AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid Scam: ಕೊವಿಡ್​ ಹಗರಣದ ತನಿಖೆಗೆ SIT ರಚನೆ ಮಾಡಲು ಸಂಪುಟ ಅಸ್ತು

ಕರ್ನಾಟಕದಲ್ಲಿ ಕೋವಿಡ್ ಕಾಲಘಟ್ಟದಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ನಡೆದಿದೆ ಎಂದು ನ್ಯಾ. ಮೈಕಲ್ ಕುನ್ಹಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿದ್ದ ಹಗರಣದ ತನಿಖೆಯನ್ನು ಈಗಿನ ಕಾಂಗ್ರೆಸ್ ಸರ್ಕಾರ ನಿವೃತ್ತ ನ್ಯಾಯಮೂರ್ತಿಯ ಮೂಲಕ ನಡೆಸಲು ತೀರ್ಮಾನಿಸಿತ್ತು. ಅದರ ವರದಿಯೀಗ ಸರ್ಕಾರದ ಕೈ ಸೇರಿದೆ. ಇದರ ಬೆನ್ನಲ್ಲೇ ಇದೀಗ ಕೋವಿಡ್ ಹಗರಣದ ತನಿಖೆಯನ್ನು ಎಸ್​ಐಟಿಗೆ ವಹಿಸಲು ಸಂಪುಟ ಅಸ್ತು ಎಂದಿದೆ.

Covid Scam: ಕೊವಿಡ್​ ಹಗರಣದ ತನಿಖೆಗೆ SIT ರಚನೆ ಮಾಡಲು ಸಂಪುಟ ಅಸ್ತು
ಪ್ರಸನ್ನ ಗಾಂವ್ಕರ್​
| Edited By: |

Updated on:Nov 14, 2024 | 5:00 PM

Share

ಬೆಂಗಳೂರು, (ನವೆಂಬರ್ 14): ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದಿದೆಯೆನ್ನಲಾದ ಸಾವಿರಾರು ಕೋಟಿ ರೂ. ಕೋವಿಡ್ – 19 ಹಗರಣದ ತನಿಖೆಗಾಗಿ ಈಗಿನ ಕಾಂಗ್ರೆಸ್ ಸರ್ಕಾರ ನೇಮಿಸಿದ್ದ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಆ ವರದಿ ಟಿವಿ9ಗೆ ಸಹ ಲಭ್ಯವಾಗಿದ್ದು, ಅದರಲ್ಲಿ 918 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಉಲ್ಲೇಖಿಸಲಾಗಿದೆ. ಈ ಸಂಬಂಧ ಇಂದು (ನವೆಂಬರ್ 14) ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದ್ದು, ಅಂತಿಮವಾಗಿ ಕೊವಿಡ್​ ಹಗರಣದ ತನಿಖೆಗೆ SIT ರಚನೆ ಮಾಡಲು ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆ ಅಸ್ತು ಎಂದಿದೆ.

ಕೊವಿಡ್​ ಹಗರಣದ ಸಂಬಂಧ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪವಾಗುತ್ತಿದ್ದಂತೆಯೇ ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಸಚಿವರು ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಎಸ್ಐಟಿ ಗೆ ವಹಿಸಲು ಕ್ಯಾಬಿನೆಟ್ ತೀರ್ಮಾನಿಸಿದೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ಕೊರೊನಾ ಹಗರಣ: ಕುನ್ಹಾ ಸಮಿತಿ ವರದಿ ಆಧರಿಸಿ ಕ್ರಮಕ್ಕೆ ನಮ್ಮ ಸರ್ಕಾರ ಬದ್ಧ: ಸಿಎಂ

ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್​ಕೆ ಪಾಟೀಲ್, ಕೊವಿಡ್​ ವೇಳೆ ಕಿಟ್, ಔಷಧಿ ಖರೀದಿ ವೇಳೆ ಅಕ್ರಮ ನಡೆದಿದೆ. ಕೊವಿಡ್ ಹಗರಣ ಸಂಬಂಧ ಹಲವು ದೂರುಗಳು ದಾಖಲಾಗಿದ್ದವು. ಕೊವಿಡ್​ ಹಗರಣದ ತನಿಖೆಗೆ ಎಸ್​ಐಟಿ ರಚನೆ ಮಾಡಲಾಗುವುದು. ವರದಿ ಆಧರಿಸಿ ಎಸ್ಐಟಿ ತನಿಖೆ ಆಗಲಿದೆ . ಅಗತ್ಯ ಬಿದ್ದರೆ FIR ದಾಖಲಾಗುತ್ತೆ, ಚಾರ್ಜ್​ಶೀಟ್ ಕೂಡ ಹಾಕ್ತೇವೆ. ಯಾರ ವಿರುದ್ಧ FIR ದಾಖಲಿಸಬೇಕೆಂದು SIT ನಿರ್ಧರಿಸುತ್ತದೆ ಎಂದು ಸ್ಪಷ್ಟಪಡಿಸಿದರು.

ಸಂಸದ ಡಾ.C.N.ಮಂಜುನಾಥ್​ಗೆ ಸಂಕಷ್ಟ?

ಕೊವಿಡ್​ ಹಗರಣದ ತನಿಖೆಗೆ ಸರ್ಕಾರದಿಂದ ಎಸ್​ಐಟಿ ರಚನೆ ಮಾಡಲು ತೀರ್ಮಾನಿಸಿದೆ. ಹೀಗಾಗಿ ಅಂದಿನ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವರಾಗಿದ್ದ ಶ್ರೀರಾಮುಲು ಸೇರಿದಂತೆ ಇತರರಿಗೆ ಸಂಕಷ್ಟ ಎದುರಾಗಲಿದೆ. ಅದರಲ್ಲೂ ಪ್ರಮುಖವಾಗಿ ಸಂಸದ ಡಾ.ಸಿ.ಎನ್​.ಮಂಜುನಾಥ್​ಗೆ ಈ ಹಗರಣ ಕಂಟಕ ತಂದಿಡಬಹುದು. ಯಾಕಂದ್ರೆ ಮಂಜುನಾಥ್ ಅವರು ಕೋವಿಡ್ ಸಂದರ್ಭದಲ್ಲಿ ಟಾಸ್ಕ್ ಫೋರ್ಸ್ ಕಮಿಟಿ ಮುಖ್ಯಸ್ಥರಾಗಿದ್ದರು. ಟಾಸ್ಕ್ ಫೋರ್ಸ್ ನಿರ್ಣಯದಂತೆ ಕೆಲ ಉಪಕರಣಗಳ ಖರೀದಿ ಆಗಿದೆ. ಈ ಹಿನ್ನೆಲೆ ಟಾಸ್ಕ್ ಫೋರ್ಸ್ ಬಗ್ಗೆಯೂ ಕುನ್ಹಾ ವರದಿಯಲ್ಲಿ ಪ್ರಸ್ತಾಪವಾಗಿದೆ. ಇದರಿಂದ ಮಂಜುನಾಥ್ ಅವರ ಬುಡಕ್ಕೂ ಹಗರಣ ಬಂದರೂ ಅಚ್ಚರಿ ಪಡಬೇಕಿಲ್ಲ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ಕೊರೊನಾ ಹಗರಣದ ಮತ್ತಷ್ಟು ಸ್ಫೋಟಕ ಅಂಶ ಬೆಳಕಿಗೆ: ಬಿಎಸ್​ವೈ, ಶ್ರೀರಾಮುಲುಗೆ ಕುತ್ತು!

ಮಧ್ಯಂತರ ವರದಿಯಲ್ಲಿರೋದೇನು?

ಬಿಎಸ್​ವೈ, ರಾಮುಲು ಕಾರ್ಯವೈಖರಿಗೆ ಸಮಿತಿ ಅಕ್ಷೇಪ ವ್ಯಕ್ತಪಡಿಸಿದೆ. ಖಾಸಗಿ ಲ್ಯಾಬ್​ಗಳಿಗೆ 6.93ಕೋಟಿ ಹಣ ಸಂದಾಯವಾಗಿದೆ. ಆದ್ರೆ 14 ಲ್ಯಾಬ್​ಗಳು ICMRನಿಂದ ಮಾನ್ಯತೆ ಪಡೆದಿಲ್ಲ. ಈ ICMR ಲ್ಯಾಬ್​ಗಳು ಅಧಿಕೃತ ಅಲ್ಲ ಎಂದು ಜಾನ್ ಮೈಕೆಲ್ ಡಿ ಕುನ್ಹಾ ಸಮಿತಿಯ ವರದಿಯಲ್ಲಿ ಉಲ್ಲೇಖಿಸಲಾಗಿದೆ. RTPCR ಟೆಸ್ಟ್​ಗೆ ಲ್ಯಾಬ್​ಗಳ ಸಾಮರ್ಥ್ಯ, ಕ್ಷಮತೆ ಗುರುತಿಸಿಲ್ಲ. ಸಾಮರ್ಥ್ಯ, ಕ್ಷಮತೆ ಪರಿಶೀಲಿಸದೆ ಲ್ಯಾಬ್​ಗಳಿಗೆ ಅನುಮತಿ ನೀಡಲಾಗಿದೆ. 6 ಖಾಸಗಿ ಲ್ಯಾಬ್ ಗಳಿಗೆ ಒಪ್ಪಂದವಿಲ್ಲದೆ ಹಣ ಸಂದಾಯ ಮಾಡಲಾಗಿದೆ. ಅನಧಿಕೃತವಾಗಿ ಲ್ಯಾಬ್​ಗಳಿಗೆ ಹಣ ಸಂದಾಯದ ಬಗ್ಗೆ ಮಧ್ಯಂತರ ವರದಿ ನೀಡಲಾಗಿದೆ. 8 ಲ್ಯಾಬ್​ಗಳಿಗೆ ಅನುಮತಿ ಪಡೆಯದೆ 4.28 ಕೋಟಿ ಹಣ ನೀಡಲಾಗಿದೆ. ಕಾರ್ಯಾದೇಶವಿಲ್ಲದೆ ಖಾಸಗಿ ಲ್ಯಾಬ್​ಗಳು ಬಿಲ್ ನೀಡಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:52 pm, Thu, 14 November 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್