AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳನ್ನು ‘ಸರ್’ ಎಂದು ಸಂಬೋಧಿಸಿದ ಸಚಿವರು: ಸಿಟ್ಟಾದ ಸಿಎಂ ಸಿದ್ದರಾಮಯ್ಯ!

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಕರ್ನಾಟಕ ಸಚಿವ ಸಂಪುಟ ಸಭೆ ವಿಚಿತ್ರ ಸನ್ನಿವೇಶವೊಂದಕ್ಕೆ ಸಾಕ್ಷಿಯಾಯಿತು. ‘ಸರ್, ಸರ್’ ಎಂದು ಸಚಿವರು ಸಂಬೋಧಿಸಿದ್ದಕ್ಕೆ ಸಿಟ್ಟಾದ ಸಿಎಂ ಸಿದ್ದರಾಮಯ್ಯ ಮಂತ್ರಿಗಳಿಗೆ ಕ್ಲಾಸ್ ತೆಗೆದುಕೊಂಡ ವಿದ್ಯಮಾನವೂ ನಡೆಯಿತು. ಅಷ್ಟಕ್ಕೂ ಸಿದ್ದರಾಮಯ್ಯ ಸಚಿವರ ವಿರುದ್ಧ ಸಿಟ್ಟಾಗಿದ್ದೇಕೆ? ಇಲ್ಲಿದೆ ಮಾಹಿತಿ.

ಅಧಿಕಾರಿಗಳನ್ನು ‘ಸರ್’ ಎಂದು ಸಂಬೋಧಿಸಿದ ಸಚಿವರು: ಸಿಟ್ಟಾದ ಸಿಎಂ ಸಿದ್ದರಾಮಯ್ಯ!
ಸಿದ್ದರಾಮಯ್ಯ
Pramod Shastri G
| Edited By: |

Updated on: Sep 06, 2024 | 8:07 AM

Share

ಬೆಂಗಳೂರು, ಸೆಪ್ಟೆಂಬರ್ 6: ಕರ್ನಾಟಕ ಸಚಿವ ಸಂಪುಟ ಸಭೆ ಗುರುವಾರ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಐದು ಕೆಜಿ ಅಕ್ಕಿ ಬದಲು ವ್ಯಕ್ತಿಗೆ 170 ರೂ.ನಂತೆ ಹಣ ವರ್ಗಾವಣೆ ಮಾಡುವುದನ್ನು ಮುಂದುವರಿಸುವುದೂ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಸಚಿವ ಸಂಪುಟ ಕೈಗೊಂಡಿದೆ. ಆದರೆ, ಸಭೆಯ ಮಧ್ಯೆ ಅಚ್ಚರಿಯ ಸನ್ನಿವೇಶವೊಂದು ಸೃಷ್ಟಿಯಾಯಿತು.

ಕೆಲವು ಮಂದಿ ಸಚಿವರು ಅಧಿಕಾರಿಗಳನ್ನು ‘ಸರ್, ಸರ್’ ಎಂದು ಸಂಬೋಧಿಸಿ ಮಾತನಾಡುತ್ತಿದ್ದರು. ಇದನ್ನು ಕಂಡ ಸಿಎಂ ಸಿದ್ದರಾಮಯ್ಯ ಸಿಟ್ಟಾದರು. ಅಷ್ಟೇ ಅಲ್ಲ, ಕೆಲವು ಸಚಿವರಿಗೆ ಸಿಟ್ಟಿನಿಂದಲೇ ಕ್ಲಾಸ್ ತೆಗೆದುಕೊಂಡರು.

‘ಸರ್’ ಎಂದು ಕರೆಯಬೇಡಿ: ಸಿಎಂ ಖಡಕ್ ಸೂಚನೆ

ಯಾವೊಬ್ಬ ಸಚಿವರೂ ಅಧಿಕಾರಿಗಳನ್ನು ‘ಸರ್’ ಎಂದು ಕರೆಯಕೂಡದು ಎಂದು ಅಧಿಕಾರಿಗಳೆದುರಿಗೇ ನೇರವಾಗಿ ಸಿಎಂ ಹೇಳಿದರು. ಸಾಂವಿಧಾನಿಕವಾಗಿ ನೀವು (ಸಚಿವರು) ಇಲಾಖೆಯ ನಾಯಕರು. ಅಧಿಕಾರಿ ವರ್ಗ ನಿಮ್ಮ ಕೈಯಡಿ ಇದೆ. ನೀವೇ ಅಧಿಕಾರಿಗಳಿಗೆ ‘ಸರ್, ಸರ್’ ಎನ್ನುವ ಮೂಲಕ ಮಂತ್ರಿ ಸ್ಥಾನವನ್ನು ಕಡೆಗೆಣಿಸುತ್ತಿದ್ದೀರಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಅಧಿಕಾರಿಗಳು ಗೌರವಿಸುವಂತೆ ವರ್ತಿಸಿ

ಇಲಾಖೆ ಬಗ್ಗೆ ಮಾಹಿತಿ ಕೊರತೆ ಇದ್ದರೆ ಅದಕ್ಕೆ ಬೇಕಾದ ಸೂಕ್ತ ಮಾಹಿತಿ ಅಧಿಕಾರಿಗಳಿಂದ ತರಿಸಿಕೊಳ್ಳಿ. ಅದರ ಬದಲಾಗಿ ಅದೇ ಇಲಾಖೆಯ ಇನ್ನೋರ್ವ ಅಧಿಕಾರಿಗೆ ‘ಸರ್ ಸರ್’ ಎಂದರೆ ಹೇಗೆ? ಅಧಿಕಾರಿಗಳು ಸದಾ ಆ ಸ್ಥಾನಕ್ಕೆ ಗೌರವಿಸುವಂತೆ ನಿಮ್ಮ ವರ್ತನೆ ಸಹ ಇರಬೇಕು ಎಂದು ಸಿಎಂ ನಿರ್ದೇಶನ ನೀಡಿದರು.

ಇದನ್ನೂ ಓದಿ: ಅನ್ನಭಾಗ್ಯದ 5 ಕೆಜಿ ಅಕ್ಕಿಯ ಹಣ ನೀಡುವುದು ಮುಂದುವರಿಕೆ: ಸಚಿವ ಸಂಪುಟದ ತೀರ್ಮಾನಗಳು ಇಲ್ಲಿವೆ

ಕಡತವೊಂದರ ಮಾಹಿತಿ ನೀಡುವ ಸಂದರ್ಭದಲ್ಲಿ ಸಚಿವರೊಬ್ಬರು ಅಧಿಕಾರಿಗಳ ಹೆಸರಿನ ಜತೆ ‘ಸರ್’ ಸೇರಿಸಿ ಮಾತನಾಡಿದ್ದು ಇಷ್ಟಕ್ಕೆಲ್ಲ ಕಾರಣವಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ