AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳನ್ನು ‘ಸರ್’ ಎಂದು ಸಂಬೋಧಿಸಿದ ಸಚಿವರು: ಸಿಟ್ಟಾದ ಸಿಎಂ ಸಿದ್ದರಾಮಯ್ಯ!

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಕರ್ನಾಟಕ ಸಚಿವ ಸಂಪುಟ ಸಭೆ ವಿಚಿತ್ರ ಸನ್ನಿವೇಶವೊಂದಕ್ಕೆ ಸಾಕ್ಷಿಯಾಯಿತು. ‘ಸರ್, ಸರ್’ ಎಂದು ಸಚಿವರು ಸಂಬೋಧಿಸಿದ್ದಕ್ಕೆ ಸಿಟ್ಟಾದ ಸಿಎಂ ಸಿದ್ದರಾಮಯ್ಯ ಮಂತ್ರಿಗಳಿಗೆ ಕ್ಲಾಸ್ ತೆಗೆದುಕೊಂಡ ವಿದ್ಯಮಾನವೂ ನಡೆಯಿತು. ಅಷ್ಟಕ್ಕೂ ಸಿದ್ದರಾಮಯ್ಯ ಸಚಿವರ ವಿರುದ್ಧ ಸಿಟ್ಟಾಗಿದ್ದೇಕೆ? ಇಲ್ಲಿದೆ ಮಾಹಿತಿ.

ಅಧಿಕಾರಿಗಳನ್ನು ‘ಸರ್’ ಎಂದು ಸಂಬೋಧಿಸಿದ ಸಚಿವರು: ಸಿಟ್ಟಾದ ಸಿಎಂ ಸಿದ್ದರಾಮಯ್ಯ!
ಸಿದ್ದರಾಮಯ್ಯ
Pramod Shastri G
| Edited By: |

Updated on: Sep 06, 2024 | 8:07 AM

Share

ಬೆಂಗಳೂರು, ಸೆಪ್ಟೆಂಬರ್ 6: ಕರ್ನಾಟಕ ಸಚಿವ ಸಂಪುಟ ಸಭೆ ಗುರುವಾರ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಐದು ಕೆಜಿ ಅಕ್ಕಿ ಬದಲು ವ್ಯಕ್ತಿಗೆ 170 ರೂ.ನಂತೆ ಹಣ ವರ್ಗಾವಣೆ ಮಾಡುವುದನ್ನು ಮುಂದುವರಿಸುವುದೂ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಸಚಿವ ಸಂಪುಟ ಕೈಗೊಂಡಿದೆ. ಆದರೆ, ಸಭೆಯ ಮಧ್ಯೆ ಅಚ್ಚರಿಯ ಸನ್ನಿವೇಶವೊಂದು ಸೃಷ್ಟಿಯಾಯಿತು.

ಕೆಲವು ಮಂದಿ ಸಚಿವರು ಅಧಿಕಾರಿಗಳನ್ನು ‘ಸರ್, ಸರ್’ ಎಂದು ಸಂಬೋಧಿಸಿ ಮಾತನಾಡುತ್ತಿದ್ದರು. ಇದನ್ನು ಕಂಡ ಸಿಎಂ ಸಿದ್ದರಾಮಯ್ಯ ಸಿಟ್ಟಾದರು. ಅಷ್ಟೇ ಅಲ್ಲ, ಕೆಲವು ಸಚಿವರಿಗೆ ಸಿಟ್ಟಿನಿಂದಲೇ ಕ್ಲಾಸ್ ತೆಗೆದುಕೊಂಡರು.

‘ಸರ್’ ಎಂದು ಕರೆಯಬೇಡಿ: ಸಿಎಂ ಖಡಕ್ ಸೂಚನೆ

ಯಾವೊಬ್ಬ ಸಚಿವರೂ ಅಧಿಕಾರಿಗಳನ್ನು ‘ಸರ್’ ಎಂದು ಕರೆಯಕೂಡದು ಎಂದು ಅಧಿಕಾರಿಗಳೆದುರಿಗೇ ನೇರವಾಗಿ ಸಿಎಂ ಹೇಳಿದರು. ಸಾಂವಿಧಾನಿಕವಾಗಿ ನೀವು (ಸಚಿವರು) ಇಲಾಖೆಯ ನಾಯಕರು. ಅಧಿಕಾರಿ ವರ್ಗ ನಿಮ್ಮ ಕೈಯಡಿ ಇದೆ. ನೀವೇ ಅಧಿಕಾರಿಗಳಿಗೆ ‘ಸರ್, ಸರ್’ ಎನ್ನುವ ಮೂಲಕ ಮಂತ್ರಿ ಸ್ಥಾನವನ್ನು ಕಡೆಗೆಣಿಸುತ್ತಿದ್ದೀರಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಅಧಿಕಾರಿಗಳು ಗೌರವಿಸುವಂತೆ ವರ್ತಿಸಿ

ಇಲಾಖೆ ಬಗ್ಗೆ ಮಾಹಿತಿ ಕೊರತೆ ಇದ್ದರೆ ಅದಕ್ಕೆ ಬೇಕಾದ ಸೂಕ್ತ ಮಾಹಿತಿ ಅಧಿಕಾರಿಗಳಿಂದ ತರಿಸಿಕೊಳ್ಳಿ. ಅದರ ಬದಲಾಗಿ ಅದೇ ಇಲಾಖೆಯ ಇನ್ನೋರ್ವ ಅಧಿಕಾರಿಗೆ ‘ಸರ್ ಸರ್’ ಎಂದರೆ ಹೇಗೆ? ಅಧಿಕಾರಿಗಳು ಸದಾ ಆ ಸ್ಥಾನಕ್ಕೆ ಗೌರವಿಸುವಂತೆ ನಿಮ್ಮ ವರ್ತನೆ ಸಹ ಇರಬೇಕು ಎಂದು ಸಿಎಂ ನಿರ್ದೇಶನ ನೀಡಿದರು.

ಇದನ್ನೂ ಓದಿ: ಅನ್ನಭಾಗ್ಯದ 5 ಕೆಜಿ ಅಕ್ಕಿಯ ಹಣ ನೀಡುವುದು ಮುಂದುವರಿಕೆ: ಸಚಿವ ಸಂಪುಟದ ತೀರ್ಮಾನಗಳು ಇಲ್ಲಿವೆ

ಕಡತವೊಂದರ ಮಾಹಿತಿ ನೀಡುವ ಸಂದರ್ಭದಲ್ಲಿ ಸಚಿವರೊಬ್ಬರು ಅಧಿಕಾರಿಗಳ ಹೆಸರಿನ ಜತೆ ‘ಸರ್’ ಸೇರಿಸಿ ಮಾತನಾಡಿದ್ದು ಇಷ್ಟಕ್ಕೆಲ್ಲ ಕಾರಣವಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!