Sign In

By signing in or creating an account, you agree with Associated Broadcasting Company's Terms & Conditions and Privacy Policy.

Milk Price Hike: ನಂದಿನಿ ಹಾಲಿನ ದರ ಆಗಸ್ಟ್ 1ರಿಂದ 3 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ

ಹಾಲು ಉತ್ಪಾದಕರ ಬೇಡಿಕೆಗಳನ್ನು ಪರಿಗಣಿಸಿ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಭೆಯ ನಂತರ ಸಚಿವ ಹೆಚ್​ಕೆ ಪಾಟೀಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Milk Price Hike: ನಂದಿನಿ ಹಾಲಿನ ದರ ಆಗಸ್ಟ್ 1ರಿಂದ 3 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ
ನಂದಿನಿ ಹಾಲು (ಸಾಂದರ್ಭಿಕ ಚಿತ್ರ)
Follow us
Ganapathi Sharma
|

Updated on:Jul 28, 2023 | 3:11 PM

ಬೆಂಗಳೂರು: ನಂದಿನಿ ಹಾಲಿನ ದರವನ್ನು ಆಗಸ್ಟ್ 1 ರಿಂದ ಲೀಟರ್‌ಗೆ ಮೂರು ರೂಪಾಯಿಗಳಷ್ಟು ಹೆಚ್ಚಿಸಲು ಕರ್ನಾಟಕ ಸಚಿವ ಸಂಪುಟ (Karnataka Cabinet) ಗುರುವಾರ ರಾತ್ರಿ ನಿರ್ಧರಿಸಿದೆ. ಕರ್ನಾಟಕ ಹಾಲು ಒಕ್ಕೂಟ(KMF) ಉತ್ಪನ್ನಗಳ ಬ್ರಾಂಡ್ ಆಗಿರುವ ನಂದಿನಿ ಹಾಲಿನ ದರ ಹೆಚ್ಚಳದ ಬಗ್ಗೆ ಇತ್ತೀಚೆಗಷ್ಟೇ ಕೆಎಂಎಫ್​ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಸೇರಿದಂತೆ ಪ್ರಮುಖರು ಚರ್ಚೆ ನಡೆಸಿ ಅಂತಿಮ ತೀರ್ಮಾನಕ್ಕೆ ಬಂದಿದ್ದರು. ಇದೀಗ ದರ ಹೆಚ್ಚಳ ಪ್ರಸ್ತಾವನೆಗೆ ಸಚಿವ ಸಂಪುಟದ ಅನುಮೋದನೆ ಪಡೆಯಲಾಗಿದೆ.

ಹಾಲು ಉತ್ಪಾದಕರ ಬೇಡಿಕೆಗಳನ್ನು ಪರಿಗಣಿಸಿ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಭೆಯ ನಂತರ ಸಚಿವ ಹೆಚ್​ಕೆ ಪಾಟೀಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಹಾಲಿನ ದರ ಹೆಚ್ಚಳ ಕ್ರಮವನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕದಲ್ಲಿ ಕಡಿಮೆ ದರದಲ್ಲಿ ಹಾಲು ಮಾರಾಟವಾಗುತ್ತಿದೆ. ನಮ್ಮ ರಾಜ್ಯಕ್ಕೆ ಹೋಲಿಸಿದರೆ ಇತರ ರಾಜ್ಯಗಳಲ್ಲಿ ಹಾಲು ಹೆಚ್ಚಿನ ದರಕ್ಕೆ ಮಾರಾಟವಾಗುತ್ತಿದೆ ಎಂದು ಶುಕ್ರವಾರ ಹೇಳಿದ್ದಾರೆ.

ಪರಿಷ್ಕೃತ ದರ ಲೆಕ್ಕಾಚಾರದ ಪ್ರಕಾರ, ಲೀಟರ್‌ಗೆ 39 ರೂ. ಬೆಲೆಯ ಹಾಲು (ಟೋನ್ಡ್) ಆಗಸ್ಟ್ 1ರಿಂದ 42 ರೂ.ಗೆ ಮಾರಾಟವಾಗಲಿದೆ. ಉಳಿದಂತೆ ಲೀಟರ್‌ಗೆ 54 ರಿಂದ 56 ರೂ.ವರೆಗೆ ಮಾರಾಟವಾಗುತ್ತದೆ. ತಮಿಳುನಾಡಿನಲ್ಲಿ ಲೀಟರ್‌ ಹಾಲಿಗೆ 44 ರೂ.,” ಎಂದು ಮುಖ್ಯಮಂತ್ರಿ ಹೇಳಿದರು.

ಇದನ್ನೂ ಓದಿ: CM in Bengaluru: ಹಾಲಿನ ದರ ಹೆಚ್ಚಿಸುವ ನಿರ್ಧಾರ ಕೆಎಂಎಫ್ ತೆಗೆದುಕೊಂಡಿದ್ದು: ಸಿದ್ದರಾಮಯ್ಯ, ಮುಖ್ಯಮಂತ್ರಿ

ಈ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, “ನಾವು ರೈತರಿಗೆ (ಹಾಲು ಉತ್ಪಾದಕರಿಗೆ) ಹಣವನ್ನು ನೀಡಬೇಕಾಗಿದೆ, ಇಂದು ಇಡೀ ದೇಶದಲ್ಲಿ ಇದು (ಟೋನ್ಡ್ ಹಾಲು) ಲೀಟರ್‌ಗೆ 56 ರೂ. ನಮ್ಮ ರಾಜ್ಯದಲ್ಲಿ ಜನರು ಪಡೆಯುತ್ತಿದ್ದಾರೆ. ಕಡಿಮೆ ಬೆಲೆ.”

ರೈತರಿಗೆ ನೆರವಾಗುವ ಉದ್ದೇಶದಿಂದ ಹಾಲಿನ ದರವನ್ನು ಮೂರು ರೂಪಾಯಿಗಳಷ್ಟು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಅವರು ಹೇಳಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 3:10 pm, Fri, 28 July 23

ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್