Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ಗಣತಿ ವರದಿ ಜಾರಿಗೆ ವಿರೋಧ: ಒಕ್ಕಲಿಗ, ವೀರಶೈವ ಲಿಂಗಾಯತ ಒಟ್ಟಿಗೆ ಹೋರಾಟ

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಜಾತಿ ಗಣತಿ ವರದಿಗೆ ಒಕ್ಕಲಿಗ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ. ವರದಿಯಲ್ಲಿ ಒಕ್ಕಲಿಗರ ಸಂಖ್ಯೆಯನ್ನು ಕಡಿಮೆ ಅಂದಾಜಿಸಲಾಗಿದೆ. ಹೀಗಾಗಿ ನಮ್ಮ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಒಕ್ಕಲಿಗ ಸಂಘದ ಅಧ್ಯಕ್ಷರು ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಈ ವಿಷಯದ ಬಗ್ಗೆ ಚರ್ಚಿಸಲು ಸಭೆ ಕರೆದಿದ್ದಾರೆ. ಒಕ್ಕಲಿಗರು ಮತ್ತು ಇತರ ಅನ್ಯಾಯಕ್ಕೊಳಗಾದ ಸಮುದಾಯಗಳು ಒಟ್ಟಾಗಿ ಹೋರಾಟ ಮಾಡಲು ಒಕ್ಕಲಿಗರ ಸಂಘ ಘೋಷಿಸಿದೆ.

ಜಾತಿ ಗಣತಿ ವರದಿ ಜಾರಿಗೆ ವಿರೋಧ: ಒಕ್ಕಲಿಗ, ವೀರಶೈವ ಲಿಂಗಾಯತ ಒಟ್ಟಿಗೆ ಹೋರಾಟ
ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ
Follow us
Sunil MH
| Updated By: ವಿವೇಕ ಬಿರಾದಾರ

Updated on: Apr 15, 2025 | 4:41 PM

ಬೆಂಗಳೂರು, ಏಪ್ರಿಲ್​ 15: ಕರ್ನಾಟಕ ಕಾಂಗ್ರೆಸ್​ ಸರ್ಕಾರ (Congress Government) ಜಾರಿ ಮಾಡಲು ಮುಂದಾಗಿರುವ ಜಾತಿ ಗಣತಿ ವರದಿಗೆ (Karnataka Caste Census Report) ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಜಾತಿಗಣತಿ ವರದಿ ಜಾರಿಯಾದರೆ ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾಗುತ್ತದೆ. ಹೀಗಾಗಿ, ಅನ್ಯಾಯಕ್ಕೊಳಗಾದ ಸಮುದಾಯ ಒಟ್ಟಿಗೆ ಹೋರಾಟ ಮಾಡುತ್ತೇವೆ. ಒಕ್ಕಲಿಗ ಮತ್ತು ವೀರಶೈವ ಲಿಂಗಾಯತರು ಒಟ್ಟಿಗೆ ಸೇರಿ ಹೋರಾಟ ಮಾಡುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ಎಚ್ಚರಿಕೆ ನೀಡಿದರು.

ಬೆಂಗಳೂರಿನಲ್ಲಿ ಟಿವಿ9 ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಾಂತರಾಜು ಆಯೋಗ ವರದಿ ಜಾರಿಗೆ ಮುಂದಾಗಿದೆ. ಕಾಂತರಾಜು ಆಯೋಗ ವರದಿ ಆರೋಗ್ಯಕರವಾಗಿಲ್ಲ. 10 ವರ್ಷದ ಬಳಿಕ ಜಾತಿಗಣತಿ ವರದಿ ಬಿಡುಗಡೆ ಮಾಡಲಾಗಿದೆ. ಕೇವಲ 60 ಲಕ್ಷ ಒಕ್ಕಲಿಗ ಸಮುದಾಯದ ಜನ ಇದ್ದಾರೆ ಎಂದಿದ್ದಾರೆ. ಪ್ರತಿ ತಾಲೂಕಿನಲ್ಲಿ ಚುನಾವಣೆ ಸಂದರ್ಭದಲ್ಲಿ ಸಮೀಕ್ಷೆ ನೋಡಿದ್ದೇವೆ‌. ಜಾತಿವಾರು ಸಮುದಾಯ ಲೆಕ್ಕ ನೋಡಿದಾಗ ಲೆಕ್ಕ ಸಿಗಲಿದೆ. 224 ಕ್ಷೇತ್ರದಲ್ಲಿ ಕೇವಲ 61 ಲಕ್ಷ ಮಾತ್ರ ಒಕ್ಕಲಿಗರು ಇದ್ದಾರಾ ಎಂದು ಪ್ರಶ್ನಿಸಿದರು.

ಒಕ್ಕಲಿಗರ ಸಮುದಾಯವನ್ನು ಆರನೇ ಸ್ಥಾನದಲ್ಲಿ ಇರಿಸಲಾಗಿದೆ. ಮೀಸಲಾತಿ ಯಾರಿಗೆ ಹೆಚ್ಚು ಕೊಡಿಸಬೇಕು ಅನ್ನೋ ದೃಷ್ಟಿಯಿಂದ ಮಾಡಲಾಗಿದೆ. ನಮ್ಮ ಜನಾಂಗ, ವೀರಶೈವ ಲಿಂಗಾಯತರು, ಇತರೆ ಅನ್ಯಾಯಕ್ಕೊಳಗಾದ ಸಮುದಾಯ ಒಟ್ಟಿಗೆ ಸೇರಿ ಹೋರಾಟ ಮಾಡಲಿದ್ದೇವೆ. ಜಾತಿಗಣತಿ ವರದಿಗೆ ರಾಜ್ಯ ಒಕ್ಕಲಿಗ ಸಂಘ ತೀವ್ರ ವಿರೋಧಿಸುತ್ತೆ ಎಂದು ಹೇಳಿದರು.

ಇದನ್ನೂ ಓದಿ
Image
ಜಾತಿಗಣತಿ ಜಟಾಪಟಿ: ನಾಳೆ ಒಕ್ಕಲಿಗ ಶಾಸಕರ ಸಭೆ ಕರೆದ ಡಿಕೆ ಶಿವಕುಮಾರ್​
Image
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
Image
ಜಾತಿ ಗಣತಿ ವರದಿ ಹಿಂಪಡೆದು, ವೈಜ್ಞಾನಿಕ ವರದಿ ರೂಪಿಸಿ: ಅಶೋಕ್ ಆಗ್ರಹ
Image
ಜಾತಿ ಗಣತಿ ವರದಿ ಚರ್ಚಿಸಲು ಏ. 17ಕ್ಕೆ ಕರ್ನಾಟಕ ಸಚಿವ ಸಂಪುಟ ವಿಶೇಷ ಸಭೆ

ಇದನ್ನೂ ಓದಿ: ಒಬಿಸಿ ವರ್ಗೀಕರಣದಲ್ಲಿ ಬದಲಾವಣೆ, ಮೀಸಲಾತಿ ಶೇ 51ಕ್ಕೆ ಹೆಚ್ಚಿಸಲು ಜಾತಿ ಗಣತಿ ವರದಿಯಲ್ಲಿ ಶಿಫಾರಸು

ಡಿಸಿಎಂ ಡಿಕೆ ಶಿವಕುಮಾರ್​ ಸಭೆ

ಜಾತಿಗಣತಿ ವರದಿ ಜಾರಿಗೆ ಒಕ್ಕಲಿಗೆ ಸಮುದಾಯದಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ, ಒಕ್ಕಲಿಗ ಸಮುದಾಯದ ಶಾಸಕರ ಜೊತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಸಭೆ ನಡೆಸಲಿದ್ದಾರೆ. ಸಮುದಾಯದ ಸಚಿವರು, ಹಿರಿಯರ ಅಭಿಪ್ರಾಯ ಕೇಳಬೇಕು. ಸಮುದಾಯ ಪ್ರತಿನಿಧಿಯಾಗಿ ಕ್ಯಾಬಿನೆಟ್​ನಲ್ಲಿ ಸಲಹೆ ನೀಡಬೇಕು. ಅದಕ್ಕಾಗಿ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸುವೆ. ನಾನು ಸರ್ವಜ್ಞನಲ್ಲ, ಪಂಡಿತನೂ ಅಲ್ಲ, ಹಳ್ಳಿಯಿಂದ ಬಂದವನು. ಎಲ್ಲ ಅವಲೋಕಿಸಿ, ತಿಳಿದುಕೊಂಡು ಕ್ಯಾಬಿನೆಟ್​ನಲ್ಲಿ ಮಾತಾಡುವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ