AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪುಟ ವಿಸ್ತರಣೆ ಕಸರತ್ತು ಕ್ಲೈಮ್ಯಾಕ್ಸ್ ಹಂತಕ್ಕೆ: ಅಂತಿಮ ಪಟ್ಟಿಗೆ ಇನ್ನೊಂದೆಜ್ಜೆ ಬಾಕಿ

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕಸರತ್ತು ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ನಿವಾಸದಲ್ಲಿ ನಡೆದ ಸಭೆ ಅಂತ್ಯವಾಗಿದ್ದು, ಸಚಿವರ ಪಟ್ಟಿ ಅಂತಿಮಗೊಳಿಸಲು ಚರ್ಚಿಸಿದ್ದಾರೆ. ಆದ್ರೆ, ಸಚಿವರ ಪಟ್ಟಿ ಅಂತಿಮಕ್ಕೆ ಇನ್ನೊಂದೆಜ್ಜೆ ಬಾಕಿ ಇದ್ದು, ನಾಳೆ (ಜುಲೈ 29) ಅಧಿಕೃತ ಘೋಷಣೆಯಾಗಲಿದೆ. ಹಾಗಾದ್ರೆ, ದೆಹಲಿಯಲ್ಲಿ ಏನೆಲ್ಲಾ ಬೆಳವಣಿಗೆಗಳು ನಡೆದಿವೆ ಸಂಪೂರ್ಣ ವಿವರ ಇಲ್ಲಿದೆ.

ಸಂಪುಟ ವಿಸ್ತರಣೆ ಕಸರತ್ತು ಕ್ಲೈಮ್ಯಾಕ್ಸ್ ಹಂತಕ್ಕೆ: ಅಂತಿಮ ಪಟ್ಟಿಗೆ ಇನ್ನೊಂದೆಜ್ಜೆ ಬಾಕಿ
Congress Leaders
Pramod Shastri G
| Edited By: |

Updated on:Jul 28, 2026 | 10:51 PM

Share

ನವದೆಹಲಿ, (ಜುಲೈ 28): ಕರ್ನಾಟಕ ಸಂಪುಟ ವಿಸ್ತರಣೆಯ (Karnataka Cabinet Expansion)  ಜಟಾಪಟಿ ಕೊನೇ ಹಂತಕ್ಕೆ ಬಂದು ನಿಂತಿದೆ. ಯಾವಾಗ ಸಂಪುಟ ವಿಸ್ತರಣೆ ಎಂಬ ಪ್ರಶ್ನೆಗೆ ಉತ್ತರ ಸಿಗುವ ಸಮಯ ಬಂದಿದೆ. ಯಾಕಂದ್ರೆ, ದೆಹಲಿಯ (New Delhi) ಕಾಂಗ್ರೆಸ್ ಹೈಕಮಾಂಡ್, 2ನೇ ಹಂತದ ಚರ್ಚೆ ನಡೆದಿದ್ದು, ಅಂತಿಮ ಮಾತುಕತೆಯೊಂದೇ ಬಾಕಿ ಇದೆ. ಹೌದು.. ಎಲ್ಲವೂ ಅಂದುಕೊಂಡಂತೆ ಇಂದು (ಜುಲೈ 28) ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ನಿವಾಸದಲ್ಲಿ ಮಹತ್ವದ ಸಭೆ ನಡೆದಿದ್ದು, ಮೊದಲು ವೇಣುಗೋಪಾಲ್ ಅವರು ರಾಜ್ಯ ನಾಯಕರ ಜತೆ ಪ್ರತ್ಯೇಕ ಸಭೆ ಮಾಡಿದ್ದಾರೆ. ಆದರೆ, ಅಂತಿಮವಾಗಿ ನಾಳೆ (ಜುಲೈ 29) ರಾಹುಲ್ ಗಾಂಧಿ ಜೊತೆ ಅಂತಿಮ ಸುತ್ತಿನ ಮಾತುಕತೆ ನಡೆಯಲಿದ್ದು, ಈ ವೇಳೆ ಸಂಪುಟ ಸೇರುವ ನಾಯಕರ 2ನೇ ಪಟ್ಟಿಗೆ ಅಂತಿಮ ಮುದ್ರೆ ಬೀಳಲಿದೆ.

ರಾಜ್ಯ ನಾಯಕರ ಜೊತೆ ವೇಣುಗೋಪಾಲ್ ಸುದೀರ್ಘ ಚರ್ಚೆ

ಹೌದು….. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಇಂದು (ಜುಲೈ 28) ದೆಹಲಿಯ ತಮ್ಮ ನಿವಾಸದಲ್ಲಿ ಕರ್ನಾಟಕ ಕಾಂಗ್ರೆಸ್ ನಾಯಕರ ಜತೆ ಸಭೆ ನಡೆಸಿದ್ದಾರೆ.  ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಹಾಗೂ ಸಿಎಂ ಡಿಕೆ ಶಿವಕುಮಾರ್ ಜೊತೆ ಪ್ರತ್ಯೇಕ ಸಭೆ ನಡೆಸಿದ್ದು, ಈ ವೇಳೆ ಅವರ ಪಟ್ಟಿಯನ್ನು ಸ್ವೀಕರಿಸಿ ಮಾತುಕತೆ ನಡೆಸಿದ್ದಾರೆ. ಕೊನೆಗೆ ಎಲ್ಲಾ ನಾಯಕರು ಒಟ್ಟಿಗೆ ಸೇರಿ ಮತ್ತೊಂದು ಸುತ್ತಿನ ಚರ್ಚೆ ಮಾಡಿದ್ದಾರೆ. ಆದ್ರೆ,  ಅಂತಿಮ ಮಾತುಕತೆ ನಾಳೆ (ಜುಲೈ29) ರಾಹುಲ್ ಗಾಂಧಿ ಜೊತೆಗಿನ ಸಭೆ ಬಳಿಕ ಪಟ್ಟಿಗೆ ಅಂತಿಮ ಮುದ್ರೆ ಬೀಳಲಿದೆ.

ಇದನ್ನೂ ನೋಡಿ: ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್: ಆ.3ರಂದು ಕರ್ನಾಟಕ-ತಮಿಳುನಾಡು ಸಿಎಂ ಸಭೆ ನಿಗದಿ

ವೇಣುಗೋಪಾಲ್ ಸಭೆಯಲ್ಲಿ ಏನೇನಾಯ್ತು?

ವೇಣುಗೋಪಾಲ್ ನಿವಾಸದಲ್ಲಿ ರಾಜ್ಯ ನಾಯಕರ ಸಭೆಯಲ್ಲಿ ಸಚಿವ ಸ್ಥಾನದ ಮಾನದಂಡಗಳ ಬಗ್ಗೆ ಮಾತುಕತೆ ನಡೆದಿದೆ. ಕೆಲ ಸಮಾಜಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಹೊಸ ಮುಖಗಳಿಲ್ಲ. ಹೀಗಾಗಿ ಅಂತಹ ಸಮುದಾಯಗಳಿಗೆ ಪ್ರಾಧಾನ್ಯತೆ ನೀಡುವ ಬಗ್ಗೆ ಚರ್ಚೆ ಆಗಿದೆ. ಹಿರಿತನದ ಮೂಲಕವೇ ಪ್ರಾಧಾನ್ಯತೆ ನೀಡಬೇಕೆಂಬ ಬಗ್ಗೆಯೂ ಮಾತುಕತೆಗಳಾಗಿದ್ದು, ಜೊತೆ ಸಭೆಯಲ್ಲಿ ಜಿಲ್ಲಾವಾರು ಹೆಸರುಗಳು ಕೂಡ ಪ್ರಸ್ತಾಪವಾಗಿದೆ. ಈ ಎಲ್ಲಾ ಮಾನದಂಡಗಳ ಬಗ್ಗೆ ಚರ್ಚೆ ಆಗಿದ್ದು, ಇದೇ ಅಂಶಗಳೊಂದಿಗೆ ರಾಹುಲ್ ಗಾಂಧಿ ಸಹ ಅಂತಿಮ ಸಭೆ ಮಾಡಿ ನೂತನ ಸಚಿವ ಪಟ್ಟಿ ಸಿದ್ಧಪಡಿಸಲಿದ್ದಾರೆ.

ರಾಹುಲ್ ಗಾಂಧಿ ಜತೆ ಅಂತಿಮ ಸಭೆ

ಸಚಿವ ಸಂಪುಟ ಸಂಬಂಧ ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಕಳೆದು ಎರಡು ದಿನಗಳಿಂದ ದೆಹಲಿಯಲ್ಲೇ ಠಿಕಾಣಿ ಹೂಡಿದ್ದು, ಇಂದು ಸೆಮಿಫೈನಲ್​​​ ಪಂದ್ಯದಂತೆ ಕೆಸಿ ವೇಣುಗೋಪಾಲ್ ಜೊತೆ ಸಭೆ ಆಗಿದೆ. ಈಗ ಇನ್ನೇನಿದ್ದರೂ ಫೈನಲ್​​ ಬಾಕಿ ಇದ್ದು, ಫೈನಲ್ ಮಾತುಕತೆ ನಾಳೆ (ಜುಲೈ 29) ರಾಹುಲ್ ಗಾಂಧಿಯೊಂದಿಗೆ ನಡೆಯಲಿದೆ.  ಆದರೆ, ಬುಧವಾರ ಸಂಸತ್​​ನಲ್ಲಿ ನೀಟ್​ ವಿಚಾರವಾಗಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾತನಾಡಲಿದ್ದಾರೆ. ಹೀಗಾಗಿ ಬೆಳಗ್ಗೆಯಿಂದ ಮಧ್ಯಾಹ್ನವರೆಗೂ ರಾಹುಲ್ ಸಂಸತ್​​​​ನಲ್ಲಿ ಬ್ಯುಸಿಯಾಗಿದ್ದು, ನಾಳೆ (ಜುಲೈ 29) ಸಂಜೆ 4 ಗಂಟೆ ಮೇಲೆ ದೆಹಲಿಯ 10 ಜನಪತ್​​ನ ರಾಹುಲ್ ನಿವಾಸದಲ್ಲಿ ಸಭೆ ನಡೆಯಲಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬಿ.ಕೆ.ಹರಿಪ್ರಸಾದ್, ಸಿದ್ದರಾಮಯ್ಯ ಜೊತೆ ರಾಹುಲ್ ಮಾತುಕತೆ ಮಾಡಿ ನೂತನ ಸಚಿವ ಪಟ್ಟಿಗೆ ಅಂತಿಮ ಮುದ್ರೆ ಒತ್ತಲಿದ್ದಾರೆ. ಇದರಿಂದ ಯಾರೆಲ್ಲಾ ಡಿಕೆಶಿ ಕ್ಯಾಬಿನೆಟ್ ಸೇರುತ್ತಾರೆ ಎನ್ನುವುದು ಮಂಗಳವಾರ ಸಂಜೆ ಮೇಲೆ ಗೊತ್ತಾಗಲಿದೆ.

ಜು.30ರಂದು ಪ್ರಮಾಣವಚನ ಸಾಧ್ಯತೆ

ರಾಜ್ಯ ಸಂಪುಟ ವಿಸ್ತರಣೆ ಕಸರತ್ತು ದೆಹಲಿಯಲ್ಲಿ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ರಾಹುಲ್ ಗಾಂಧಿ ಮುದ್ದೆ ಬೀಳುವುದೊಂದೇ ಬಾಕಿ ಇದ್ದು, ನಾಳೆ ರಾಹುಲ್ ಗಾಂಧಿ ಜೊತೆ ಅಂತಿಮ ಸಭೆ ಸಹ ಫಿಕ್ಸ್ ಆಗಿದೆ. ಹೀಗಾಗಿ ಇತ್ತ ನೂತನ ಸಚಿವ ಪ್ರಮಾಣವಚನಕ್ಕೆ ಸಿದ್ಧತೆಗಳು ಆರಂಭವಾಗಿವೆ. ಜುಲೈ 30ರಂದು ಸಂಜೆ 5 ಗಂಟೆಗೆ ನೂತನ ಪ್ರಮಾಣವಚನ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ..  ಯಾಕಂದ್ರೆ, ಮುಖ್ಯಮಂತ್ರಿ ಕಚೇರಿಯಿಂದ ಲೋಕಭವನಕ್ಕೆ ಮೌಖಿಕ ಮಾಹಿತಿ ಹೋಗಿದೆ. ಹೀಗಾಗಿ ರ ಲೋಕಭವನದಲ್ಲಿ ಸಿದ್ಧತೆಗಳು ನಡೆದಿವೆ.

ಹಲವು ಶಾಸಕರಿಗೆ ಢವ ಢವ

ಕೊನೆಯ ಎರಡು ವರ್ಷವಾದರೂ ಡಿಕೆ ಶಿವಕುಮಾರ್ ಸಂಪುಟದಲ್ಲಿ ಸಚಿವರಾಗಬೇಕೆಂದು ಸಾಕಷ್ಟು ಶಾಸಕರು ತುದಿಗಾಲಲ್ಲಿ ನಿಂತಿದ್ದಾರೆ. ತಮಗೂ ಸಚಿವ ಸ್ಥಾನಬೇಕೆಂದು ಹಲವು ಶಾಸಕ ಈಗಾಗಲೇ ಕಳೆದೊಂದು ವಾರದಿಂದ ದೆಹಲಿಯಲ್ಲೇ ಬೀಡುಬಿಟ್ಟಿದ್ದು, ಹೈಕಮಾಂಡ್ ನಾಯಕರ ಮೇಲೆ ಒತ್ತಡ ಹೇರುತ್ತಿದ್ದಾರೆ. ಆದ್ರೆ, ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತೆ ಎನ್ನುವುದೇ ತೀವ್ರ ಕುತೂಹಲ ಮೂಡಿಸಿದ್ದು, ಬುಧವಾರ ರಾತ್ರಿ ವೇಳೆಗೆ ಯಾರಿಗೆ ಮಂತ್ರಿಪಟ್ಟು ಯಾರಿಗಿಲ್ಲ ಎನ್ನುವುದು ಒಂದು ಹಂತದ ಮಟ್ಟಿಗೆ ಗೊತ್ತಾಗಲಿದೆ.  ಇದರಿಂದ ಆ ಪಟ್ಟಿಯಲ್ಲಿ ತಮ್ಮದು ಹೆಸರು ಇರುತ್ತೋ ಇಲ್ವಾ ಎನ್ನುವ ಟೆನ್ಷನ್​​​ನಲ್ಲಿ ಶಾಸಕರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:35 pm, Tue, 28 July 26

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ