AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತು ಕೇಂದ್ರಕ್ಕೆ ಶಿಫಾರಸು ಮಾಡಲು ಸಂಪುಟ ಅಸ್ತು

ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿಯನ್ನು ಕಲ್ಪಿಸಲಿ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತು ಕೇಂದ್ರಕ್ಕೆ ಶಿಫಾರಸು ಮಾಡಲು ಸಂಪುಟ ಅಸ್ತು
ಸಿದ್ದರಾಮಯ್ಯ, ಡಿಕೆ ಶಿವಕುಮಾರ್
Digi Tech Desk
| Edited By: |

Updated on:Jan 18, 2024 | 4:46 PM

Share

ಬೆಂಗಳೂರು, (ಜನವರಿ 18): ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿಯನ್ನು ಕಲ್ಪಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಅಸ್ತು ಎಂದಿದೆ. ಇಂದು(ಜನವರಿ 18) ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಟಪುದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಂಪುಟ ಸಭೆ ಬಳಿಕ ಎಚ್​ಕೆ ಪಾಟೀಲ್ ಹಾಗೂ ಹೆಚ್​ಸಿ ಮಹಾದೇವಪ್ಪ ಜಂಟಿ ಸುದ್ದಿಗೋಷ್ಠಿ ನಡೆಸಿ ನ್ಯಾಯಮೂರ್ತಿ ಸದಾಶಿವ ಆಯೋಗದ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರದಿ ಬಗ್ಗೆ ವಿವರಿಸಿದರು.

ನ್ಯಾಯಮೂರ್ತಿ ಸದಾಶಿವ ಆಯೋಗದ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರದಿ ಮೇರೆಗೆ ಒಳ ಮೀಸಲಾತಿಗಾಗಿ ಸಂವಿಧಾನದ ಅನುಚ್ಛೇದ 341ಕ್ಕೆ ತಿದ್ದುಪಡಿ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡಲು ಸಿದ್ದರಾಮಯ್ಯ ನೇತೃತ್ವದ ಸಂಪುಟ ನಿರ್ಧರಿಸಿದ್ದು, ಸಂವಿಧಾನಬದ್ಧವಾಗಿ ರಾಜ್ಯಗಳಿಗೆ ಅಧಿಕಾರ ಕೊಡಲು ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ: ಫೆ.12ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ, ಫೆಬ್ರವರಿ 16ರಂದು ಬಜೆಟ್ ಮಂಡನೆ

ಇನ್ನು ಸಂಪುಟ ಸಭೆ ಮುಗಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರಾದ ಎಚ್​ಕೆ ಪಾಟೀಲ್ ಹಾಗೂ ಡಾ ಹೆಚ್​ಸಿ ಮಹಾದೇವಪ್ಪ, 2 ದಶಕಗಳಿಂದ ದಲಿತರ ಒಳ‌ಪಂಗಡಗಳು ಅನ್ಯಾಯ ಆಗಿದೆ ಒಳಮೀಸಲಾತಿ ಬೇಕು ಎಂದು ಕೇಳುತ್ತಿದ್ದರು. ಹೀಗಾಗಿ ನ್ಯಾ.ಸದಾಶಿವ ಆಯೋಗದ ವರದಿ ನೀಡಲು ಸರ್ಕಾರ ಕೇಳಿತ್ತು. ಸದಾಶಿವ ಆಯೋಗದ ವರದಿ ಅಸೆಂಬ್ಲಿಯಲ್ಲಿ ಪ್ಲೇಸ್ ಆಗಲೇ ಇಲ್ಲ. ಸದಾಶಿವ ಆಯೋಗದ ವರದಿಯನ್ನು ನಾವು ಅಧಿಕಾರಕ್ಕೆ ಬಂದಾಗ ಮಂಡನೆ ಮಾಡ್ತೀವಿ ಅಂತ ಪ್ರಣಾಳಿಕೆಯಲ್ಲಿ ಹಾಕಿದ್ದೆವು. ಬಿಜೆಪಿಯ ಸರ್ಕಾರ ತರಾತುರಿಯಲ್ಲಿ ಕಾನೂನು ಸಚಿಬರ ನೇತೃತ್ವದಲ್ಲಿ ಕ್ಯಾಬಿನೆಟ್ ಸಬ್ ಕಮಿಟಿ ಮಾಡಿದ್ದರು. ನ್ಯಾ.ಸದಾಶಿವ ಆಯೋಗದ ವರದಿ ಕಮಿಟಿ ಅಪ್ರಸ್ತುತ ಹಾಗೂ ಮುಕ್ತಾಯ ಆಗಿದೆ ಅಂತ ಕ್ಯಾಬಿನೆಟ್ ನಿರ್ಣಯ ಮಾಡಿದ್ರು ಎಂದು ಹೇಳಿದರು.

2011 ಜನಸಂಖ್ಯೆ ಆಧಾರದ ಮೇಲೆ ನ್ಯಾಯಮೂರ್ತಿ ನಾಗ ಮೋಹನ್ ದಾಸ್ ವರದಿ ನೀಡಲಾಗಿತ್ತು ಸಂವಿಧಾನದ ಆರ್ಟಿಕಲ್ 341ಕ್ಕೆ ಖಂಡ (3) ನ್ನು ಸೇರಿಸದೇ ಹೋದರೆ ಒಳ ಮೀಸಲಾತಿ ನೀಡಲು ಸಾಧ್ಯವಿಲ್ಲ. ಪಾರ್ಲಿಮೆಂಟ್ ಮೂಲಕವೇ ಇದು ಆಗಬೇಕು. ರಾಜ್ಯ ಸರ್ಕಾರ ಇದನ್ನು ಮಾಡಲು ಸಾಧ್ಯವೇ ಇಲ್ಲ. ರಿಜೆಕ್ಟ್ ಆಗಿರುವ ವರದಿಯನ್ನು ನಾವು ಕ್ಯಾಬಿನೆಟ್ ಗೆ ತರಲು ಸಾಧ್ಯವಿಲ್ಲ. 101 ಜಾತಿಗಳ ಹಿತ ಕಾಪಾಡಲು ಆರ್ಟಿಕಲ್ 341ಗೆ ತಿದ್ದುಪಡಿ ತನ್ನಿ ಎಂದು ಕೇಂದ್ರಕ್ಕೆ ಶಿಫಾರಸು ಮಾಡಿದ್ದೇವೆ. ಎಂದು ಹೇಳಿದರು.

ಕೇಂದ್ರದ ಅಂಗಳಕ್ಕೆ ಒಳಮೀಸಲಾತಿ

ಇದರೊಂದಿಗೆ ಒಳ ಮೀಸಲಾತಿ ಇದೀಗ ಕೇಂದ್ರ ಸರ್ಕಾರದ ಅಂಗಳಕ್ಕೆ ತಲುಪಿದೆ. ಹಿಂದೆ ಬಿಜೆಪಿ ಸರ್ಕಾರ ವರ್ಗೀಕರಣ ಮಾಡಿ ಆದೇಶ ಮಾಡಿತ್ತು. ಸದ್ಯ ಈ ವಿಚಾರ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದೆ. ಈಗ ಸಿದ್ದರಾಮಯ್ಯನವರ ಸರ್ಕಾರ ಕಾನೂನು ತಿದ್ದುಪಡಿ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡಿ ಕೈತೊಳೆದುಕೊಂಡಿದೆ. ಹೀಗಾಗಿ ಒಳ ಮೀಸಲಾತಿ ವಿವಾದ ಇದೀಗ ಕೇಂದ್ರದ ಅಂಗಳ ತಲುಪಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:33 pm, Thu, 18 January 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?