AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಹೊಸ ರೋಡ್​: ಏನಿದು ಬ್ಯುಸಿನೆಸ್ ಕಾರಿಡಾರ್?; ಮಾಹಿತಿ ಇಲ್ಲಿದೆ

ಬೆಂಗಳೂರಿನ ಟ್ರಾಫಿಕ್​ ಸಮಸ್ಯೆ ಮನಗಂಡು ಹೊಸ ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಹೆಸರಿನಲ್ಲಿ ನೂತನ ರೋಡ್​ ನಿರ್ಮಾಣವಾಗಲಿದ್ದು, ರಸ್ತೆಯ ಶೇಕಡಾ 65ರಷ್ಟು ಜಾಗವನ್ನು ಸಂಚಾರಕ್ಕೆ ಮತ್ತು ಉಳಿದ ಶೇ.35ರಷ್ಟು ಜಾಗವನ್ನು ಕಮರ್ಷಿಯಲ್​​ ಚಟುವಟಿಕೆಗಳಿಗೆ ಉಪಯೋಗಿಸಕೊಳ್ಳಲು ನಿರ್ಧರಿಸಲಾಗಿದೆ.

ಬೆಂಗಳೂರಿಗೆ ಹೊಸ ರೋಡ್​: ಏನಿದು ಬ್ಯುಸಿನೆಸ್ ಕಾರಿಡಾರ್?; ಮಾಹಿತಿ ಇಲ್ಲಿದೆ
ಬೆಂಗಳೂರಿಗೆ ಹೊಸ ರಸ್ತೆ. (ಸಾಂದರ್ಭಿಕ ಚಿತ್ರ)
ಪ್ರಸನ್ನ ಗಾಂವ್ಕರ್​
| Edited By: |

Updated on: Oct 16, 2025 | 5:48 PM

Share

ಬೆಂಗಳೂರು, ಅಕ್ಟೋಬರ್​ 16: ರಾಜಧಾನಿ ಬೆಂಗಳೂರಿನ ಟ್ರಾಫಿಕ್​ ಸಮಸ್ಯೆಗೆ ಮುಕ್ತಿ ಹಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದ್ದು, ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಹೆಸರಿನಲ್ಲಿ ಹೊಸ ರಸ್ತೆ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ. ರಸ್ತೆಯ ಶೇಕಡಾ 65ರಷ್ಟು ಜಾಗವನ್ನು ಸಂಚಾರಕ್ಕೆ ಮತ್ತು ಉಳಿದ ಶೇ.35ರಷ್ಟು ಜಾಗವನ್ನು ಕಮರ್ಷಿಯಲ್​​ ಚಟುವಟಿಕೆಗಳಿಗೆ ಉಪಯೋಗಿಸಕೊಳ್ಳಲು ನಿರ್ಧರಿಸಲಾಗಿದ್ದು, ಈ ರಸ್ತೆಯಲ್ಲಿ ಸಂಚರಿಸಲು ವಾಹನ ಸವಾರರು ಟೋಲ್​ ಕಟ್ಟಬೇಕಾಗುತ್ತೆ.

ಸಚಿವ ಸಂಪುಟ ಸಭೆ ಬಳಿಕ ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಬೆಂಗಳೂರು ಕಾರಿಡಾರ್ ವಿಚಾರವಾಗಿ ಮಹತ್ವದ ನಿರ್ಣಯ ಮಾಡಿದ್ದೇವೆ. ರಸ್ತೆಗಾಗಿ ಈ ಹಿಂದೆ 100 ಕಿಲೋ ಮೀಟರ್​ ನೋಟಿಫಿಕೇಷನ್​ ಆಗಿತ್ತು. ಬೆಂಗಳೂರಿನ ತುಮಕೂರು ರಸ್ತೆಯಿಂದ ಎಲೆಕ್ಟ್ರಾನಿಕ್ ಸಿಟಿವರೆಗೆ, ಅಲ್ಲಿಂದ ಮೈಸೂರು ರಸ್ತೆವರೆಗೆ ಪೆರಿಫೆರಲ್ ರಿಂಗ್ ರೋಡ್ ಎಂದಿದ್ದರು. ಆದರೆ ಆ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ. ಈಗ ಪರ್ಯಾಯ ರಸ್ತೆಯ ಅಗತ್ಯವಿದೆ. ಹೀಗಾಗಿ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಅಂತಾ ಮಾಡುತ್ತಿದ್ದೇವೆ. ಭೂಸ್ವಾಧೀನ ಪರಿಹಾರ ವಿಚಾರವಾಗಿ ಕಾಯ್ದೆಯಲ್ಲಿ ಅವಕಾಶ ಇರದ ಕಾರಣ ಭೂಮಾಲೀಕರಿಗೆ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ಕೊಡಬೇಕೆಂದು ನಿರ್ಧಾರ ಮಾಡಿದ್ದೇವೆ. ಪರಿಹಾರ ರೂಪದಲ್ಲಿ ಇದನ್ನು ನೀಡುತ್ತೇವೆ. ಎರಡು ವರ್ಷಗಳಲ್ಲಿ ಈ ಯೋಜನೆಯು ಪೂರ್ಣವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಡಿಸಿಎಂ ಡಿಕೆಶಿ ಹೇಳಿದ್ದೇನು?

ಯೋಜನೆಯ ಉದ್ದೇಶ

ಬೆಂಗಳೂರಿನ ಕೇಂದ್ರ ಭಾಗದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದು ಮತ್ತು ನಗರದ ಹೊರವಲಯದಲ್ಲಿ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವುದು ಈ ಯೋಜನೆಯ ಉದ್ದೇಶವಾಗಿದೆ. ತುಮಕೂರು ರಸ್ತೆ, ಬಳ್ಳಾರಿ ರಸ್ತೆ, ಹಳೆ ಮದ್ರಾಸ್ ರಸ್ತೆ, ಸರ್ಜಾಪುರ ರಸ್ತೆ, ಹೊಸೂರು ರಸ್ತೆ, ನೈಸ್ ರಸ್ತೆ ಮತ್ತು ಇತರ ನಗರ ಮೂಲ ಸೌಕರ್ಯಗಳಾದ ಮೆಟ್ರೋ, ಉಪನಗರ ರೈಲು ಮತ್ತು ಉಪಗ್ರಹ ಟೌನ್ ರಿಂಗ್ ರೋಡ್‌ಗೆ ಈ ರಸ್ತೆ ಸಂಪರ್ಕ ಕಲ್ಪಿಸಲಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ