ಬೆಂಗಳೂರಿಂದ ಕಾರ್ಮಿಕರು ಯಾರೂ ಊರುಗಳಿಗೆ ಹೋಗಬೇಡಿ.. ಯಾಕೆ ಗೊತ್ತಾ?

ಬೆಂಗಳೂರು: ಕೊರೊನಾ ಲಾಕ್​ ಡೌನ್​ ಅವಧಿ ಇನ್ನೇನು ಮುಗಿಯುತ್ತಾ ಬಂದದ್ದು, ಈ ಮಧ್ಯೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ಹೊರಡಲು ಸಜ್ಜಾಗುತ್ತಿದ್ದಾರೆ. ಆದ್ರೆ ಈ ಹಂತದಲ್ಲಿ ಯಾರೂ ಊರುಗಳಿಗೆ ತೆರಳದಂತೆ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಮಾಧ್ಯಮ ಪ್ರಕಟಣೆ ಮೂಲಕ ಮನವಿ ಮಾಡಿರುವ ಸಿಎಂ ಯಡಿಯೂರಪ್ಪ, ಮೇ 4ರಿಂದ ಕೈಗಾರಿಕೆಗಳು, ಕಟ್ಟಡ ನಿರ್ಮಾಣ ಆರಂಭವಾದ್ರೆ ಕಾರ್ಮಿಕರ ಕೊರತೆ ಎದುರಾಗಬಹುದು ಎಂಬ ಆತಂಕ ನಿರ್ಮಾಣವಾಗಿದೆ. ಊರುಗಳಿಗೆ ತೆರಳಿದರೆ ಹಿಂದಿರುಗಲು ಸಮಯ ಬೇಕಾಗುತ್ತೆ. ವಾಪಸ್ ಕರೆತರುವುದು ಮತ್ತೊಂದು ಕೆಲಸವಾಗಿಬಿಡುತ್ತದೆ. ಹಾಗಾಗಿ […]

ಬೆಂಗಳೂರಿಂದ ಕಾರ್ಮಿಕರು ಯಾರೂ ಊರುಗಳಿಗೆ ಹೋಗಬೇಡಿ.. ಯಾಕೆ ಗೊತ್ತಾ?
ಸಾಧು ಶ್ರೀನಾಥ್​

Updated on: May 01, 2020 | 3:58 PM

ಬೆಂಗಳೂರು: ಕೊರೊನಾ ಲಾಕ್​ ಡೌನ್​ ಅವಧಿ ಇನ್ನೇನು ಮುಗಿಯುತ್ತಾ ಬಂದದ್ದು, ಈ ಮಧ್ಯೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ಹೊರಡಲು ಸಜ್ಜಾಗುತ್ತಿದ್ದಾರೆ. ಆದ್ರೆ ಈ ಹಂತದಲ್ಲಿ ಯಾರೂ ಊರುಗಳಿಗೆ ತೆರಳದಂತೆ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಮಾಧ್ಯಮ ಪ್ರಕಟಣೆ ಮೂಲಕ ಮನವಿ ಮಾಡಿರುವ ಸಿಎಂ ಯಡಿಯೂರಪ್ಪ, ಮೇ 4ರಿಂದ ಕೈಗಾರಿಕೆಗಳು, ಕಟ್ಟಡ ನಿರ್ಮಾಣ ಆರಂಭವಾದ್ರೆ ಕಾರ್ಮಿಕರ ಕೊರತೆ ಎದುರಾಗಬಹುದು ಎಂಬ ಆತಂಕ ನಿರ್ಮಾಣವಾಗಿದೆ. ಊರುಗಳಿಗೆ ತೆರಳಿದರೆ ಹಿಂದಿರುಗಲು ಸಮಯ ಬೇಕಾಗುತ್ತೆ. ವಾಪಸ್ ಕರೆತರುವುದು ಮತ್ತೊಂದು ಕೆಲಸವಾಗಿಬಿಡುತ್ತದೆ. ಹಾಗಾಗಿ ಯಾರೂ ಊರಿಗೆ ಹೋಗಬಾರದು ಎಂದು ತಿಳಿಸಿದ್ದಾರೆ.

ಸಣ್ಣ ಕೈಗಾರಿಕೆಗಳು, ಕಟ್ಟಡ ನಿರ್ಮಾಣ, ರಸ್ತೆ ದುರಸ್ತಿ ಕೆಲಸಗಳಿಗೆ ಕಾರ್ಮಿಕರು ಸಿಗದೆ ಸಮಸ್ಯೆಯಾಗಬಹುದೆಂಬ ಆತಂಕವಿದೆ. ಜೊತೆಗೆ, ಕೊರೊನಾ ಕಾರಣಕ್ಕೆ ಕಾರ್ಮಿಕರು ಹಿಂದಿರುಗಲು ಹಿಂಜರಿಯಬಹುದು ಎಂಬ ಆತಂಕವೂ ನಿರ್ಮಾಣವಾಗಿದೆ. ಹೀಗಾಗಿ ಎಲ್ಲಾ ವಿಚಾರಗಳ ಬಗ್ಗೆ ಯೋಚಿಸಿರುವ ರಾಜ್ಯ ಸರ್ಕಾರವು ಮಾಧ್ಯಮ ಪ್ರಕಟಣೆ ಮೂಲಕ ಕಾರ್ಮಿಕರಿಗೆ ಮನವಿ ಮಾಡಿಕೊಳ್ಳಲಾಗಿದೆ.

Published On - 2:51 pm, Fri, 1 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us