AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪುಟ ವಿಸ್ತರಣೆ: ಯಡಿಯೂರಪ್ಪ ಸಿನಿಮಾ ವೀಕ್ಷಣೆ, ರಾಮುಲು ಟೆಂಪಲ್ ರನ್

ಬೆಂಗಳೂರು: ಭಾರೀ ಕುತೂಹಲ ಕೆರಳಿಸಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಟೆನ್ಷನ್​ ನಡುವೆಯೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಿಲ್ಯಾಕ್ಸ್ ಮೂಡ್​ನಲ್ಲಿದ್ದಾರೆ. ಇಂದು ಸಂಜೆ 5.30ಕ್ಕೆ ನಗರದ ಒರಾಯನ್ ಮಾಲ್​ನಲ್ಲಿ ಅರಣ್ಯ, ವನ್ಯಜೀವಿ ಇಲಾಖೆ ಆಯೋಜಿಸಿರುವ ‘ವೈಲ್ಡ್ ಕರ್ನಾಟಕ ಸಾಕ್ಷ್ಯಚಿತ್ರ’ವನ್ನು ಬಿಎಸ್​ವೈ ವೀಕ್ಷಿಸಲಿದ್ದಾರೆ. ಯಡಿಯೂರಪ್ಪಗೆ ಡಿಸಿಎಂ ಅಶ್ವತ್ಥ್​​ ನಾರಾಯಣ, ಸಿ.ಸಿ.ಪಾಟೀಲ್ ಸೇರಿದಂತೆ ಹಲವರು ಸಾಥ್ ನೀಡಲಿದ್ದಾರೆ. ಜ.31ರಂದು ಸಂಪುಟ ವಿಸ್ತರಣೆ ಖಚಿತ? ಜ.31ರಂದು ಸಚಿವ ಸಂಪುಟ ವಿಸ್ತರಣೆ ಬಹುತೇಕ ಖಚಿತ ಎನ್ನಲಾಗಿದೆ. ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳುವ ಬಗ್ಗೆ ನಾಳೆ […]

ಸಂಪುಟ ವಿಸ್ತರಣೆ: ಯಡಿಯೂರಪ್ಪ ಸಿನಿಮಾ ವೀಕ್ಷಣೆ, ರಾಮುಲು ಟೆಂಪಲ್ ರನ್
ಸಾಧು ಶ್ರೀನಾಥ್​
|

Updated on: Jan 28, 2020 | 11:45 AM

Share

ಬೆಂಗಳೂರು: ಭಾರೀ ಕುತೂಹಲ ಕೆರಳಿಸಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಟೆನ್ಷನ್​ ನಡುವೆಯೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಿಲ್ಯಾಕ್ಸ್ ಮೂಡ್​ನಲ್ಲಿದ್ದಾರೆ. ಇಂದು ಸಂಜೆ 5.30ಕ್ಕೆ ನಗರದ ಒರಾಯನ್ ಮಾಲ್​ನಲ್ಲಿ ಅರಣ್ಯ, ವನ್ಯಜೀವಿ ಇಲಾಖೆ ಆಯೋಜಿಸಿರುವ ‘ವೈಲ್ಡ್ ಕರ್ನಾಟಕ ಸಾಕ್ಷ್ಯಚಿತ್ರ’ವನ್ನು ಬಿಎಸ್​ವೈ ವೀಕ್ಷಿಸಲಿದ್ದಾರೆ. ಯಡಿಯೂರಪ್ಪಗೆ ಡಿಸಿಎಂ ಅಶ್ವತ್ಥ್​​ ನಾರಾಯಣ, ಸಿ.ಸಿ.ಪಾಟೀಲ್ ಸೇರಿದಂತೆ ಹಲವರು ಸಾಥ್ ನೀಡಲಿದ್ದಾರೆ.

ಜ.31ರಂದು ಸಂಪುಟ ವಿಸ್ತರಣೆ ಖಚಿತ? ಜ.31ರಂದು ಸಚಿವ ಸಂಪುಟ ವಿಸ್ತರಣೆ ಬಹುತೇಕ ಖಚಿತ ಎನ್ನಲಾಗಿದೆ. ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳುವ ಬಗ್ಗೆ ನಾಳೆ ಅಂತಿಮ ತೀರ್ಮಾನವಾಗಲಿದೆ. ಸಚಿವ ಸಂಪುಟ ವಿಸ್ತರಣೆ ಸಂಬಂಧ ಯಡಿಯೂರಪ್ಪ ದೆಹಲಿಗೆ ತೆರಳಬೇಕೋ? ಫೋನ್​ನಲ್ಲೇ ಚರ್ಚಿಸಬೇಕೋ ಎಂಬುದು ನಾಳೆ ಫೈನಲ್ ಆಗಲಿದೆ. ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿ.ಎಲ್.ಸಂತೋಷ್ ಜತೆ ಸಂಪುಟದ ಬಗ್ಗೆ ಬಿಎಸ್​ವೈ ಚರ್ಚೆ ನಡೆಸಿದ್ದಾರೆ.

ಹೀಗಾಗಿ ಫೋನ್​ನಲ್ಲೇ ಚರ್ಚಿಸಿ ಅಂತಿಮ ಮುದ್ರೆಗೆ ಪ್ಲ್ಯಾನ್ ರೂಪಿಸಿದ್ದಾರೆ. ಒಂದು ವೇಳೆ ದೆಹಲಿಗೆ ಹೋಗಲೇಬೇಕು ಎಂದಾದರೆ ಗುರುವಾರ ಬಿಎಸ್​ವೈ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಅದಕ್ಕಾಗಿ ಜ.30ರ ಕಾರ್ಯಕ್ರಮವನ್ನು ಯಡಿಯೂರಪ್ಪ ಕಾಯ್ದಿರಿಸಿದ್ದಾರೆ.

ಶ್ರೀರಾಮುಲು ಟೆಂಪಲ್ ರನ್: ಸಚಿವ ಸಂಪುಟ ವಿಸ್ತರಣೆ, ಡಿಸಿಎಂ ಸ್ಥಾನದ ಬೆಳವಣಿಗೆಗಳ ಬೆನ್ನಲ್ಲೇ ಆರೋಗ್ಯ ಸಚಿವ ಶ್ರೀರಾಮುಲು ಇಂದು ಬೆಳ್ಳಂಬೆಳಗ್ಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಸಚಿವ ಸಂಪುಟ ವಿಸ್ತರಣೆ ವೇಳೆ ಡಿಸಿಎಂ ಸ್ಥಾನ ಸಿಗಲೆಂಬ ಇಚ್ಛೆ ಈಡೇರಿಕೆಯೋ? ಪುತ್ರಿಯ ವಿವಾಹ ಹಿನ್ನೆಲೆಯಲ್ಲಿ ದೇವರಿಗೆ ಪೂಜೆ ಮಾಡಿದ್ದಾರೋ ಎಂಬ ಕುತೂಹಲ ಮೂಡಿಸಿದೆ. ಸಂಕಷ್ಟ ಹಾಗೂ ಇಚ್ಛೆ ಈಡೇರಿಕೆ ಸಂದರ್ಭದಲ್ಲೆಲ್ಲಾ ಶ್ರೀರಾಮುಲು ವೆಂಕಟರಮಣನ ದರ್ಶನ ಪಡೆಯುತ್ತಾರೆ.

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ