Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಬಲ್ ಆಪರೇಟರ್ಸ್ ಕಚೇರಿ ಉದ್ಘಾಟನೆ; ಗ್ರಾಮೀಣ ಕೇಬಲ್ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ: ಅಧ್ಯಕ್ಷ ಪ್ಯಾಟ್ರಿಕ್ ರಾಜು

Karnataka Cable TV Operators Association office inaugurated| ಸ್ವಂತ ಕಚೇರಿ ಉದ್ಘಾಟನೆಗೊಂಡ ಈ ಮಹತ್ವದ ದಿನದಂದು ಕರ್ನಾಟಕ ಕೇಬಲ್​ ಟಿವಿ ಆಪರೇಟರುಗಳ ಒಕ್ಕೂಟದ ಅಧ್ಯಕ್ಷ ಪ್ಯಾಟ್ರಿಕ್ ರಾಜು ಅವರು ಮಹತ್ತರ ಘೋಷಣೆಯೊಂದನ್ನು ಮಾಡಿದ್ದಾರೆ. ಕೇಬಲ್ ಆಪರೇಟರ್ಸ್​ ಸಿಬ್ಬಂದಿ ಕರ್ತವ್ಯ ನಿರ್ವಹಣೆ ವೇಳೆ ಆಕಸ್ಮಿಕವಾಗಿ ಮರಣ ಹೊಂದಿದರೆ ಅವರ ಕುಟುಂಬ ವರ್ಗಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಕೇಬಲ್ ಆಪರೇಟರ್ಸ್ ಕಚೇರಿ ಉದ್ಘಾಟನೆ; ಗ್ರಾಮೀಣ ಕೇಬಲ್ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ: ಅಧ್ಯಕ್ಷ ಪ್ಯಾಟ್ರಿಕ್ ರಾಜು
ಬೆಂಗಳೂರಿನ ಕೋರಮಂಗಲದಲ್ಲಿ ಕರ್ನಾಟಕ ಕೇಬಲ್​ ಟಿವಿ ಆಪರೇಟರ್ಸ್​ ಅಸೋಸಿಯೇಷನ್ ಕಚೇರಿ ಉದ್ಘಾಟನೆ
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on:Mar 26, 2021 | 1:43 PM

ಕರ್ನಾಟಕ ಕೇಬಲ್​ ಟಿವಿ ಆಪರೇಟರುಗಳ ಒಕ್ಕೂಟಕ್ಕೆ ಇಂದು ಮಹತ್ವದ ದಿನವಾಗಿದ್ದು, ಬೆಂಗಳೂರಿನ ಕೋರಮಂಗಲದಲ್ಲಿ ಇಂದು ತನ್ನ ಸ್ವಂತ ಕಚೇರಿಯನ್ನು ತೆರೆದಿದೆ.

ಕರ್ನಾಟಕ ಕೇಬಲ್​ ಟಿವಿ ಆಪರೇಟರ್ಸ್​ ಅಸೋಸಿಯೇಷನ್ (Karnataka Cable TV Operators Association) ಸ್ವಂತ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಾದ್ಯಂತ ಎಲ್ಲ ಕೇಬಲ್ ಆಪರೇಟರುಗಳು ಪಾಲ್ಗೊಂಡಿದ್ದರು. ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಸಮಾರಂಭವನ್ನು ಉದ್ಘಾಟಿಸಿ, ಮಾಧ್ಯಮದ ಜೊತೆ ಮಾತನಾಡಿದರು. ಒಕ್ಕೂಟದ ಅಧ್ಯಕ್ಷ ಪ್ಯಾಟ್ರಿಕ್ ರಾಜು ಅವರು ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೇಬಲ್ ಆಪರೇಟರುಗಳಿಗೆ ಶುಭಾಶಯ ಕೋರುವೆ ಎಂದು ಶಾಸಕ ರಾಮಲಿಂಗಾ ರೆಡ್ಡಿ ಈ ಸಂದರ್ಭದಲ್ಲಿ ಹೇಳಿದರು.

ಸ್ವಂತ ಕಚೇರಿ ಉದ್ಘಾಟನೆಗೊಂಡ ಈ ಮಹತ್ವದ ದಿನದಂದು ಒಕ್ಕೂಟದ ಅಧ್ಯಕ್ಷ ಪ್ಯಾಟ್ರಿಕ್ ರಾಜು ಅವರು ಮಹತ್ತರ ಘೋಷಣೆಯೊಂದನ್ನು ಮಾಡಿದ್ದಾರೆ. ಕೇಬಲ್ ಆಪರೇಟರ್ಸ್​ ಸಿಬ್ಬಂದಿ ಕರ್ತವ್ಯ ನಿರ್ವಹಣೆ ವೇಳೆ ಆಕಸ್ಮಿಕವಾಗಿ ಮರಣ ಹೊಂದಿದರೆ ಅವರ ಕುಟುಂಬ ವರ್ಗಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಇದೀಗ ತಂತ್ರಜ್ಞಾನ ಯುಗ. ಅದಕ್ಕೆ ತಕ್ಕಂತೆ ನಾವೂ ತಂತ್ರಜ್ಞಾನದ ಉನ್ನತೀಕರಣ ಮಾಡಿಕೊಳ್ಳಬೇಕು. ಹಾಗಾಗಿ, ಗ್ರಾಮೀಣ ಭಾಗದ ಕೇಬಲ್ ಆಪರೇಟರುಗಳು ಮತ್ತು ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು ಎಂದು ಪ್ಯಾಟ್ರಿಕ್ ರಾಜು ಇದೇ ಸಂದರ್ಭದಲ್ಲಿ ಹೇಳಿದರು. ಇದೇ ವೇಳೆ ತಿರುಮಲೇಶ್ ದೇಸಾಯಿ ನೇತೃತ್ವದಲ್ಲಿ ಪ್ರತ್ಯೇಕ ಮಾಧ್ಯಮ ಮಾಹಿತಿ ವಿಭಾಗದ ನೆರವು ಪಡೆಯುವಂತೆ ಒಕ್ಕೂಟದ ಸದಸ್ಯರಿಗೆ ಅವರು ಕರೆ ನೀಡಿದರು.

ಇದನ್ನೂ ಓದಿ: ಫೈಬರ್​ ಕೇಬಲ್ ಅಳವಡಿಕೆಯಲ್ಲಿ ಅಕ್ರಮ ಆರೋಪ: ವಿಜಯಪುರದ BSNL ಕಚೇರಿ ಮೇಲೆ CBI ದಾಳಿ

Published On - 1:40 pm, Fri, 26 March 21

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು