಿರ್ಮಿಸುವುದಾಗಿ ಘೋಷಿಸಿದ್ದಾರೆ. ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಗೋಶಾಲೆಗಳಿವೆ. ಖಾಸಗಿ ನಿರ್ವಹಣೆಯಲ್ಲಿರುವ ಗೋಶಾಲೆಗಳ ಪರಿಸ್ಥಿತಿ ಸರಿಯಿಲ್ಲ ಎಂಬ ಮಾತುಗಳಿವೆ. ಬಜೆಟ್​ನಲ್ಲಿ ಘೋಷಣೆಯಾಗಿರುವ ಗೋಶಾಲೆಗಳು ಖಾಸಗಿ ನಿರ್ವಹಣೆಯ ಗೋಶಾಲೆಗಳ ಪರಿಸ್ಥಿತಿ ಸುಧಾರಿಸಲು ನೆರವಾಗುವುದೋ ಅಥವಾ ಸರ್ಕಾರವೇ ಹೊಸ ಗೋಶಾಲೆಗಳನ್ನು ಸ್ಥಾಪಿಸಲಿದೆಯೋ ಎಂಬ ಬಗ್ಗೆ ನಿಖರ ಮಾಹಿತಿ ಮುಂದಿನ ದಿನಗಳಲ್ಲಿ ತಿಳಿಯಬಹುದು.

ರಾಜ್ಯದಲ್ಲಿ ಗೋಹತ್ಯೆ ತಡೆಗೆ ಜಿಲ್ಲೆಗೊಂದು ಗೋಶಾಲೆ ನಿರ್ಮಿಸಲಾಗುವುದು. ದೇಸಿ ತಳಿಗಳಾದ ಗೀರ್, ಸಾಹಿವಾಲ್, ಓಂಗೋಲ್, ಥಾರ್​ಪಾರ್ಕರ್ ಮತ್ತು ದೇವಣಿ ತಳಿಗಳ ಸಂವರ್ಧನೆಗಾಗಿ ‘ಸಮಗ್ರ ಗೋಸಂಕುಲ ಸಮೃದ್ಧಿ ಯೋಜನೆ’ ಜಾರಿಗೊಳಿಸಲಾಗುವುದು ಎಂದು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದರು.

ಬೆಂಗಳೂರಿನ ಹೆಸರಘಟ್ಟದಲ್ಲಿ 100 ಎಕರೆ ವಿಸ್ತೀರ್ಣದಲ್ಲಿ ಹಸು, ಕೋಳಿ ಮತ್ತು ವಿವಿಧ ದೇಸಿ ಪಶುತಳಿಗಳ ಸಂವರ್ಧನೆ ಮತ್ತು ಪ್ರದರ್ಶನಕ್ಕಾಗಿ ಥೀಮ್ ಪಾರ್ಕ್ ರೂಪಿಸಲಾಗುವುದು ಎಂದು ಅವರು ಇದೇ ಸಂದರ್ಭ ಘೋಷಿಸಿದರು.

ರಾಜ್ಯದಲ್ಲಿ ಈಚಿನ ದಿನಗಳಲ್ಲಿ ಜನಪ್ರಿಯವಾಗಿರುವ ನಂದಿಗುರ್ಗ ಮೇಕೆ ತಳಿಗಳ ಅಭಿವೃದ್ಧಿಗೆ ₹ 1 ಕೋಟಿ, ನಾರಿಸುವರ್ಣ ಕುರಿತಳಿ ಸಂವರ್ಧನೆಗೆ ಕೊಪ್ಪಳದಲ್ಲಿ ಸಂವರ್ಧನಾ ಕೇಂದ್ರ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು. ಆಕಸ್ಮಿಕವಾಗಿ ಕುರಿಗಳು ಸಾವನ್ನಪ್ಪಿದಾಗ ಅವುಗಳ ಮಾಲೀಕರು ಆರ್ಥಿಕ ನಷ್ಟ ಅನುಭವಿಸುತ್ತಾರೆ. ಇಂಥವರಿಗೆ ಪರಿಹಾರ ನೀಡುವ ಯೋಜನೆಯನ್ನು ಈ ವರ್ಷವೂ ಮುಂದುವರಿಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

ಇದನ್ನೂ ಓದಿ: ಮಠ-ಸಾಂಸ್ಕೃತಿಕ ಕೇಂದ್ರಗಳಿಗೆ ಅನುದಾನ; ಅಯೋಧ್ಯೆಯಲ್ಲಿ ಯಾತ್ರಿ ನಿವಾಸಕ್ಕೆ ₹ 10 ಕೋಟಿ

ಇದನ್ನೂ ಓದಿ: ಬಜೆಟ್​ನಲ್ಲಿ ಮಹಿಳೆಯರಿಗೆ ಸಿಕ್ಕಿದ್ದೇನು? ಹೊಸ ಯೋಜನೆಗಳೇನು?

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ