AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬಿಐಗೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ ಪಡೆಯಲು ಕ್ಯಾಬಿನೆಟ್ ನಿರ್ಧಾರ

ವಿಧಾನಸೌಧದಲ್ಲಿ ಇಂದು ಸಂಪುಟ ಸಭೆ ನಡೆದಿದ್ದು, ಹಲವು ವಿಚಾರಗಳು ಚರ್ಚೆ ಮಾಡಲಾಗಿದೆ. ಅದರಲ್ಲಿ ಪ್ರಮುಖವಾಗಿ ಸಿಬಿಐ ತನಿಖಾ ದಳಕ್ಕೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆಯನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

ಸಿಬಿಐಗೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ ಪಡೆಯಲು ಕ್ಯಾಬಿನೆಟ್ ನಿರ್ಧಾರ
ಸಿಬಿಐಗೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ ಪಡೆಯಲು ಕ್ಯಾಬಿನೆಟ್ ನಿರ್ಧಾರ
ಪ್ರಸನ್ನ ಗಾಂವ್ಕರ್​
| Edited By: |

Updated on:Sep 26, 2024 | 4:59 PM

Share

ಬೆಂಗಳೂರು, ಸೆಪ್ಟೆಂಬರ್​ 26: ಸಿಬಿಐ ತನಿಖಾ ದಳಕ್ಕೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್​ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ (Cabinet) ನಿರ್ಧಾರ ಮಾಡಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಮುಕ್ತವಾಗಿ ಸಿಬಿಐ ತನಿಖೆ ನಡೆಸಬಹುದಿತ್ತು. ಈ‌ ಹಿಂದೆ ಮುಕ್ತ ತನಿಖೆ ನಡೆಸಲು ಸರ್ಕಾರ ಅವಕಾಶ ಮಾಡಿಕೊಟ್ಟಿತ್ತು ಎಂದಿದ್ದಾರೆ.

ರಾಜ್ಯದಲ್ಲಿ ಡೆಲ್ಲಿ ಸ್ಪೆಷಲ್​ ಪೊಲೀಸ್ ಎಸ್ಟಾಬ್ಲಿಷ್​ಮೆಂಟ್​ ಆ್ಯಕ್ಟ್ 1946 ಅಡಿ ಅಪರಾಧ ಪ್ರಕರಣ ತನಿಖೆ ಮಾಡಲು ಮುಕ್ತ ಅವಕಾಶ ಇತ್ತು. ಈಗ ಸಿಬಿಐ ಮುಕ್ತ ತನಿಖೆಗೆ ಇದ್ದ ಅಧಿಸೂಚನೆ ಹಿಂಪಡೆಯಲು ನಿರ್ಧಾರ ಮಾಡಲಾಗಿದೆ. ಸಿಬಿಐ ದುರ್ಬಳಕೆ ಆಗಬಹುದು ಎಂಬ ಚರ್ಚೆಯಾಗಿದೆ ಎಂದು ತಿಳಿಸಿದ್ದಾರೆ.

ಎಎನ್​ಐ ಟ್ವೀಟ್ 

ನಾವು ರಾಜ್ಯದಲ್ಲಿ ಸಿಬಿಐ ತನಿಖೆಗೆ ಮುಕ್ತ ಅನುಮತಿಯನ್ನು ಹಿಂಪಡೆಯುತ್ತಿದ್ದೇವೆ. ಆ ಮೂಲಕ ಸಿಬಿಐ ದುರ್ಬಳಕೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಹೆಚ್.ಕೆ.ಪಾಟೀಲ್​, ನಾವು ಸಿಬಿಐಗೆ ವಹಿಸಿದ್ದ ಎಲ್ಲಾ ಪ್ರಕರಣಗಳಲ್ಲಿ ಅವರು ಚಾರ್ಜ್ ಶೀಟ್ ಸಲ್ಲಿಸಿಲ್ಲ, ಅನೇಕ ಪ್ರಕರಣಗಳು ಬಾಕಿ ಉಳಿದಿವೆ. ಹೀಗಾಗಿ ಕೇಂದ್ರ ತನಿಖಾ ಸಂಸ್ಥೆಯು ತಪ್ಪು ದಾರಿ ಹಿಡಿಯುವುದನ್ನು ತಡೆಯುವ ನಿಟ್ಟಿನಲ್ಲಿ ಅಧಿಸೂಚನೆ ವಾಪಸ್​ ಪಡೆದುಕೊಳ್ಳಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಿಬಿಐ ಪಕ್ಷಪಾತದಿಂದ ಕೂಡಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:40 pm, Thu, 26 September 24

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ