AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಚುನಾವಣೆ ಫಲಿತಾಂಶ: ‘ಕೈ’ ಹಿಡಿದ ಸಿದ್ದರಾಮಯ್ಯ ತಂತ್ರಗಳು ಇವುಗಳೇ ನೋಡಿ!

ಕರ್ನಾಟಕ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅದ್ಭುತ ಗೆಲುವು ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಚಾಣಾಕ್ಷತೆಯನ್ನು ಪ್ರತಿಬಿಂಬಿಸಿದೆ. ಹಿಂದುಳಿದ ವರ್ಗಗಳು, ದಲಿತರು ಮತ್ತು ಅಲ್ಪಸಂಖ್ಯಾತ ಸಮುದಾಯದ ಮೇಲೆ ಅವರ ಫೋಕಸ್ ಮತ್ತು ಲೋಕಾಯುಕ್ತ ತನಿಖೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸಿದ ರೀತಿ ಈ ಯಶಸ್ಸಿಗೆ ಕಾರಣ ಎಂದೇ ವಿಶ್ಲೇಷಿಸಲಾಗುತ್ತಿದೆ. ಸಿದ್ದರಾಮಯ್ಯ ಗೆಲುವಿನ ಕೈಹಿಡಿದ ತಂತ್ರಗಾರಿಕೆಗಳು ಯಾವುವೆಲ್ಲ ಎಂಬ ವಿವರ ಇಲ್ಲಿದೆ ನೋಡಿ.

ಉಪಚುನಾವಣೆ ಫಲಿತಾಂಶ: ‘ಕೈ’ ಹಿಡಿದ ಸಿದ್ದರಾಮಯ್ಯ ತಂತ್ರಗಳು ಇವುಗಳೇ ನೋಡಿ!
ಸಿದ್ದರಾಮಯ್ಯ
ಪ್ರಸನ್ನ ಗಾಂವ್ಕರ್​
| Updated By: Ganapathi Sharma|

Updated on: Nov 24, 2024 | 9:18 AM

Share

ಬೆಂಗಳೂರು, ನವೆಂಬರ್ 24: ಕರ್ನಾಟಕ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕ್ಲೀನ್ ಸ್ವೀಪ್ ಮಾಡಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರ್ಚಿಯನ್ನು ಭದ್ರಪಡಿಸಿದೆ! ಅವರ ರಾಜಕೀಯ ಕಾರ್ಯತಂತ್ರಗಳು, ವಿಶೇಷವಾಗಿ ಅಹಿಂದ (ಹಿಂದುಳಿದ ವರ್ಗಗಳು, ದಲಿತರು ಮತ್ತು ಅಲ್ಪಸಂಖ್ಯಾತರು) ಸಮುದಾಯವನ್ನು ಸೆಳೆಯುವಲ್ಲಿ ಅವರು ಮಾಡಿರುವ ತಂತ್ರಗಾರಿಕೆ ಈ ಯಶಸ್ಸಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ.

ಅಹಿಂದ ಸಮುದಾಯಗಳ ಬೆಂಬಲ ಪಡೆಯುವಲ್ಲಿ ಸಿದ್ದರಾಮಯ್ಯ ತಂತ್ರಗಾರಿಕೆ ಯಶಸ್ವಿಯಾಯಿತು. ಮುಡಾ ಹಗರಣ ಸಂಬಂಧ ಲೋಕಾಯುಕ್ತ ತನಿಖೆಗೆ ಹಾಜರಾಗಿರುವುದನ್ನೂ ಅವರು ತಮ್ಮ ಪರವಾಗಿ ಪರಿವರ್ತಿಸಿಕೊಂಡರು. ಇದನ್ನೇ ಮುಂದಿಟ್ಟುಕೊಂಡು ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಸಿದ್ದರಾಮಯ್ಯ ನೇರವಾಗಿ ಅಹಿಂದ ವರ್ಗಗಳ ಮತ ಸೆಳೆಯುವ ನಿಟ್ಟಿನಲ್ಲಿ ಮಾತುಗಳನ್ನಾಡಿದರು. ತಮ್ಮನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗುತ್ತಿದೆ ಎಂದು ಬಿಂಬಿಸುವಲ್ಲಿ ಯಶಸ್ವಿಯಾದರು.

ಸಿದ್ದರಾಮಯ್ಯನವರ ತಂತ್ರಗಾರಿಕೆಯ ಪರಿಣಾಮವಾಗಿ, ಕಾಂಗ್ರೆಸ್​ಗೆ ಉತ್ತಮ ಫಲಿತಾಂಶ ದೊರೆಯಿತು.

ಬಿಜೆಪಿ, ಜೆಡಿಎಸ್​ಗೆ ಹಿನ್ನಡೆಯಾದ ಟಾರ್ಗೆಟ್ ಸಿದ್ದರಾಮಯ್ಯ

ಚುನಾವಣಾ ಪ್ರಚಾರದ ಅವಧಿಯುದ್ದಕ್ಕೂ, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಿದ್ದರಾಮಯ್ಯನವರ ಮೇಲೆ ಪದೇ ಪದೇ ನೇರ ವಾಗ್ದಾಳಿ ನಡೆಸಿದರು. ಈ ಸವಾಲುಗಳ ನಡುವೆಯೂ ಸಿದ್ದರಾಮಯ್ಯ ಅವರ ರಾಜಕೀಯ ಚಾಣಾಕ್ಷತೆ ಮತ್ತು ತಂತ್ರಗಾರಿಕೆ ಮತದಾರ ಮನ ಮುಟ್ಟುವಲ್ಲಿ ಕೆಲಸ ಮಾಡಿತು.

ಲಾಭವಾದ ಲೋಕಾಯುಕ್ತ ತನಿಖೆ

ಚುನಾವಣಾ ಪ್ರಚಾರದ ಸಮಯದಲ್ಲೇ ಸಿದ್ದರಾಮಯ್ಯ ಲೋಕಾಯುಕ್ತ ತನಿಖೆಗೆ ಹಾಜರಾದರು. ಇದರ ಹೊರತಾಗಿಯೂ, ಅವರು ಹಿಂಜರಿಯಲಿಲ್ಲ ಮತ್ತು ತಮ್ಮ ವರ್ಚಸ್ಸಿನ ಮೇಲೆ ಯಾವುದೇ ಮಹತ್ವದ ಪರಿಣಾಮ ಬೀರದಂತೆ ನೋಡಿಕೊಂಡರು. ಶಿಗ್ಗಾಂವಿ ಹಾಗೂ ಸಂಡೂರು ಪ್ರಚಾರದ ವೇಳೆ, ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ನಿರಂತರವಾಗಿ ಸಮರ್ಥಿಸಿಕೊಂಡಿದ್ದಲ್ಲದೆ, ತಮ್ಮ ವರ್ಚಸ್ಸನ್ನು ಉಳಿಸಿಕೊಳ್ಳುವಲ್ಲಿ ಸಫಲರಾದರು.

ಮತದಾರರ ಭಾವನೆಗಳಿಗೆ ಮನವಿ

ಶಿಗ್ಗಾಂವಿ ಹಾಗೂ ಸಂಡೂರು ಚುನಾವಣಾ ಪ್ರಚಾರದ ಸಮಯದಲ್ಲಿ ಸಮುದಾಯ ಸಭೆಗಳನ್ನು ಉದ್ದೇಶಿಸಿ ಮಾತನಾಡಿದಾಗಲೆಲ್ಲ ಸಿದ್ದರಾಮಯ್ಯ, ಭ್ರಷ್ಟಾಚಾರ ಮತ್ತು ಇತರ ಆಡಳಿತಾತ್ಮಕ ಸಮಸ್ಯೆಗಳ ಬಗ್ಗೆಯೇ ಚರ್ಚಿಸಿದರು. ಮುಡಾ ವಿಚಾರವಾಗಿ, “ನಾನು ಯಾವುದೇ ತಪ್ಪು ಮಾಡಿಲ್ಲ, ಹಾಗಾಗಿ ನಾನು ಸಿಕ್ಕಿಬೀಳುವುದಿಲ್ಲ” ಎಂದು ಪ್ರತಿಪಾದಿಸಿ ಜನರ ನಂಬಿಕೆ ಗಳಿಸುವಲ್ಲಿ ಯಶಸ್ವಿಯಾದರು. ಅವರ ಗಮನ ನೇರವಾಗಿ ಮತದಾರರನ್ನು ತಲುಪುವುದು ಮತ್ತು ಅವರ ಕಾಳಜಿಯನ್ನು ಪರಿಹರಿಸುವುದಾಗಿತ್ತು. ಇದು ಫಲಕೊಟ್ಟಿತು.

ಹೈಕಮಾಂಡ್​ಗೂ ಸಂದೇಶ ರವಾನೆ

ಚುನಾವಣಾ ಫಲಿತಾಂಶಗಳು ಕರ್ನಾಟಕ ರಾಜಕೀಯದಲ್ಲಿ, ಸರ್ಕಾರದಲ್ಲಿ ಸಿದ್ದರಾಮಯ್ಯ ಸ್ಥಾನವನ್ನು ಇನ್ನಷ್ಟು ಬಲಪಡಿಸಿದೆ. “ಜನರ ನ್ಯಾಯಾಲಯವು ಇತರ ಎಲ್ಲಾ ನ್ಯಾಯಾಲಯಗಳಿಗಿಂತ ಸರ್ವೋಚ್ಚವಾಗಿದೆ” ಎನ್ನುವ ಮೂಲಕ ಸಿದ್ದರಾಮಯ್ಯ, ಹೈಕಮಾಂಡ್ ನಾಯಕರಿಗೂ ಸಂದೇಶ ನೀಡಿದ್ದಾರೆ. ತಮ್ಮ ವರ್ಚಸ್ಸು ಜನತೆಯ ಮುಂದೆ‌ ಕಳಂಕ ರಹಿತವಾಗಿದೆ ಎಂಬ ಮೆಸೇಜ್ ರವಾನಿಸಿದ್ದಾರೆ.

ಹಾಸನದಲ್ಲಿ ನಡೆಯಲಿದೆ ಬೃಹತ್ ಸಮಾವೇಶ

ಆಡಳಿತ ನಡೆಸಲು ಶಕ್ತಿ ಕೊಡಿ ಎಂದು ಚುನಾವಣಾ ಪ್ರಚಾರದ ವೇಳೆ ಸಿದ್ದರಾಮಯ್ಯ ಜನತೆಯ ಮುಂದೆ ಕೇಳಿದ್ದರು. ಇದೀಗ ತನಗೆ ಶಕ್ತಿ ಇದೆ ಎಂಬುದನ್ನು ಮತ್ತೆ ಹೈಕಮಾಂಡ್ ಮುಂದೆ ಸಾಬೀತು ಮಾಡಲು ಹೊರಟಿದ್ದಾರೆ. ಚುನಾವಣೆ ಮುಗಿದರೂ ಸಿದ್ದರಾಮಯ್ಯ ಪರವಾಗಿ ಹಾಸನದಲ್ಲಿ ಬೃಹತ್ ಅಹಿಂದ ಸಮಾವೇಶ ನಡೆಸಲು ಕಾಂಗ್ರೆಸ್ ಮುಂದಾಗಿದೆ.

ಇದನ್ನೂ ಓದಿ: ಉಪಚುನಾವಣೆ ಫಲಿತಾಂಶ: ಬಿಜೆಪಿ ಸೋಲಿಗೆ ಕಾರಣವಾಯ್ತು ಸ್ಥಳೀಯ ನಾಯಕತ್ವ ಕೊರತೆ, ಒಳಜಗಳ, ತಪ್ಪು ಲೆಕ್ಕಾಚಾರ

ಉಪಚುನಾವಣೆ ಫಲಿತಾಂಶವನ್ನೇ ಮುಂದಿಟ್ಟುಕೊಂಡು ಸಿದ್ದರಾಮಯ್ಯ ಅತ್ಯಾಪ್ತರು ಹಾಸನದಲ್ಲಿ ಬೃಹತ್ ಸಮಾವೇಶ ಮಾಡಲಿದ್ದಾರೆ. ಈ ಮೂಲಕ ತಮ್ಮ ಸ್ಥಾನಕ್ಕೆ ಕುಂದು ಬರದಂತೆ ಸಿದ್ದರಾಮಯ್ಯ ನೋಡಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಚುನಾವಣೆ ಫಲಿತಾಂಶ ಸಂಬಂಧಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?