AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಆರಂಭವಾಗಲಿದೆ ಕೃಷಿ ಭಾಗ್ಯ ಯೋಜನೆ: ಸಚಿವ ಸಂಪುಟ ಮಹತ್ವದ ನಿರ್ಧಾರ

2023-24ನೇ ಸಾಲಿನಡಿ 24 ಜಿಲ್ಲೆಗಳ 106 ತಾಲೂಕಿನಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಕೃಷಿ ಭಾಗ್ಯ ಯೋಜನೆ ಜಾರಿಗೆ ಸಂಪುಟದಲ್ಲಿ ಅನುಮೋದನೆ ಪಡೆಯಲಾಗಿದೆ ಎಂದು ಸಚಿವ ಹೆಚ್‌ಕೆ ಪಾಟೀಲ್ ಮಾಹಿತಿ ನೀಡಿದರು.

ಮತ್ತೆ ಆರಂಭವಾಗಲಿದೆ ಕೃಷಿ ಭಾಗ್ಯ ಯೋಜನೆ: ಸಚಿವ ಸಂಪುಟ ಮಹತ್ವದ ನಿರ್ಧಾರ
ಸಾಂದರ್ಭಿಕ ಚಿತ್ರ
ಪ್ರಸನ್ನ ಗಾಂವ್ಕರ್​
| Updated By: Ganapathi Sharma|

Updated on:Nov 09, 2023 | 8:28 PM

Share

ಬೆಂಗಳೂರು, ನವೆಂಬರ್ 9: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ (Karnataka Cabinet Meet) ಗುರುವಾರ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು, ‘ಕೃಷಿ ಭಾಗ್ಯ (Krushi Bhagya)‘ ಯೋಜನೆ ಮತ್ತೆ ಪ್ರಾರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಸಂಪುಟ ಸಭೆಯ ಬಳಿಕ ಸಚಿವ ಹೆಚ್‌ಕೆ ಪಾಟೀಲ್ (HK Patil) ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, 2023-24ನೇ ಸಾಲಿನಡಿ 24 ಜಿಲ್ಲೆಗಳ 106 ತಾಲೂಕಿನಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಜಾರಿಗೆ ಸಂಪುಟದಲ್ಲಿ ಅನುಮೋದನೆ ಪಡೆಯಲಾಗಿದೆ ಎಂದರು.

ಪ್ರಧಾನಮಂತ್ರಿ ಕೃಷಿಸಿಂಚಾಯಿ ಯೋಜನೆ 5 ತಾಲೂಕಿನಲ್ಲಿ ಜಾರಿಗೆ ಒಪ್ಪಿಗೆ ನೀಡಲಾಗಿದೆ. 2025-26ನೇ ಸಾಲಿನ ವರೆಗೆ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅನುಷ್ಠಾನಗೊಳ್ಳಲಿದೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಒಟ್ಟು ಮೊತ್ತ 38 ಕೋಟಿ ರೂಪಾಯಿ ಆಗಿದೆ. ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಗೆ ವಿಮಾ ಕಂಪನಿ ನಿಗದಿ ಮಾಡಲಾಗಿದೆ. ಕ್ಲಸ್ಟರ್‌ವಾರು ವಿಮಾ ಸಂಸ್ಥೆಗಳ ನಿಗದಿಗೆ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

10 ಕ್ಲಸ್ಟರ್‌ಗಳಲ್ಲಿ ರಿಲಯನ್ಸ್ ಜನರಲ್ ಇನ್ಶುರೆನ್ಸ್, ಬಜಾಜ್ ಅಲಿಯನ್ಸ್, SBI ಜನರಲ್ ಇನ್ಶುರೆನ್ಸ್, ಯುನಿವರ್ಸಲ್ ಸೊಂಪೊ ಜನರಲ್ ಇನ್ಶುರೆನ್ಸ್, ಫ್ಯೂಚರ್ ಇನ್ಶುರೆನ್ಸ್ ಕಂಪನಿ ನಿಗದಿಗೊಳಿಸಿ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಪಾಟೀಲ್ ತಿಳಿಸಿದರು.

ಡಾ.ನಾಗಮಣಿ ಕಡ್ಡಾಯ ನಿವೃತ್ತಿಗೆ ಅನುಮೋದನೆ

ಡಾ. ನಾಗಮಣಿ ಕಡ್ಡಾಯ ನಿವೃತ್ತಿ ನಿರ್ಧಾರಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಲೋಕಾಯುಕ್ತ ಪೊಲೀಸರ ದಾಳಿ ವೇಳೆ ಡಾ. ನಾಗಮಣಿ ಸಿಕ್ಕಿಬಿದ್ದಿದ್ದರು.

ಈ ಮಧ್ಯೆ, ಲೋಕಾಯುಕ್ತ ಸಂಸ್ಥೆಗೆ ಗುತ್ತಿಗೆ ಆಧಾರದಲ್ಲಿ ಲೆಕ್ಕಾಧೀಕ್ಷಕರ ನೇಮಕ, ರಾಜ್ಯಪಾಲರ ಸಚಿವಾಲಯಕ್ಕೆ ಸರ್ಜನ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಡಾ.ನವೀನ್ ಕುಮಾರ್ ನೇಮಕಗೊಳಿಸಿ ನೇಮಕಗೊಳಿಸಿ ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ.

ಇದನ್ನೂ ಓದಿ: ಕರ್ನಾಟಕ ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆ ಇಲ್ಲ: ಸಂಪುಟದಲ್ಲಿ ನಡೆಯದ ಚರ್ಚೆ

ಸಚಿವ ಸಂಪುಟದ ಇತರ ನಿರ್ಣಯಗಳು

  1. ಕನಕಪುರ ತಾಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲು 10.38 ಕೋಟಿ ರೂ. ಅನುಮೋದನೆ (ಇನ್ಫೋಸಿಸ್ ಕಂಪನಿ ವತಿಯಿಂದ ಸಿಎಸ್ಆರ್ ಫಂಡ್ ನಿಂದ ನಿರ್ಮಿಸಿರುವ ಕನಕಪುರದ ತಾಯಿ ಆಸ್ಪತ್ರೆ)
  2. ಮಹತ್ವಾಕಾಂಕ್ಷೆ ತಾಲೂಕುಗಳ 73 ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಲ್ಲಿ ಹಾಗೂ 50 ಆದರ್ಶ ಶಾಲೆಗಳಲ್ಲಿ 20 ಕೋಟಿ ವೆಚ್ಚದಲ್ಲಿ ಆವಿಷ್ಕಾರ ಇನ್ನೋವೇಟಿವ್ ಲ್ಯಾಬ್ ಗಳ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ
  3. ಸಂವಿಧಾನ ದಿನಾಚರಣೆ ಸಂವಿಧಾನ ಮತ್ತು ರಾಷ್ಟ್ರೀಯ ಏಕತೆ ಸಮಾವೇಶವಾಗಿ ಆಚರಣೆಗೆ 18 ಕೋಟಿ ರೂ.
  4. ವಾಯುವ್ಯ ಸಾರಿಗೆಯಲ್ಲಿ16.20 ಕೋಟಿ ರೂ. ವೆಚ್ಚದಲ್ಲಿ 45 ಬಸ್ ಗಳ ಖರೀದಿಗೆ ಅನುಮೋದನೆ
  5. ಹುಬ್ಬಳ್ಳಿ ಬಿ.ಆರ್.ಟಿಗೆ 45 ಕೋಟಿ ರೂ. ವೆಚ್ಚದಲ್ಲಿ 100 ಬಸ್ ಖರೀದಿಗೆ ಅನುಮೋದನೆ
  6. ಕರ್ನಾಟಕ ಜನನ ಮರಣ ನೋಂದಣಿ ಕಾಯ್ದೆ – 2023 ನಿಯಮಗಳಿಗೆ ತಿದ್ದುಪಡಿಗೆ ಒಪ್ಪಿಗೆ
  7. ಪೋಷಣ್ ಅಭಿಯಾನಕ್ಕೆ 26.60 ಕೋಟಿ ರೂ. ವೆಚ್ಚದಲ್ಲಿ ಉಪಕರಣಗಳ ಖರೀದಿ
  8. ಗ್ರೋತ್ ಮಾನಿಟರಿಂಗ್ ಡಿವೈಸಸ್ ಖರೀದಿಗೆ ಅನುಮೋದನೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:18 pm, Thu, 9 November 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?