AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್ಸಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಇನ್ಮುಂದೆ ಆಧಾರ್ ಬದಲಿಗೆ ಸ್ಮಾರ್ಟ್​ಕಾರ್ಡ್

ಕರ್ನಾಟಕ ಸಸಚಿವ ಸಂಪುಟವು ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಆಧಾರ್ ಬದಲಿಗೆ ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಣೆಗೆ ಅನುಮೋದನೆ ನೀಡಿದೆ. ಬೆಂಗಳೂರಿನ ರೇಸ್ ಕೋರ್ಸ್ ಕುಣಿಗಲ್‌ಗೆ ಸ್ಥಳಾಂತರ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಶೂ, ಸಾಕ್ಸ್ ನೀಡುವುದು, ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ವಿವರ ಇಲ್ಲಿದೆ.

ಬಸ್ಸಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಇನ್ಮುಂದೆ ಆಧಾರ್ ಬದಲಿಗೆ ಸ್ಮಾರ್ಟ್​ಕಾರ್ಡ್
ಸಾಂದರ್ಭಿಕ ಚಿತ್ರ
ಪ್ರಸನ್ನ ಗಾಂವ್ಕರ್​
| Edited By: |

Updated on: Feb 13, 2026 | 7:00 AM

Share

ಬೆಂಗಳೂರು, ಫೆಬ್ರವರಿ 13: ಕರ್ನಾಟಕ ಸಾರಿಗೆ ಬಸ್​ಗಳಲ್ಲಿ ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ ಪ್ರತಿನಿತ್ಯ ಲಕ್ಷಾಂತರ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ಈಗ ಆಧಾರ್ ಬದಲಿಗೆ ಶಕ್ತಿ ಯೋಜನೆಯಡಿ (Shakti Scheme) ಸ್ಮಾರ್ಟ್‌ ಕಾರ್ಡ್‌ (Smart Card) ವಿತರಣೆಗೆ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇದರ ಜತೆಗೆ, ಹಲವು ಮತ್ವದ ನಿರ್ಣಯಗಳನ್ನು ಕ್ಯಾಬಿನೆಟ್​​ನಲ್ಲಿ ಕೈಗೊಳ್ಳಲಾಗಿದೆ.

ಮಹಿಳೆಯರ ಉಚಿತ ಪ್ರಯಾಣಕ್ಕೆ 4 ಸಾರಿಗೆ ನಿಗಮಗಳು ಸ್ಮಾರ್ಟ್​ಕಾರ್ಡ್ ವಿತರಿಸಲಿವೆ. ಶಕ್ತಿ ಸ್ಮಾರ್ಟ್​ಕಾರ್ಡ್ ತೋರಿಸಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇದರೊಂದಿಗೆ, ಆಧಾರ್ ಕಾರ್ಡ್‌ ತೋರಿಸಿ ಉಚಿತವಾಗಿ ಪ್ರಯಾಣಿಸುವುದಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ.

ರೇಸ್​ಕೋರ್ಸ್ ಬೆಂಗಳೂರಿನಿಂದ ಕುಣಿಗಲ್​ಗೆ ಶಿಫ್ಟ್

ಬೆಂಗಳೂರಿನ ಪ್ರಸಿದ್ಧ ಸ್ಥಳಗಳಲ್ಲಿ ಒಂದಾದ ರೇಸ್ ಕೋರ್ಸ್ ಅಥವಾ ಟರ್ಫ್ ಕ್ಲಬ್​ ಸ್ಥಳಾಂತರಕ್ಕೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್‌ನ ಸ್ಟಡ್‌ ಫಾರ್ಮ್‌ಗೆ ಟರ್ಫ್ ಕ್ಲಬ್ ಶಿಫ್ಟ್ ಆಗಲಿದೆ. ಕ್ಲಬ್ ಜಾಗವನ್ನು ಹಾಗೇ ಉಳಿಸಿಕೊಳ್ಳಲು ಕ್ಯಾಬಿನೆಟ್‌ನಲ್ಲಿ ನಿರ್ಧರಿಸಲಾಗಿದೆ. ಲೀಸ್ ಅವಧಿ ಮುಕ್ತಾಯ, ಬಾಡಿಗೆಯೂ ಪರಿಷ್ಕರಣೆ ಆಗಿರಲಿಲ್ಲ. ಹೀಗಾಗಿ ಬೆಂಗಳೂರಿನಿಂದ ರೇಸ್ ಕೋರ್ಸ್ ಸ್ಥಳಾಂತರ ಮಾಡಲಿದ್ದಾರೆ.

ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಶೂ, 2 ಜೊತೆ ಸಾಕ್ಸ್

ಅಲ್ಲದೇ, ಸರ್ಕಾರಿ ಶಾಲೆಗಳಲ್ಲಿ 1-10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಒಂದು ಜೊತೆ ಶೂ, 2 ಜೊತೆ ಸಾಕ್ಸ್ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ. ವಿದ್ಯಾವಿಕಾಸ ಯೋಜನೆಯ ಅಡಿ 2026-27 ನೇ ಸಾಲಿಗೆ ಉಚಿತ ಶೂ, ಸಾಕ್ಸ್ ನೀಡಲು ನಿರ್ಧರಿಸಲಾಗಿದೆ.

ಕ್ಯಾಬಿನೆಟ್​ನಲ್ಲಿ ಕೈಗೊಂಡ ಇತರ ನಿರ್ಧಾರಗಳು

ಶಿಷ್ಟಾಚಾರ ನಿಯಮಗಳಿಗೆ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಗಿದೆ. ಅಂದರೆ, ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡುವ ನಿಯಮ ಜಾರಿಗೆ ತರಲಾಗಿದೆ. ನ್ಯಾಯಾಲಯಗಳ ಕಟ್ಟಡ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರಕ್ಕೆ ಅನುಮೋದನೆ ನೀಡಲಾಗಿದೆ. ಬಳ್ಳಾರಿ ವಿಮ್ಸ್ ಆವರಣದಲ್ಲಿ 200 ಬೆಡ್ ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸುವುದು, 1777 ಎಕರೆ ಭೂಮಿ ‘ಶಾಶ್ವತ ವಿಶೇಷ’ ಕೃಷಿವಲಯ ಎಂದು ಘೋಷಿಸಲಾಗಿದೆ. ಇದರಲ್ಲಿ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1777 ಎಕರೆ ಜಮೀನು ಶಾಶ್ವತ ವಿಶೇಷ ಕೃಷಿವಲಯ ಆಗಿರಲಿದೆ. ತಿಕೋಟಾದಲ್ಲಿ ದ್ರಾಕ್ಷಾರಸ ಶೀತಲೀಕರಣ ಘಟಕ ನಿರ್ಮಾಣಕ್ಕೆ

ಇದನ್ನೂ ಓದಿ: ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್​​​ಗೆ ದಿನಾಂಕ ನಿಗದಿ

ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿರುವ SIR ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗಿದೆ. ಕೆಲವು ಕಡೆ ಯಾವ ರೀತಿಯಲ್ಲಿ ಏನ್ ಮಾಡ್ತಿದ್ದಾರೆ ಅದೆಲ್ಲದರ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ಕಾನೂನು ಇಲಾಖೆ ಸಮಗ್ರವಾಗಿಯೇ ಅಧ್ಯಯನ ಮಾಡಿ ಮತ್ತೆ ಸಂಪುಟದಲ್ಲಿ ಚರ್ಚೆ ನಡೆಸುವ ಬಗ್ಗೆ ನಿರ್ಧಾರ ಮಾಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು