AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬಿಸಿ ವರ್ಗೀಕರಣದಲ್ಲಿ ಬದಲಾವಣೆ, ಮೀಸಲಾತಿ ಶೇ 51ಕ್ಕೆ ಹೆಚ್ಚಿಸಲು ಜಾತಿ ಗಣತಿ ವರದಿಯಲ್ಲಿ ಶಿಫಾರಸು

ಒಬಿಸಿ ವರ್ಗೀಕರಣದಲ್ಲಿ ಬದಲಾವಣೆ ಮಾಡುವುದರ ಜತೆಗೆ, ಒಬಿಸಿ ಮೀಸಲಾತಿಯನ್ನೂ ಹೆಚ್ಚು ಮಾಡಬೇಕೆಂದು ಜಾತಿ ಗಣತಿ ವರದಿಯಲ್ಲಿ ಜಯಪ್ರಕಾಶ್ ಹೆಗ್ಡೆ ಆಯೋಗ ಶಿಫಾರಸು ಮಾಡಿರುವುದು ಗೊತ್ತಾಗಿದೆ. ಇದಕ್ಕೆ ಒಕ್ಕಲಿಗರ ಸಂಘದಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಹಾಗಾದರೆ, ಜಯಪ್ರಕಾಶ್ ಹೆಗ್ಡೆ ಆಯೋಗ ಮಾಡಿರುವ ಶಿಫಾರಸೇನು? ಹಾಲಿ ಮೀಸಲಾತಿ ಎಷ್ಟಿದೆ? ಇಲ್ಲಿದೆ ವಿವರ.

ಒಬಿಸಿ ವರ್ಗೀಕರಣದಲ್ಲಿ ಬದಲಾವಣೆ, ಮೀಸಲಾತಿ ಶೇ 51ಕ್ಕೆ ಹೆಚ್ಚಿಸಲು ಜಾತಿ ಗಣತಿ ವರದಿಯಲ್ಲಿ ಶಿಫಾರಸು
ಜಾತಿ ಗಣತಿಯ ಎಕ್ಸ್​​ಕ್ಲೂಸಿವ್ ಮಾಹಿತಿ
Pramod Shastri G
| Updated By: Ganapathi Sharma|

Updated on: Apr 12, 2025 | 11:38 AM

Share

ಬೆಂಗಳೂರು, ಏಪ್ರಿಲ್ 12: ಒಬಿಸಿ ಮೀಸಲಾತಿಯಲ್ಲಿ (OBC Reservation) ಬದಲಾವಣೆ ಹಾಗೂ ಒಬಿಸಿ ವರ್ಗೀಕರಣದಲ್ಲೂ ಬದಲಾವಣೆಗೆ ಜಾತಿ ಗಣತಿಯಲ್ಲಿ (Caste Census) ಶಿಫಾರಸು ಮಾಡಲಾಗಿದೆ ಎಂಬ ವಿಚಾರ ಇದೀಗ ತಿಳಿದುಬಂದಿದೆ. ಒಬಿಸಿ ಮೀಸಲಾತಿ ಹೆಚ್ಚಿಸುವಂತೆ ಜಯಪ್ರಕಾಶ್ ಹೆಗ್ಡೆ ಆಯೋಗದಿಂದ ಶಿಫಾರಸು ಮಾಡಲಾಗಿದೆ ಎಂಬುದು ಗೊತ್ತಾಗಿದೆ. ಒಬಿಸಿ ಮೀಸಲಾತಿಯನ್ನು ಶೇಕಡಾ 32 ರಿಂದ ಶೇಕಡಾ 51 ಕ್ಕೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಅದೇ ರೀತಿ ಹಾಲಿ ಇರುವ ಪ್ರವರ್ಗ 1 ಬದಲಿಗೆ ಪ್ರವರ್ಗ A, ಪ್ರವರ್ಗ B ರಚನೆಗೆ ಶಿಫಾರಸು ಮಾಡಲಾಗಿದೆ. ಜತೆಗೆ, ಪ್ರವರ್ಗ 1ಎಗೆ ಶೇ 6,  1ಬಿಗೆ ಶೇ 12, 2ಎಗೆ ಶೇ 10, 2ಬಿಗೆ ಶೇ 8ರಷ್ಟು, 3ಎಗೆ ಶೇ 7ರಷ್ಟು, 3ಬಿಗೆ ಶೇ 8ರಷ್ಟು ಮೀಸಲಾತಿ ನೀಡುವಂತೆ ಶಿಫಾರಸು ಮಾಡಲಾಗಿದೆ.

ಪ್ರವರ್ಗ 1ಕ್ಕೆ ಶೇ 4, 2ಎಗೆ ಶೇ 15, 2ಬಿಗೆ ಶೇ 4, 3ಎಗೆ ಶೇ 4ರಷ್ಟು, 3ಬಿಗೆ ಶೇ 5, ಎಸ್‌ಸಿಗೆ ಶೇ 17.15, ಎಸ್‌ಟಿಗೆ ಶೇ 6.95ರಷ್ಟು ಮೀಸಲಾತಿ ನೀಡುವಂತೆ ಶಿಫಾರಸು ಮಾಡಲಾಗಿದೆ. ಸದ್ಯ, ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ 10ರಷ್ಟು ಮೀಸಲಾತಿಯಿದೆ. ಒಟ್ಟು ಮೀಸಲಾತಿ ಪ್ರಮಾಣ ಶೇಕಡಾ 66ರಷ್ಟಿದೆ. ಪ್ರವರ್ಗ ಒಂದರಲ್ಲಿದ್ದ ಕೆಲ ಜಾತಿಗಳನ್ನು 1Aಗೆ ವರ್ಗೀಕರಿಸಲು ಶಿಫಾರಸು ಮಾಡಲಾಗುದೆ. ಕೆಲ ಜಾತಿಗಳನ್ನು ಕಾಯಕದ ಆಧಾರದಲ್ಲಿ 1 A ಗೆ ವರ್ಗೀಕರಿಸಲು ಶಿಫಾರಸು ಮಾಡಲಾಗಿದೆ.

ಪ್ರವರ್ಗ 1 ಹಾಗೂ 2A ನಲ್ಲಿ ಇದ್ದ ಕೆಲ ಸಮುದಾಯಗಳನ್ನು ಹಾಲಿ ಸಾಮಾಜಿಕ ಪರಿಸ್ಥಿತಿ ಆಧರಿಸಿ 1 B ಗೆ ವರ್ಗಿಕರಿಸಲು ಶಿಫಾರಸು ಮಾಡಲಾಗಿದೆ. ಜತೆಗೆ, ಕುಶಲಕರ್ಮಿ, ಅಲೆಮಾರಿ, ಕುಲಕಸುಬು ಆಧಾರಿತವಾಗಿ ವರ್ಗೀಕರಣ ಮಾಡಿ ಶಿಫಾರಸು ಮಾಡಲಾಗಿದೆ.

ಇದನ್ನೂ ಓದಿ
Image
ಜಾತಿ ಗಣತಿ ವರದಿ ಚರ್ಚಿಸಲು ಏ. 17ಕ್ಕೆ ಕರ್ನಾಟಕ ಸಚಿವ ಸಂಪುಟ ವಿಶೇಷ ಸಭೆ
Image
ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ: ಸಿದ್ದರಾಮಯ್ಯ ಗ್ಯಾರಂಟಿ ಮಾತು!
Image
ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ,ರಾಜ್ಯದ 7 ಕೋಟಿ ಕನ್ನಡಿಗರ ಸಮೀಕ್ಷೆ
Image
ಸರ್ಕಾರ ಬಿದ್ದರೆ ಬೀಳಲಿ ಜಾತಿಗಣತಿ ಜಾರಿ ಮಾಡಲೇಬೇಕು: ಬಿಕೆ ಹರಿಪ್ರಸಾದ್

ಹಾಲಿ ಮೀಸಲಾತಿ ಪ್ರಮಾಣ ಹೇಗಿದೆ?

  • ಪ್ರವರ್ಗ 1 – ಶೇ 4
  • 2ಎ – ಶೇ 15
  • 2ಬಿ- ಶೇ 4
  • 3ಎ – ಶೇ 4
  • 3ಬಿ- ಶೇ 5
  • ಪರಿಶಿಷ್ಟ ಜಾತಿ – ಶೇ 17.15
  • ಪರಿಶಿಷ್ಟ ಪಂಗಡ – ಶೇ 6.95
  • ಆರ್ಥಿಕವಾಗಿ ಹಿಂದುಳಿದವರು – ಶೇ 10
  • ಒಟ್ಟು ಮೀಸಲಾತಿ ಪ್ರಮಾಣ – ಶೇ 66

ಇದನ್ನೂ ಓದಿ: ಜಾತಿ ಗಣತಿ ವರದಿ ಬಗ್ಗೆ ಚರ್ಚಿಸಲು ಏ. 17ಕ್ಕೆ ಕರ್ನಾಟಕ ಸಚಿವ ಸಂಪುಟ ವಿಶೇಷ ಸಭೆ ನಿಗದಿ

ಜಾತಿ ಗಣತಿಗೆ ಒಕ್ಕಲಿಗರ ಸಂಘದಿಂದ ವಿರೋಧ

ಜಾತಿ ಗಣತಿ ಹಾಗೂ ಮೀಸಲಾತಿ ಬದಲಾವಣೆಗೆ ಒಕ್ಕಲಿಗರ ಸಂಘ ವಿರೋಧ ವ್ಯಕ್ತಪಡಿಸಿದೆ. ನಾವು ಮೊದಲಿನಿಂದಲೂ ಈಗಿನ ಜಾತಿ ಗಣತಿಯನ್ನು ವಿರೋಧಿಸಿದ್ದೇವೆ. ಹಾಗೊಂದು ವೇಳೆ ಜಾರಿ ಮಾಡುವುದೇ ಆದರೆ, ಹೊಸದಾಗಿ ಸಂಪೂರ್ಣವಾಗಿ ಸಮೀಕ್ಷೆ ಮಾಡಿ ಅನುಷ್ಠಾನ ಮಾಡಲಿ ಎಂದು ಒಕ್ಕಲಿಗರ ಸಂಘದ ಕೆಂಚೇಗೌಡ ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
12 ವೈಡ್, 1 ನೋ ಬಾಲ್... ಓವರ್ ಮುಗಿಯುವ ಮುನ್ನವೇ ಪಂದ್ಯವೇ ಮುಗಿದು ಹೋಯ್ತು!
12 ವೈಡ್, 1 ನೋ ಬಾಲ್... ಓವರ್ ಮುಗಿಯುವ ಮುನ್ನವೇ ಪಂದ್ಯವೇ ಮುಗಿದು ಹೋಯ್ತು!