AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ಸಂಪುಟ ಸೇರಲು ಆಕಾಂಕ್ಷಿಗಳ ಭರ್ಜರಿ ಲಾಬಿ, ದೆಹಲಿ ದಂಡಯಾತ್ರೆ: ಸ್ಪೀಕರ್ ಆಗಲು ನಾಯಕರ ಹಿಂದೇಟು

ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ಸರ್ಕಸ್ ಜೋರಾಗಿದೆ. ಸಚಿವ ಸ್ಥಾನಕ್ಕಾಗಿ ಶಾಸಕರು ದೆಹಲಿಗೆ ಲಗ್ಗೆ ಇಟ್ಟಿದ್ದರೆ, ಇತ್ತ ಸಿದ್ದರಾಮಯ್ಯ ಆಪ್ತ ನಾಯಕರಿಗಾಗಿ 3 ಡಿಸಿಎಂ ಹುದ್ದೆಗಳ ಸೃಷ್ಟಿಗೆ ಹೈಕಮಾಂಡ್ ಮುಂದೆ ಪಟ್ಟು ಹಿಡಿದಿದ್ದಾರೆ.

ಡಿಕೆ ಶಿವಕುಮಾರ್ ಸಂಪುಟ ಸೇರಲು ಆಕಾಂಕ್ಷಿಗಳ ಭರ್ಜರಿ ಲಾಬಿ, ದೆಹಲಿ ದಂಡಯಾತ್ರೆ: ಸ್ಪೀಕರ್ ಆಗಲು ನಾಯಕರ ಹಿಂದೇಟು
ಡಿಕೆ ಶಿವಕುಮಾರ್
ಪ್ರಸನ್ನ ಗಾಂವ್ಕರ್​
| Edited By: |

Updated on: Jun 02, 2026 | 6:56 AM

Share

ಬೆಂಗಳೂರು, ಜೂನ್ 2: ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗುತ್ತಿದ್ದಂತೆಯೇ, ಇತ್ತ ಸಚಿವ ಸಂಪುಟ ಸೇರಲು ಆಕಾಂಕ್ಷಿ ಶಾಸಕರ ಭರ್ಜರಿ ಲಾಬಿ ಮತ್ತು ಕಸರತ್ತು ಶುರುವಾಗಿದೆ. ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಕಾಂಗ್ರೆಸ್ (Congress) ಶಾಸಕರು ಹಾಗೂ ಎಂಎಲ್‌ಸಿಗಳು ದೆಹಲಿಗೆ ದಂಡಯಾತ್ರೆ ನಡೆಸುತ್ತಿದ್ದು, ಹೈಕಮಾಂಡ್ ನಾಯಕರ ಕದ ತಟ್ಟುತ್ತಿದ್ದಾರೆ. ಪ್ರಾದೇಶಿಕ ಮತ್ತು ಸಮುದಾಯವಾರು ಲೆಕ್ಕಾಚಾರಗಳ ನಡುವೆ ಸಚಿವ ಸಂಪುಟ ರಚನೆ ಹೈಕಮಾಂಡ್‌ಗೆ ಕಬ್ಬಿಣದ ಕಡಲೆಯಾಗಿ ಮಾರ್ಣಪಟ್ಟಿದೆ. ಮತ್ತೊಂದೆಡೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ತಂತಮ್ಮ ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸಲು ದೆಹಲಿ ಮಟ್ಟದಲ್ಲಿ ತೀವ್ರ ತಂತ್ರಗಾರಿಕೆ ನಡೆಸುತ್ತಿದ್ದಾರೆ.

ಮುಖ್ಯಾಂಶಗಳು

  • ಡಿಕೆ ಶಿವಕುಮಾರ್ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ದೆಹಲಿಯಲ್ಲಿ ಬೀಡುಬಿಟ್ಟ ಹಿರಿಯ ಮತ್ತು ಹೊಸ ಶಾಸಕರ ದಂಡು.
  • ಜಿ. ಪರಮೇಶ್ವರ್, ಎಂ.ಬಿ. ಪಾಟೀಲ್ ಮತ್ತು ಜಮೀರ್ ಅಹ್ಮದ್​ಗೆ ಡಿಸಿಎಂ ಹುದ್ದೆ ನೀಡುವಂತೆ ಸಿದ್ದರಾಮಯ್ಯ ಪಟ್ಟು.
  • ಸ್ಪೀಕರ್ ಸ್ಥಾನ ಅಲಂಕರಿಸಲು ಹಿರಿಯ ನಾಯಕರ ನಿರಾಕರಣೆ.

ಸಚಿವ ಸ್ಥಾನಕ್ಕಾಗಿ ಹಿರಿಯ-ಕಿರಿಯ ಶಾಸಕರ ಟವೆಲ್

ಹಿಂದಿನ ಸಂಪುಟದಲ್ಲಿದ್ದ ಕೆ.ಹೆಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ಹೆಚ್.ಕೆ. ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್, ಚಲುವರಾಯಸ್ವಾಮಿ ಮತ್ತೊಮ್ಮೆ ಸಚಿವರಾಗಲು ತೆರೆಮರೆಯ ಕಸರತ್ತು ನಡೆಸುತ್ತಿದ್ದಾರೆ. ತಮ್ಮ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ್ದೇವೆ ಎಂದು ಇವರು ಹೈಕಮಾಂಡ್ ಮುಂದೆ ವಾದ ಮಂಡಿಸುತ್ತಿದ್ದಾರೆ. ಇವರೊಂದಿಗೆ ಎನ್.ಎ. ಹ್ಯಾರಿಸ್, ಬಿ.ಆರ್. ಪಾಟೀಲ್, ಪ್ರದೀಪ್ ಈಶ್ವರ್, ರಿಜ್ವಾನ್ ಅರ್ಷದ್, ಡಿ. ರವಿಶಂಕರ್, ಹಂಪನಗೌಡ ಬಾದರ್ಲಿ, ಬಸವರಾಜ ರಾಯರೆಡ್ಡಿ, ಮಾಗಡಿ ಶಾಸಕ ಬಾಲಕೃಷ್ಣ ಹಾಗೂ ಎಸ್‌.ಆರ್. ಶ್ರೀನಿವಾಸ್ ಸೇರಿದಂತೆ ದೊಡ್ಡ ಶಾಸಕರ ಪಡೆಯೇ ಮಂತ್ರಿಗಿರಿಗೆ ಪಟ್ಟು ಹಿಡಿದಿದೆ. ಇನ್ನು ಎಂಎಲ್‌ಸಿಗಳ ಕೋಟಾದಡಿ ಬಿ.ಕೆ. ಹರಿಪ್ರಸಾದ್, ಸಲೀಂ ಅಹ್ಮದ್ ಹಾಗೂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸಚಿವ ಸ್ಥಾನ ಬಹುತೇಕ ಖಚಿತ ಎನ್ನಲಾಗುತ್ತಿದ್ದು, ಹೈಕಮಾಂಡ್ ಮಟ್ಟದಲ್ಲಿ ಚರ್ಚೆಗಳು ಬಿರುಸಾಗಿವೆ.

ಮೂವರು ಡಿಸಿಎಂ ಹುದ್ದೆಗೆ ಸಿದ್ದರಾಮಯ್ಯ ಒತ್ತಡ ತಂತ್ರ

ಸಚಿವ ಸ್ಥಾನದ ಆಯ್ಕೆ ಒಂದೆಡೆಯಾದರೆ, ಉಪಮುಖ್ಯಮಂತ್ರಿ (DCM) ಹುದ್ದೆಗಳ ಸೃಷ್ಟಿ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ತಮ್ಮ ಬಣದ ಪ್ರಮುಖ ನಾಯಕರಾದ ದಲಿತ ಸಮುದಾಯದ ಡಾ. ಜಿ. ಪರಮೇಶ್ವರ್, ಲಿಂಗಾಯತ ಸಮುದಾಯದ ಎಂ.ಬಿ. ಪಾಟೀಲ್ ಹಾಗೂ ಅಲ್ಪಸಂಖ್ಯಾತ ಕೋಟಾದಡಿ ಜಮೀರ್ ಅಹ್ಮದ್ ಖಾನ್ ಅವರಿಗೆ ಡಿಸಿಎಂ ಪಟ್ಟ ನೀಡಲೇಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದಾರೆ. ಇತ್ತ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆಯೂ ಕಣ್ಣಿಟ್ಟಿರುವ ಸತೀಶ್ ಜಾರಕಿಹೊಳಿ ಮತ್ತು ಶಿವರಾಜ್ ತಂಗಡಗಿ ಅವರು ಹೈಕಮಾಂಡ್ ಜವಾಬ್ದಾರಿ ನೀಡಿದರೆ ನಿಭಾಯಿಸಲು ಸಿದ್ಧರಾಗಿರುವುದಾಗಿ ತಿಳಿಸಿದ್ದಾರೆ.

ಸ್ಪೀಕರ್ ಪಟ್ಟಕ್ಕೆ ನಾಯಕರ ಹಿಂದೇಟು

ಸಂಪುಟ ಕಸರತ್ತಿನ ನಡುವೆ ವಿಧಾನಸಭೆ ಸ್ಪೀಕರ್ ಆಯ್ಕೆ ಮತ್ತಷ್ಟು ಕಗ್ಗಂಟಾಗಿದೆ. ಹಿರಿಯ ಶಾಸಕರು ಯಾರೂ ಸ್ಪೀಕರ್ ಸ್ಥಾನ ಅಲಂಕರಿಸಲು ಒಪ್ಪುತ್ತಿಲ್ಲ ಎನ್ನಲಾಗಿದ್ದು, ಪ್ರಸ್ತುತ ಸ್ಪೀಕರ್ ಆಗಿರುವ ಯು.ಟಿ. ಖಾದರ್ ಅವರನ್ನೇ ಈ ಸ್ಥಾನದಲ್ಲಿ ಮುಂದುವರಿಸಲು ಹೈಕಮಾಂಡ್ ಗಂಭೀರ ಚಿಂತನೆ ನಡೆಸಿದೆ.

ನಾಳೆಯೇ (ಜೂನ್ 3) ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದು, ಹೈಕಮಾಂಡ್ ಯಾರಿಗೆ ಮಂತ್ರಿಭಾಗ್ಯ ಕರುಣಿಸಲಿದೆ ಮತ್ತು ಕೆಪಿಸಿಸಿ ಸಾರಥ್ಯ ಯಾರ ಹೆಗಲೇರಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ