Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಚುನಾವಣೆ ಫಲಿತಾಂಶ: ‘ಕೈ’ ಹಿಡಿದ ಸಿದ್ದರಾಮಯ್ಯ ತಂತ್ರಗಳು ಇವುಗಳೇ ನೋಡಿ!

ಕರ್ನಾಟಕ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅದ್ಭುತ ಗೆಲುವು ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಚಾಣಾಕ್ಷತೆಯನ್ನು ಪ್ರತಿಬಿಂಬಿಸಿದೆ. ಹಿಂದುಳಿದ ವರ್ಗಗಳು, ದಲಿತರು ಮತ್ತು ಅಲ್ಪಸಂಖ್ಯಾತ ಸಮುದಾಯದ ಮೇಲೆ ಅವರ ಫೋಕಸ್ ಮತ್ತು ಲೋಕಾಯುಕ್ತ ತನಿಖೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸಿದ ರೀತಿ ಈ ಯಶಸ್ಸಿಗೆ ಕಾರಣ ಎಂದೇ ವಿಶ್ಲೇಷಿಸಲಾಗುತ್ತಿದೆ. ಸಿದ್ದರಾಮಯ್ಯ ಗೆಲುವಿನ ಕೈಹಿಡಿದ ತಂತ್ರಗಾರಿಕೆಗಳು ಯಾವುವೆಲ್ಲ ಎಂಬ ವಿವರ ಇಲ್ಲಿದೆ ನೋಡಿ.

ಉಪಚುನಾವಣೆ ಫಲಿತಾಂಶ: ‘ಕೈ’ ಹಿಡಿದ ಸಿದ್ದರಾಮಯ್ಯ ತಂತ್ರಗಳು ಇವುಗಳೇ ನೋಡಿ!
ಸಿದ್ದರಾಮಯ್ಯ
Follow us
ಪ್ರಸನ್ನ ಗಾಂವ್ಕರ್​
| Updated By: Ganapathi Sharma

Updated on: Nov 24, 2024 | 9:18 AM

ಬೆಂಗಳೂರು, ನವೆಂಬರ್ 24: ಕರ್ನಾಟಕ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕ್ಲೀನ್ ಸ್ವೀಪ್ ಮಾಡಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರ್ಚಿಯನ್ನು ಭದ್ರಪಡಿಸಿದೆ! ಅವರ ರಾಜಕೀಯ ಕಾರ್ಯತಂತ್ರಗಳು, ವಿಶೇಷವಾಗಿ ಅಹಿಂದ (ಹಿಂದುಳಿದ ವರ್ಗಗಳು, ದಲಿತರು ಮತ್ತು ಅಲ್ಪಸಂಖ್ಯಾತರು) ಸಮುದಾಯವನ್ನು ಸೆಳೆಯುವಲ್ಲಿ ಅವರು ಮಾಡಿರುವ ತಂತ್ರಗಾರಿಕೆ ಈ ಯಶಸ್ಸಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ.

ಅಹಿಂದ ಸಮುದಾಯಗಳ ಬೆಂಬಲ ಪಡೆಯುವಲ್ಲಿ ಸಿದ್ದರಾಮಯ್ಯ ತಂತ್ರಗಾರಿಕೆ ಯಶಸ್ವಿಯಾಯಿತು. ಮುಡಾ ಹಗರಣ ಸಂಬಂಧ ಲೋಕಾಯುಕ್ತ ತನಿಖೆಗೆ ಹಾಜರಾಗಿರುವುದನ್ನೂ ಅವರು ತಮ್ಮ ಪರವಾಗಿ ಪರಿವರ್ತಿಸಿಕೊಂಡರು. ಇದನ್ನೇ ಮುಂದಿಟ್ಟುಕೊಂಡು ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಸಿದ್ದರಾಮಯ್ಯ ನೇರವಾಗಿ ಅಹಿಂದ ವರ್ಗಗಳ ಮತ ಸೆಳೆಯುವ ನಿಟ್ಟಿನಲ್ಲಿ ಮಾತುಗಳನ್ನಾಡಿದರು. ತಮ್ಮನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗುತ್ತಿದೆ ಎಂದು ಬಿಂಬಿಸುವಲ್ಲಿ ಯಶಸ್ವಿಯಾದರು.

ಸಿದ್ದರಾಮಯ್ಯನವರ ತಂತ್ರಗಾರಿಕೆಯ ಪರಿಣಾಮವಾಗಿ, ಕಾಂಗ್ರೆಸ್​ಗೆ ಉತ್ತಮ ಫಲಿತಾಂಶ ದೊರೆಯಿತು.

ಬಿಜೆಪಿ, ಜೆಡಿಎಸ್​ಗೆ ಹಿನ್ನಡೆಯಾದ ಟಾರ್ಗೆಟ್ ಸಿದ್ದರಾಮಯ್ಯ

ಚುನಾವಣಾ ಪ್ರಚಾರದ ಅವಧಿಯುದ್ದಕ್ಕೂ, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಿದ್ದರಾಮಯ್ಯನವರ ಮೇಲೆ ಪದೇ ಪದೇ ನೇರ ವಾಗ್ದಾಳಿ ನಡೆಸಿದರು. ಈ ಸವಾಲುಗಳ ನಡುವೆಯೂ ಸಿದ್ದರಾಮಯ್ಯ ಅವರ ರಾಜಕೀಯ ಚಾಣಾಕ್ಷತೆ ಮತ್ತು ತಂತ್ರಗಾರಿಕೆ ಮತದಾರ ಮನ ಮುಟ್ಟುವಲ್ಲಿ ಕೆಲಸ ಮಾಡಿತು.

ಲಾಭವಾದ ಲೋಕಾಯುಕ್ತ ತನಿಖೆ

ಚುನಾವಣಾ ಪ್ರಚಾರದ ಸಮಯದಲ್ಲೇ ಸಿದ್ದರಾಮಯ್ಯ ಲೋಕಾಯುಕ್ತ ತನಿಖೆಗೆ ಹಾಜರಾದರು. ಇದರ ಹೊರತಾಗಿಯೂ, ಅವರು ಹಿಂಜರಿಯಲಿಲ್ಲ ಮತ್ತು ತಮ್ಮ ವರ್ಚಸ್ಸಿನ ಮೇಲೆ ಯಾವುದೇ ಮಹತ್ವದ ಪರಿಣಾಮ ಬೀರದಂತೆ ನೋಡಿಕೊಂಡರು. ಶಿಗ್ಗಾಂವಿ ಹಾಗೂ ಸಂಡೂರು ಪ್ರಚಾರದ ವೇಳೆ, ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ನಿರಂತರವಾಗಿ ಸಮರ್ಥಿಸಿಕೊಂಡಿದ್ದಲ್ಲದೆ, ತಮ್ಮ ವರ್ಚಸ್ಸನ್ನು ಉಳಿಸಿಕೊಳ್ಳುವಲ್ಲಿ ಸಫಲರಾದರು.

ಮತದಾರರ ಭಾವನೆಗಳಿಗೆ ಮನವಿ

ಶಿಗ್ಗಾಂವಿ ಹಾಗೂ ಸಂಡೂರು ಚುನಾವಣಾ ಪ್ರಚಾರದ ಸಮಯದಲ್ಲಿ ಸಮುದಾಯ ಸಭೆಗಳನ್ನು ಉದ್ದೇಶಿಸಿ ಮಾತನಾಡಿದಾಗಲೆಲ್ಲ ಸಿದ್ದರಾಮಯ್ಯ, ಭ್ರಷ್ಟಾಚಾರ ಮತ್ತು ಇತರ ಆಡಳಿತಾತ್ಮಕ ಸಮಸ್ಯೆಗಳ ಬಗ್ಗೆಯೇ ಚರ್ಚಿಸಿದರು. ಮುಡಾ ವಿಚಾರವಾಗಿ, “ನಾನು ಯಾವುದೇ ತಪ್ಪು ಮಾಡಿಲ್ಲ, ಹಾಗಾಗಿ ನಾನು ಸಿಕ್ಕಿಬೀಳುವುದಿಲ್ಲ” ಎಂದು ಪ್ರತಿಪಾದಿಸಿ ಜನರ ನಂಬಿಕೆ ಗಳಿಸುವಲ್ಲಿ ಯಶಸ್ವಿಯಾದರು. ಅವರ ಗಮನ ನೇರವಾಗಿ ಮತದಾರರನ್ನು ತಲುಪುವುದು ಮತ್ತು ಅವರ ಕಾಳಜಿಯನ್ನು ಪರಿಹರಿಸುವುದಾಗಿತ್ತು. ಇದು ಫಲಕೊಟ್ಟಿತು.

ಹೈಕಮಾಂಡ್​ಗೂ ಸಂದೇಶ ರವಾನೆ

ಚುನಾವಣಾ ಫಲಿತಾಂಶಗಳು ಕರ್ನಾಟಕ ರಾಜಕೀಯದಲ್ಲಿ, ಸರ್ಕಾರದಲ್ಲಿ ಸಿದ್ದರಾಮಯ್ಯ ಸ್ಥಾನವನ್ನು ಇನ್ನಷ್ಟು ಬಲಪಡಿಸಿದೆ. “ಜನರ ನ್ಯಾಯಾಲಯವು ಇತರ ಎಲ್ಲಾ ನ್ಯಾಯಾಲಯಗಳಿಗಿಂತ ಸರ್ವೋಚ್ಚವಾಗಿದೆ” ಎನ್ನುವ ಮೂಲಕ ಸಿದ್ದರಾಮಯ್ಯ, ಹೈಕಮಾಂಡ್ ನಾಯಕರಿಗೂ ಸಂದೇಶ ನೀಡಿದ್ದಾರೆ. ತಮ್ಮ ವರ್ಚಸ್ಸು ಜನತೆಯ ಮುಂದೆ‌ ಕಳಂಕ ರಹಿತವಾಗಿದೆ ಎಂಬ ಮೆಸೇಜ್ ರವಾನಿಸಿದ್ದಾರೆ.

ಹಾಸನದಲ್ಲಿ ನಡೆಯಲಿದೆ ಬೃಹತ್ ಸಮಾವೇಶ

ಆಡಳಿತ ನಡೆಸಲು ಶಕ್ತಿ ಕೊಡಿ ಎಂದು ಚುನಾವಣಾ ಪ್ರಚಾರದ ವೇಳೆ ಸಿದ್ದರಾಮಯ್ಯ ಜನತೆಯ ಮುಂದೆ ಕೇಳಿದ್ದರು. ಇದೀಗ ತನಗೆ ಶಕ್ತಿ ಇದೆ ಎಂಬುದನ್ನು ಮತ್ತೆ ಹೈಕಮಾಂಡ್ ಮುಂದೆ ಸಾಬೀತು ಮಾಡಲು ಹೊರಟಿದ್ದಾರೆ. ಚುನಾವಣೆ ಮುಗಿದರೂ ಸಿದ್ದರಾಮಯ್ಯ ಪರವಾಗಿ ಹಾಸನದಲ್ಲಿ ಬೃಹತ್ ಅಹಿಂದ ಸಮಾವೇಶ ನಡೆಸಲು ಕಾಂಗ್ರೆಸ್ ಮುಂದಾಗಿದೆ.

ಇದನ್ನೂ ಓದಿ: ಉಪಚುನಾವಣೆ ಫಲಿತಾಂಶ: ಬಿಜೆಪಿ ಸೋಲಿಗೆ ಕಾರಣವಾಯ್ತು ಸ್ಥಳೀಯ ನಾಯಕತ್ವ ಕೊರತೆ, ಒಳಜಗಳ, ತಪ್ಪು ಲೆಕ್ಕಾಚಾರ

ಉಪಚುನಾವಣೆ ಫಲಿತಾಂಶವನ್ನೇ ಮುಂದಿಟ್ಟುಕೊಂಡು ಸಿದ್ದರಾಮಯ್ಯ ಅತ್ಯಾಪ್ತರು ಹಾಸನದಲ್ಲಿ ಬೃಹತ್ ಸಮಾವೇಶ ಮಾಡಲಿದ್ದಾರೆ. ಈ ಮೂಲಕ ತಮ್ಮ ಸ್ಥಾನಕ್ಕೆ ಕುಂದು ಬರದಂತೆ ಸಿದ್ದರಾಮಯ್ಯ ನೋಡಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಚುನಾವಣೆ ಫಲಿತಾಂಶ ಸಂಬಂಧಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
‘ಅಂಡಮಾನ್’ ಹಾಡನ್ನು ರೀ-ಕ್ರಿಯೇಟ್ ಮಾಡಿದ ಶಿವಣ್ಣ-ನಿವೇದಿತಾ
‘ಅಂಡಮಾನ್’ ಹಾಡನ್ನು ರೀ-ಕ್ರಿಯೇಟ್ ಮಾಡಿದ ಶಿವಣ್ಣ-ನಿವೇದಿತಾ
ವಿರೋಧ ಯಾರದ್ದೂ ಇಲ್ಲ, ಸಂದೇಹಗಳನ್ನು ಮಾತ್ರ ವ್ಯಕ್ತಪಡಿಸಿದ್ದಾರೆ: ರಾಜಣ್ಣ
ವಿರೋಧ ಯಾರದ್ದೂ ಇಲ್ಲ, ಸಂದೇಹಗಳನ್ನು ಮಾತ್ರ ವ್ಯಕ್ತಪಡಿಸಿದ್ದಾರೆ: ರಾಜಣ್ಣ
ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ