AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಧರ್ಮ ವರ್ಸಸ್ ಲಿಂಗಾಯತ: ಪಂಚಮಸಾಲಿ ಮುಖಂಡರ ಸಭೆಯಲ್ಲಿ ಜಟಾಪಟಿ

ಜಾತಿಗಣತಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಕ್ರಿಶ್ಚಿಯನ್ ಜೊತೆ ಹಿಂದೂ ಜಾತಿಗಳ ಹೆಸರು ಇರೋದಕ್ಕೆ ಬಿಜೆಪಿ ವಿರೋಧಿಸಿದೆ. ಇದರ ಮಧ್ಯೆ ಲಿಂಗಾಯತ ಲಡಾಯಿಯೂ ಶುರುವಾಗಿದೆ. ಲಿಂಗಾಯತರಲ್ಲಿ ಪ್ರತ್ಯೇಕ ಧರ್ಮದ ವಿಚಾರವಾಗಿ ಗೊಂದಲ ಸೃಷ್ಟಿಯಾಗಿದೆ. ಯಾವ ಕಾಲಂನಲ್ಲಿ ಏನು ಬರೆಸಬೇಕು ಎಂಬುದು ಜಿಜ್ಞಾಸೆಯಾಗಿದೆ. ಈ ಸಂಬಂಧ ಲಿಂಗಾಯತ ಪಂಚಮಸಾಲಿ ಮುಖಂಡರ ಸಭೆಯಲ್ಲಿ ಗದ್ದಲ, ಗಲಾಟೆಯಾಗಿದೆ.

ಹಿಂದೂ ಧರ್ಮ ವರ್ಸಸ್ ಲಿಂಗಾಯತ: ಪಂಚಮಸಾಲಿ ಮುಖಂಡರ ಸಭೆಯಲ್ಲಿ ಜಟಾಪಟಿ
Panchamasali Lingayat
ರಮೇಶ್ ಬಿ. ಜವಳಗೇರಾ
|

Updated on: Sep 17, 2025 | 4:54 PM

Share

ಬೆಂಗಳೂರು, (ಸೆಪ್ಟೆಂಬರ್ 17): ಇದೇ ಸೆಪ್ಟೆಂಬರ್ 22 ಸೋಮವಾರದಿಂದ ರಾಜ್ಯಾದ್ಯಂತ ಜಾತಿಗಣತಿ (caste census)  ಆರಂಭವಾಗುತ್ತಿದೆ. ಈ ನಡುವೆ ಲಿಂಗಾಯತ ಸಮುದಾಯದಲ್ಲಿ ತಾವು ಏನೆಂದು ಬರೆಸಬೇಕು. ಧರ್ಮದ ಕಾಲಂನಲ್ಲಿ ಬರೆಸಬೇಕಾ? ಜಾತಿಯ ಕಾಲಂನಲ್ಲಿ ಬರೆಸಬೇಕಾ ಎಂಬ ಗೊಂದಲ ಸೃಷ್ಟಿಯಾಗಿದೆ. ಧರ್ಮದ ಕಾಲಂನಲ್ಲಿರುವ ಇತರೆ ಕಾಲಂನಲ್ಲಿ ವೀರಶೈವ-ಲಿಂಗಾಯತ ಎಂದು ಬರೆಸುವಂತೆ ಮಹಾಸಭಾ ಸೂಚನೆ ನೀಡಿದೆ. ಆದ್ರೆ, ಮತ್ತೊಂದೆಡೆ ಪಂಚಮಸಾಲಿ ಲಿಂಗಾಯತ (panchamasali lingayat) ಮುಖಂಡರ ಸಭೆಯಲ್ಲೂ ಸಹ ಇದೇ ವಿಚಾರಕ್ಕೆ ಗಲಾಟೆಯಾಗಿದ್ದು, ಅಂತಿಮವಾಗಿ ಧರ್ಮದ ಕಾಲಂನಲ್ಲಿ ಹಿಂದೂ ಎಂದು ಬರೆಯಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಬೆಂಗಳೂರಿನ ಖಾಸಗಿ ಹೋಟೆಲ್​ ನಲ್ಲಿ ನಡೆದ ಪಂಚಮಸಾಲಿ ಲಿಂಗಾಯತ ಸಮುದಾಯದ ಸಭೆ ನಡೆದಿದ್ದು, ಈ ವೇಳೆ ಧರ್ಮದ ಕಾಲಂನಲ್ಲಿ ಇರ್ದಿಷ್ಟವಾಗಿ ಒಂದು ಹೆಸರು ಬರೆಸಲು ಭಾರೀ ಗಲಾಟೆ, ಗುದ್ದಲ ಉಂಟಾಗಿದೆ. ಧರ್ಮದ ಕಾಲಂನಲ್ಲಿ ಹಿಂದೂ ಎಂದು ಬರೆಸೋಣ ಎಂದ ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದರು. ಆದ್ರೆ, ಇದಕ್ಕೆ ಪಂಚಮಸಾಲಿ ನಾಯಕ ನಾಯಕರು ವಿರೋಧ ವ್ಯಕ್ತಪಡಿಸಿದ್ದು, ಲಿಂಗಾಯತ ಧರ್ಮ ಎಂದು ಬರೆಸೋಣ ಎಂದು ವಾದಿಸಿದ್ದಾರೆ. ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ಸಿಕ್ಕಿಲ್ಲ. ಹೀಗಾಗಿ ಹಿಂದೂ ಅಂತಾನೇ ಬರೆಸೋಣ ಎಂದ ಹಲವು ನಾಯಕರ ವಾದವಾಗಿದೆ.

ಇದನ್ನೂ ಓದಿ: ಜಾತಿ ಗಣತಿ: ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮದಲ್ಲಿ ಗುರುತಿಸುವುದಕ್ಕೆ ಬಿಜೆಪಿ ಲಿಂಗಾಯತ ನಾಯಕರ ವಿರೋಧ

ಇನ್ನು ಸಭೆಯಲ್ಲಿದ್ದ ಮುರುಗೇಶ್ ನಿರಾಣಿ ಲಿಂಗಾಯತ ಧರ್ಮ ಅಂತ ಬರೆಸಿದ್ರೆ ಈ ನಿಲುವಿನಿಂದ ಮತವಿಭಜನೆ ಆಗುತ್ತೆ. ಕಾಂಗ್ರೆಸ್ ಅಹಿಂದ ಎಂದು ಹೋಗುತ್ತಿದ್ದಾರೆ. ನಾವೇನು ವೋಟು ಬ್ಯಾಂಕ್ ಅಲ್ಲ. ನಮ್ಮನ್ನು ಬರೀ ಚುನಾವಣೆಯ ವಿಚಾರಕ್ಕೆ ಬಳಸಬೇಡಿ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಸಭೆಯ ನಿರ್ಧಾರದ ಬಗ್ಗೆ ಅಧ್ಯಕ್ಷ ಹೇಳಿದ್ದಿಷ್ಟು

ಪಂಚಮಸಾಲಿ ಸಂಘದ ಅಧ್ಯಕ್ಷ ಸೋಮನಗೌಡ ಪಾಟೀಲ್ ಮಾತನಾಡಿ, ಧರ್ಮದ ಕಾಲಂನಲ್ಲಿ ಹಿಂದೂ ಅಂತಾ ಬರೆಸಲು ತೀರ್ಮಾನವಾಗಿದೆ. ಲಿಂಗಾಯತ ಪಂಚಮಸಾಲಿ ಮುಖಂಡರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪಂಚಮಸಾಲಿಗಳು ಧರ್ಮದ ಕಾಲಂನಲ್ಲಿ ಹಿಂದೂ ಎಂದು ಬರೆಸಬೇಕು. ಜಾತಿ ಕಾಲಂನಲ್ಲಿ ಪಂಚಮಸಾಲಿ ಎಂದು ಬರೆಸಲು ನಿರ್ಧಾರವಾಗಿದೆ. ಉಪಜಾತಿ ಕಾಲಂನಲ್ಲಿ ಏನನ್ನೂ ನಮೂದಿಸಬಾರದು ಎಂದು ಮಾಹಿತಿ ನೀಡಿದರು.

ಸ್ಪಷ್ಟನೆ ನೀಡಿದ ವಚನಾನಂದಶ್ರೀ

ಈ ಕುರಿತು ಟಿವಿ9ಗೆ ಪಂಚಮಸಾಲಿ ಪೀಠದ ವಚನಾನಂದಶ್ರೀ ಪ್ರತಿಕ್ರಿಯಿಸಿದ್ದು, ಸೆ.22ರಿಂದ ರಾಜ್ಯದಲ್ಲಿ ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ 16 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಲಿಖಿತ, ವಿಡಿಯೋ ರೆಕಾರ್ಡ್ ಮೂಲಕ ಅಭಿಪ್ರಾಯವನ್ನ ಪಡೆದುಕೊಳ್ಳಲಾಗಿದೆ. ಧರ್ಮದ ಕಾಲಂನಲ್ಲಿ ಹಿಂದೂ ಎಂದು ಬರೆಸಬೇಕು. ಜಾತಿ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ ಅಂತಾ ಬರೆಸಬೇಕು ಎಂದು ಸ್ಪಷ್ಟಪಡಿಸಿದರು.

ಡಿಜಿಟಲ್ ಆಗಿರುವುದರಿಂದ ನಂಬರ್​ ಗಳನ್ನು ಬರೆಯಬೇಕು ಅಷ್ಟೇ. ನಮ್ಮ ಜಾತಿ ಪ್ರಮಾಣಪತ್ರದಲ್ಲಿ ಹಿಂದೂ ಲಿಂಗಾಯತ ಅಂತಾ ಇದೆ. ಜಾತಿ ಅಂತಾ ಬಂದಾಗ ಪಂಚಮಸಾಲಿ ಲಿಂಗಾಯತ ಎಂದು ಬರೆಸಬೇಕು. ಜಾತಿ ಕೋಡ್ A0868 ಎಂದು ನಮೂದಿಸಬೇಕು ಎಂದು ಹೇಳಿದರು.

ಇದೆಲ್ಲದರ ಮಧ್ಯೆ ಶುಕ್ರವಾರ ಅಂದ್ರೆ ಸೆಪ್ಟೆಂಬರ್ 19ರಂದು ಹುಬ್ಬಳ್ಳಿಯಲ್ಲಿ ವೀರಶೈವ ಲಿಂಗಾಯತರ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲೂ ಇದೇ ವಿಚಾರವಾಗಿ ಚರ್ಚೆ ಆಗಲಿದ್ದು, ಲಿಂಗಾಯತರು, ಪಂಚಮಸಾಲಿ ಲಿಂಗಾಯತರು ಜಾತಿ ಕಾಲಂ ಹಾಗೂ ಧರ್ಮದ ಕಾಲಂನಲ್ಲಿ ಏನೇನು ಬರೆಸಬೇಕೆಂದು ಸ್ವಾಮೀಜಿಗಳು ಚರ್ಚಿಸಿ ಘೋಷಣೆ ಮಾಡಲಿದ್ದಾರೆ.

ಲಿಂಗಾಯತ – ಪಂಚಮಿಸಾಲಿಗಳ ನಡುವೆ ಭಿನ್ನಾಭಿಪ್ರಾಯ

ಹೌದು…ನಿನ್ನೆ ವೀರಶೈವ ಮಹಾಸಭಾವು ಜಾತಿ ಕಾಲಂನಲ್ಲಿ ವೀರಶೈವ-ಲಿಂಗಾಯತ ಎಂದು ಬರೆಸಬೇಕೆಂದು ಕರೆ ನೀಡಿದೆ. ಆದ್ರೆ, ಇದಕ್ಕೆ ಪಂಚಮಸಾಲಿ ಲಿಂಗಾಯತರು ಆಕ್ಷೇಪ ವ್ಯಕ್ತಪಡಿಸಿದ್ದು,  ಜಾತಿ ಕಾಲಂನಲ್ಲಿ ವೀರಶೈವ ಲಿಂಗಾಯತ ಬದಲಾಗಿ ಪಂಚಮಸಾಲಿ ಲಿಂಗಾಯತ ಎಂದು ನಮೂದಿಸಬೇಕೆಂದು ವಚನಾನಂದಶ್ರೀ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಎರಡು ಸಮುದಾಯಗಳ ನಡುವೆ ಭಿನ್ನ ಅಭಿಪ್ರಾಯಗಳ ವ್ಯಕ್ತವಾಗಿದ್ದು, ಹುಬ್ಬಳ್ಳಿಯಲ್ಲಿ ನಡೆಯಲಿರುವ ಸಭೆಯಲ್ಲಿ ಸ್ಪಷ್ಟವಾಗಲಿದೆ.

ಒಟ್ಟಿನಲ್ಲಿ ಲಿಂಗಾಯತರು, ಪಂಚಮಸಾಲಿ ಲಿಂಗಾಯತರು ಜಾತಿಗಣತಿ ವೇಳೆ ಏನು ಬರೆಸಬೇಕು. ಯಾವ ಕಾಲಂನಲ್ಲಿ ಏನು ಬರೆಸಬೇಕು ಎಂಬುದರ ಕುರಿತು ಸಮುದಾಯದ ಮುಖಂಡರುಗಳು ಸ್ಪಷ್ಟವಾದ ನಿರ್ಧಾರ ಕೈಗೊಂಡಿದ್ದು, ಹುಬ್ಬಳ್ಳಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಸ್ವಾಮೀಜಿಗಳು ಏನು ಕರೆ ಕೊಡುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ