AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಇಟಿ ಪರೀಕ್ಷೆ: ಜನಿವಾರ ತೆಗೆಸಿದ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲು ಒತ್ತಾಯ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಆಘಾತಕ್ಕೊಳಗಾದ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡುವಂತೆ ಬ್ರಾಹ್ಮಣ ಮಹಾಸಭಾ ಒತ್ತಾಯಿಸಿದೆ. ಈ ವಿಚಾರವಾಗಿ ನಾಳೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಲಿದ್ದು, ಶಾಸಕ ಸುರೇಶ್ ಕುಮಾರ್ ಕೂಡ ಅಧಿಕಾರಿಗಳ ನಡೆಯನ್ನು ಖಂಡಿಸಿದ್ದಾರೆ.

ಸಿಇಟಿ ಪರೀಕ್ಷೆ: ಜನಿವಾರ ತೆಗೆಸಿದ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲು ಒತ್ತಾಯ
ಜನಿವಾರ ವಿವಾದ (ಸಾಂದರ್ಭಿಕ ಚಿತ್ರ)Image Credit source: tv9
ವಿನಯ್​ ಕಾಶಪ್ಪನವರ್​
| Edited By: |

Updated on: Apr 27, 2026 | 7:25 AM

Share

ಬೆಂಗಳೂರು, ಏಪ್ರಿಲ್ 27: ರಾಜ್ಯದಲ್ಲಿ ಸಿಇಟಿ (KCET) ಪರೀಕ್ಷೆಯ ವೇಳೆ ವಿದ್ಯಾರ್ಥಿಗಳ ಜನಿವಾರ (Janivara) ತೆಗೆಸಿರುವುದು ಈಗ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ಈ ಘಟನೆಯಿಂದ ವಿದ್ಯಾರ್ಥಿಗಳು ಪರೀಕ್ಷೆ ಸಮಯದಲ್ಲಿ ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದು, ಅವರಿಗೆ ನ್ಯಾಯ ಒದಗಿಸಲು ‘ಗ್ರೇಸ್ ಮಾರ್ಕ್ಸ್’ ನೀಡಬೇಕು ಅಥವಾ ‘ಮರು ಪರೀಕ್ಷೆ’ ನಡೆಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ಸಿಇಟಿ ಪರೀಕ್ಷೆಯ ಮೊದಲ ದಿನವೇ ಭೌತಶಾಸ್ತ್ರ (Physics) ಪರೀಕ್ಷೆಯ ವೇಳೆ ಹಲವು ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಲಾಗಿದೆ. ಈ ಕೃತ್ಯವು ವಿದ್ಯಾರ್ಥಿಗಳ ಮನಸ್ಸಿನ ಮೇಲೆ ತೀವ್ರ ಪ್ರಭಾವ ಬೀರಿದೆ ಎಂದು ಬ್ರಾಹ್ಮಣ ಮಹಾಸಭಾ ಹೇಳಿದೆ.

ಜನಿವಾರ ತೆಗೆಸಿದ ಆಘಾತ ಮತ್ತು ಒತ್ತಡದಲ್ಲಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಸರಿಯಾಗಿ ಬರೆಯಲು ಸಾಧ್ಯವಾಗಿಲ್ಲ. ಇದು ಅವರ ರ್ಯಾಂಕಿಂಗ್ ಮೇಲೆ ಹೊಡೆತ ಬೀಳಲಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ರಘುನಾಥ್ ಆತಂಕ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸರ್ಕಾರ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ಮನವಿ ಸಲ್ಲಿಸಲಾಗಿದೆ.

ಶಾಸಕ ಸುರೇಶ್ ಕುಮಾರ್ ಬೇಸರ

ಘಟನೆ ಕುರಿತು ಪ್ರತಿಕ್ರಿಯಿಸಿರುವ ರಾಜಾಜಿನಗರ ಶಾಸಕ ಸುರೇಶ್ ಕುಮಾರ್, ಪರೀಕ್ಷಾ ಕೇಂದ್ರಗಳಲ್ಲಿ ಸಿಬ್ಬಂದಿ ದೌರ್ಜನ್ಯ ಎಸಗುತ್ತಿದ್ದಾರೆ. ಜನಿವಾರ ಕತ್ತರಿಸುವುದು, ಕಿವಿಯೋಲೆ ತೆಗೆಸುವುದು ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರುತ್ತದೆ. ಕಳೆದ ವರ್ಷವೇ ಹೈಕೋರ್ಟ್‌ನಲ್ಲಿ ಇಂತಹ ಘಟನೆ ಮರುಕಳಿಸದಂತೆ ಸರ್ಕಾರ ಭರವಸೆ ನೀಡಿತ್ತು. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಈ ಕೂಡಲೇ ಮಧ್ಯಪ್ರವೇಶಿಸಿ ಜನಿವಾರದ ಬಗ್ಗೆ ಸ್ಪಷ್ಟವಾದ ಎಸ್‌ಒಪಿ (SOP) ರೂಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಗೆ ಸಜ್ಜಾದ ಬ್ರಾಹ್ಮಣ ಮಹಾಸಂಘ

ಜನಿವಾರ ತೆಗೆಸಿರುವುದು ಬ್ರಾಹ್ಮಣ ಸಮುದಾಯದ ಧಾರ್ಮಿಕ ಹಕ್ಕು ಮತ್ತು ಸಂಸ್ಕೃತಿಗೆ ಧಕ್ಕೆ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘ, ನಾಳೆ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಗೆ ಮುಂದಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಸಂತ್ರಸ್ತ ವಿದ್ಯಾರ್ಥಿಗಳಿಗೆ ಕೃಪಾಂಕ (Grace Marks) ನೀಡಬೇಕು ಎಂಬುದು ಅವರ ಪ್ರಮುಖ ಬೇಡಿಕೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ