AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ-ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಲು ಈ ಚುನಾವಣೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಈ ಬಾರಿಯ ಉಪಚುನಾವಣೆಯನ್ನು ಬಿ.ಎಸ್. ಯಡಿಯೂರಪ್ಪ ಅವರ ರಾಜ್ಯ ಸರ್ಕಾರವನ್ನು ಅಥವಾ ಮೋದಿ ಅವರ ಕೇಂದ್ರ ಸರ್ಕಾರ ಬೀಳಿಸಲು ಎದುರಿಸುತ್ತಿಲ್ಲ. ಬದಲಿಗೆ ಎರಡೂ ಸರ್ಕಾರಗಳಿಗೆ ಸಂದೇಶ ರವಾನಿಸಲು ಈ ಚುನಾವಣೆ ಎದುರಿಸುತ್ತೇದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್ ಅವರು ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಿಷ್ಟು: ‘ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ […]

ರಾಜ್ಯ-ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಲು ಈ ಚುನಾವಣೆ: ಡಿ.ಕೆ. ಶಿವಕುಮಾರ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on: Oct 14, 2020 | 3:33 PM

Share

ಬೆಂಗಳೂರು: ಈ ಬಾರಿಯ ಉಪಚುನಾವಣೆಯನ್ನು ಬಿ.ಎಸ್. ಯಡಿಯೂರಪ್ಪ ಅವರ ರಾಜ್ಯ ಸರ್ಕಾರವನ್ನು ಅಥವಾ ಮೋದಿ ಅವರ ಕೇಂದ್ರ ಸರ್ಕಾರ ಬೀಳಿಸಲು ಎದುರಿಸುತ್ತಿಲ್ಲ. ಬದಲಿಗೆ ಎರಡೂ ಸರ್ಕಾರಗಳಿಗೆ ಸಂದೇಶ ರವಾನಿಸಲು ಈ ಚುನಾವಣೆ ಎದುರಿಸುತ್ತೇದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್ ಅವರು ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಿಷ್ಟು:

‘ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ನಮ್ಮೆಲ್ಲ ನಾಯಕರು ಸೇರಿ ವಿದ್ಯಾವಂತ, ಯುವ ಹೆಣ್ಣು ಮಗಳನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದೇವೆ. ಈ ಕ್ಷೇತ್ರದ ಮತದಾರರು ಬಹಳ ವಿದ್ಯಾವಂತ, ಪ್ರಜ್ಞಾವಂತ ಹಾಗೂ ಬುದ್ಧಿವಂತರಿದ್ದಾರೆ. ಇಲ್ಲಿನ ಮತದಾರರು ಎರಡು ಬಾರಿ ಸತತವಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದಾರೆ. ಈ ಬಾರಿಯೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ.

ಈ ಹಿಂದೆ ಇದ್ದ ಅಭ್ಯರ್ಥಿ ಯಾಕೆ ಹೋದರು ಎಂಬ ಬಗ್ಗೆ ಈಗ ಚರ್ಚೆ ಮಾಡುವುದಿಲ್ಲ. ಮತದಾರ ಕಳೆದ ಚುನಾವಣೆಯಲ್ಲಿ ಪಕ್ಷಕ್ಕೆ ನೀಡಿದ್ದಕ್ಕಿಂತ ಹೆಚ್ಚಿನ ಮತ ನೀಡಿ ನಮ್ಮ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸವಿದೆ. ಈ ಕ್ಷೇತ್ರದ ಜನರ ನಂಬಿಕೆ ಉಳಿಸಿಕೊಂಡು ನಾವು ಕೆಲಸ ಮಾಡುತ್ತೇವೆ.’

ಸರ್ಕಾರದ ಬೆದರಿಕೆಗೆ ಬಗ್ಗಲ್ಲ ಕೆ.ಜೆ. ಹಳ್ಳಿ ಗಲಾಟೆಯಲ್ಲಿ ಕಾಂಗ್ರೆಸ್ ನವರು ಇಲ್ಲಾ. ಕಾಂಗ್ರೆಸೇತರರು ಮಾಡಿರುವ ಗಲಾಟೆ ಅದು. ಬಿಜೆಪಿ ಸರ್ಕಾರ ಹೆದರಿಸಿ ಬೆದರಿಸಿ ರಾತ್ರೋ ರಾತ್ರಿ ಕಾಂಗ್ರೆಸ್ ನವರ ಹೆಸರು ಸೇರಿಸಿದ್ದಾರೆ.

ನಮ್ಮನ್ನ ಬೆದರಿಸುವ ತ‌ಂತ್ರ ಮಾಡುತ್ತಿದ್ದಾರೆ. ಪರಮೇಶ್ವರ ಅವರನ್ನ ಕರೆದು ಸಿಬಿಐ ತನಿಖೆ ಮಾಡಿದೆ‌. ನಮ್ಮಿಬ್ಬರು ಶಾಸಕರನ್ನ ನಿನ್ನೆ ತನಿಖೆ ಮಾಡಿದ್ದಾರೆ. ಈ ಬೆದರಿಕೆಗೆಲ್ಲಾ ನಾವು ಬಗ್ಗಲ್ಲ.

Follow Us
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ