AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವಿಎಂನಲ್ಲಿ ಭದ್ರವಾಯ್ತು ಮಿನಿ ಕದನದ ಅಭ್ಯರ್ಥಿಗಳ ಭವಿಷ್ಯ! ದಾವಣಗೆರೆ ದಕ್ಷಿಣದಲ್ಲಿ ಗೆಲ್ಲೋದ್ಯಾರು? ಬಾಗಲ‘ಕೋಟೆ’ ಯಾರಿಗೆ?

Karnataka By Election: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಯ ಮತದಾನ ಮುಕ್ತಾಯವಾಗಿದ್ದು, ಸರಾಸರಿ ಶೇ 68ರಷ್ಟು ಮತದಾನ ದಾಖಲಾಗಿದೆ. ಹಣ ಮತ್ತು ಕೋಳಿ ಹಂಚಿಕೆಯಂತಹ ಗಂಭೀರ ಆರೋಪಗಳ ನಡುವೆ ಅಭ್ಯರ್ಥಿಗಳ ಭವಿಷ್ಯ ಈಗ ಇವಿಎಂ ಸೇರಿದ್ದು, ಮೇ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಇವಿಎಂನಲ್ಲಿ ಭದ್ರವಾಯ್ತು ಮಿನಿ ಕದನದ ಅಭ್ಯರ್ಥಿಗಳ ಭವಿಷ್ಯ! ದಾವಣಗೆರೆ ದಕ್ಷಿಣದಲ್ಲಿ ಗೆಲ್ಲೋದ್ಯಾರು? ಬಾಗಲ‘ಕೋಟೆ’ ಯಾರಿಗೆ?
ಇವಿಎಂನಲ್ಲಿ ಭದ್ರವಾಯ್ತು ಮಿನಿ ಕದನದ ಅಭ್ಯರ್ಥಿಗಳ ಭವಿಷ್ಯ!Image Credit source: tv9
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Apr 10, 2026 | 6:59 AM

Share

ಬೆಂಗಳೂರು, ಏಪ್ರಿಲ್ 10: ರಾಜ್ಯದ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ (Karnataka Bypolls 2026) ಮತದಾನ ಗುರುವಾರ ಮುಕ್ತಾಯಗೊಂಡಿದೆ. ಕಳೆದ 15 ದಿನಗಳಿಂದ ನಡೆದ ಅಬ್ಬರದ ಪ್ರಚಾರಕ್ಕೆ ತೆರೆಬಿದ್ದಿದ್ದು, ಮತದಾನವೂ ಮುಗಿದಿದೆ. ಮತದಾರ ಪ್ರಭು ತನ್ನ ನಿರ್ಧಾರವನ್ನು ಮತಯಂತ್ರದಲ್ಲಿ ದಾಖಲಿಸಿದ್ದಾಗಿದೆ. ಎರಡೂ ಕ್ಷೇತ್ರಗಳಲ್ಲಿ ಬಹುತೇಕ ಸಮಾನ ಪ್ರಮಾಣದ ಮತದಾನವಾಗಿದೆ. ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರವಾಗಿದೆ.

ಮತದಾನದ ಶೇಕಡಾವಾರು ವಿವರ

  • ದಾವಣಗೆರೆ ದಕ್ಷಿಣ: ಶೇ 68.55 ರಷ್ಟು ಮತದಾನ ದಾಖಲಾಗಿದೆ.
  • ಬಾಗಲಕೋಟೆ: ಶೇ 68.73 ರಷ್ಟು ಮತದಾನವಾಗಿದೆ.

ಹಣ ಮತ್ತು ಕೋಳಿ ಹಂಚಿಕೆ ಆರೋಪ

ಮತದಾನದ ನಡುವೆಯೇ ಮತದಾರರಿಗೆ ಆಮಿಷ ಒಡ್ಡಿದ ಹಲವು ಪ್ರಕರಣಗಳು ವರದಿಯಾಗಿವೆ. ಬಾಗಲಕೋಟೆಯ ರಾಜೀವ್ ಗಾಂಧಿ ಕಾಲೋನಿಯಲ್ಲಿ ಜಾಫರ್ ಬೇಫಾರಿ ಎಂಬಾತ ಹಣ ಹಂಚುತ್ತಿದ್ದ ವಿಡಿಯೋ ವೈರಲ್ ಆಗಿದ್ದು, ನವನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಾಂಬೆ ಕಾಲೋನಿಯಲ್ಲಿ ಮಹಿಳೆಯೊಬ್ಬರು ತನಗೆ ಕಾಂಗ್ರೆಸ್‌ನವರು 500 ರೂ. ನೀಡಿದ್ದಾರೆ ಎಂದು ಹಣ ಪ್ರದರ್ಶಿಸಿದ್ದು ಚರ್ಚೆಗೆ ಗ್ರಾಸವಾಗಿದೆ. ಇತ್ತ ಹಳೇಪೇಟೆಯಲ್ಲಿ ಹಣ ಹಂಚಲು ಮನೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿ ಕಾರ್ಯಕರ್ತರು ಹೊರಗಿನಿಂದ ಲಾಕ್ ಮಾಡಿದ್ದರೂ, ಅವರು ಹಿಂಬಾಗಿಲಿನಿಂದ ಎಸ್ಕೇಪ್ ಆಗಿದ್ದಾರೆ.

ಇನ್ನು ದಾವಣಗೆರೆಯಲ್ಲಿ ವಿಭಿನ್ನ ಆಮಿಷದ ಆರೋಪ ಕೇಳಿಬಂದಿದೆ. ಎಸ್‌ಪಿಎಸ್ ನಗರದಲ್ಲಿ ಹಣ ಹಂಚಿಕೆಯ ವಿಡಿಯೋ ವೈರಲ್ ಆಗಿದ್ದರೆ, ಮತ್ತೊಂದೆಡೆ ಕಾಂಗ್ರೆಸ್‌ನವರು ಮತಕ್ಕಾಗಿ ‘ಕೋಳಿ’ ಹಂಚಿದ್ದಾರೆ ಎಂದು ಬಾಲಕರು ಹೇಳುತ್ತಿರುವ ವಿಡಿಯೋವನ್ನು ಬಿಜೆಪಿ ಮುಖಂಡ ವಿನಯ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆ ಉಪಚುನಾವಣೆ: ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!

ಈ ಎಲ್ಲಾ ಜಿದ್ದಾಜಿದ್ದಿಗಳ ನಡುವೆ, ಮೇ 4ರಂದು ಫಲಿತಾಂಶ ಹೊರಬೀಳಲಿದೆ.

ವರದಿ: ಬಸವರಾಜ್ ದೊಡ್ಮನಿ, ರವಿಮೂಕಿ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​