AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೂರು ಪ್ರತಿದೂರು ದಾಖಲಿಸಿದ ಐಎಎಸ್-ಐಪಿಎಸ್: ಇಬ್ಬರಿಗೂ ಖಡಕ್ ಸೂಚನೆ ಕೊಟ್ಟ ಮುಖ್ಯಕಾರ್ಯದರ್ಶಿ

ಇಬ್ಬರು ಉನ್ನತ ಮಟ್ಟದ ಮಹಿಳಾ ಅಧಿಕಾರಿಗಳ ಕಾಳಗ ಈಗ ಹಾದಿ ರಂಪ, ಬೀದಿ ರಂಪಾಟಕ್ಕೆ ಮುಖ್ಯಕಾರ್ಯದರ್ಶಿ ಸದ್ಯ ಬ್ರೇಕ್ ಹಾಕಿದ್ದಾರೆ.

ದೂರು ಪ್ರತಿದೂರು ದಾಖಲಿಸಿದ ಐಎಎಸ್-ಐಪಿಎಸ್: ಇಬ್ಬರಿಗೂ ಖಡಕ್ ಸೂಚನೆ ಕೊಟ್ಟ ಮುಖ್ಯಕಾರ್ಯದರ್ಶಿ
ರೋಹಿಣಿ ಸಿಂಧೂರಿ, ಡಿ. ರೂಪಾ
ರಮೇಶ್ ಬಿ. ಜವಳಗೇರಾ
|

Updated on:Feb 20, 2023 | 6:34 PM

Share

ಬೆಂಗಳೂರು (ಫೆ.20): ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರ(Rohini Sindhuri) ಕೆಲ ಫೋಟೋಗಳನ್ನು ಐಪಿಎಸ್ ಡಿ. ರೂಪಾ ಮೌದ್ಗಿಲ್ (D Roopa Moudgil) ಅವರು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದೇ ತಡ ದೊಡ್ಡ ಸಂಚಲನವನ್ನೇ ಸೃಷ್ಟಿ ಮಾಡಿದೆ. ಈ ವಿಚಾರವಾಗಿ ಇಬ್ಬರು ಮಹಿಳಾ ಅಧಿಕಾರಿಗಳ ಮಧ್ಯೆ ಹೊತ್ತಿರುವ ಜ್ವಾಲಾಗ್ನಿ ಆರುತ್ತಿಲ್ಲ. ಸಮರದ ಸೇಡು ತಣ್ಣಗಾಗುತ್ತಿಲ್ಲ. ಇದೀಗ IAS, IPS ಅಧಿಕಾರಿಗಳಿಬ್ಬರ ನಡುವಿನ ವೈಯಕ್ತಿಕ ಯುದ್ಧ ವಿಧಾನಸೌಧಕ್ಕೆ ತಲುಪಿದೆ. ಇದಕ್ಕೆ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮ ಇಬ್ಬರಿಗೂ ಖಡಕ್​ ಸೂಚನೆಯೊಂದನ್ನು ಕೊಟ್ಟಿದ್ದಾರೆ. ಈ ಮೂಲಕ ಐಎಎಸ್ ವರ್ಸಸ್ ಐಪಿಎಸ್​ ಅಧಿಕಾರಿಗಳ ನಡುವಿನ ಸೇಡಿನ ಸಮರಕ್ಕೆ ಅಂತ್ಯ ಹಾಡಿದ್ದಾರೆ.

ಇದನ್ನೂ ಓದಿ: IAS vs IPS: ಡಿ. ರೂಪಾ ಪ್ರತಿದೂರು, ಇನ್ನೂ ಸಾಕಷ್ಟು ದಾಖಲೆಗಳು ಸಲ್ಲಿಸುವೆ: ಮುಖ್ಯ ಕಾರ್ಯದರ್ಶಿ ಜೊತೆ 35 ನಿಮಿಷ ಚರ್ಚೆ

ಇಬ್ಬರಿಗೂ ಖಡಕ್ ಸೂಚನೆ ಕೊಟ್ಟ ಮುಖ್ಯಕಾರ್ಯದರ್ಶಿ

ನಿಮ್ಮಿಬ್ಬರ ನಡೆಯಿಂದ ರಾಜ್ಯ ಸರ್ಕಾರಕ್ಕೆ ಮುಜುಗರವಾಗಿದೆ. ಹೀಗಾಗಿ ಸೋಷಿಯಲ್ ಮೀಡಿಯಾದಲ್ಲಿ ಏನನ್ನೂ ಪೋಸ್ಟ್ ಮಾಡಬಾರದು. ಇಬ್ಬರೂ ಸಹ ಮಾಧ್ಯಮಗಳ ಮುಂದೆ ಹೋಗಬಾರದೆಂದು. ಈ ವಿಚಾರಗಳನ್ನು ವೈಯಕ್ತಿಕವಾಗಿ ತೆಗೆದುಕೊಂಡು ಹೋಗಬಾರದು ಎಂದು ಪ್ರತ್ಯೇಕವಾಗಿ ದೂರು ನೀಡಲು ಬಂದಿದ್ದ ಡಿ.ರೂಪಾ, ರೋಹಿಣಿ ಸಿಂಧೂರಿಗೆ ಸಿಎಸ್ ವಂದಿತಾ ಶರ್ಮಾ ಖಡಕ್ ಸೂಚನೆ ನೀಡಿ ಕಳುಹಿಸಿದ್ದಾರೆ.

ನಿನ್ನೆಯಿಂದಲೂ ಈ ಇಬ್ಬರ ನಡುವೆ ಸೋಶಿಯಲ್ ಮಿಡಿಯಾದಲ್ಲಿ ಆರೋಪ-ಪ್ರತ್ಯಾರೋಪಗಳ ಜಟಾಪಟಿ ತಾರಕ್ಕಕೇರಿದ್ದು, ಸಾರ್ವಜನಿಕರು ಇಬ್ಬರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಬೆಳವಣಿಗೆ ಸರ್ಕಾರಕ್ಕೆ ಮುಜುಗರ ಉಂಟು ಮಾಡುತ್ತದೆ ಎಂದು ತಿಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಬ್ಬರು ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ತಮ್ಮ ಮುಖ್ಯಕಾರ್ಯದರ್ಶಿಗೆ ಸೂಚನೆ ನೀಡಿದ್ದರು.

ದೂರು ಪ್ರತಿದೂರು

ಐಪಿಎಸ್‌ ಅಧಿಕಾರಿ ರೂಪಾ ವಿರುದ್ಧ ಎಐಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸಮರ ಸಾರಿದ್ದಾರೆ. ಪರ್ಸನಲ್ ಫೋಟೋ ರಿಲೀಸ್ ಮಾಡಿದ್ದಕ್ಕೆ ಗರಂ ಆಗಿದ್ದು, ಈ ಬಗ್ಗೆ ಇಂದು(ಫೆ.20) ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಭೇಟಿ ಮಾಡಿ ರೂಪಾ ವಿರುದ್ಧ ಕ್ರಮಕೈಗೊಳ್ಳುವಂತೆ ದೂರು ನೀಡಿದ್ದಾರೆ.

ಇದನ್ನೂ ಓದಿ: ತಮ್ಮ ಖಾಸಗಿ ಫೋಟೋಗಳಿಗೆ ಸ್ಪಷ್ಟನೆ ಕೊಟ್ಟ ರೋಹಿಣಿ ಸಿಂಧೂರಿ, IPS ರೂಪಾ ವಿರುದ್ಧ ಕಾನೂನು ಹೋರಾಟಕ್ಕೆ ತೀರ್ಮಾನ

ರೋಹಿಣಿ ಸಿಂಧೂರಿ ಅವರು ವಿಧಾನಸೌಧದಲ್ಲಿ ವಂದಿತಾ ಶರ್ಮ ಅವರ ಜೊತೆ ಸುಮಾರು 15 ನಿಮಿಷಗಳ ಕಾಲ ಚರ್ಚೆ ನಡೆಸಿ ಮೂರು ಪುಟಗಳ ದೂರು ನೀಡಿದ್ದಾರೆ. ಇದರ ಬೆನ್ಲಲ್ಲೇ ಡಿ.ರೂಪಾ ಕೂಡ ಮುಖ್ಯ ಕಾರ್ಯದರ್ಶಿಗೆ ಲಿಖಿತ ದೂರು ನೀಡಿದ್ದಾರೆ. ಸುಮಾರು 35 ನಿಮಿಷಗಳ ಕಾಲ ಚರ್ಚೆ ಮಾಡಿದ್ದು, ರೋಹಿಣಿ ವಿರುದ್ಧ ಕ್ರಮಕೈಗೊಳ್ಳುವಂತೆ ದಾಖಲೆ ಸಮೇತ ದೂರು ಕೊಟ್ಟಿದ್ದಾರೆ.

ಒಟ್ಟಿನಲ್ಲಿ ಇದೀಗ ಇಬ್ಬರು ಉನ್ನತ ಮಟ್ಟದ ಮಹಿಳಾ ಅಧಿಕಾರಿಗಳ ಕಾಳಗ ಈಗ ಹಾದಿ ರಂಪ, ಬೀದಿ ರಂಪಾಟಕ್ಕೆ ಮುಖ್ಯಕಾರ್ಯದರ್ಶಿ ಸದ್ಯ ಬ್ರೇಕ್ ಹಾಕಿದ್ದಾರೆ. ಆದ್ರೆ ಈ ಅಧಿಕಾರಿಗಳ ವಿರುದ್ಧ ಏನು ಕ್ರಮಕೈಗೊಳ್ಳುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

Published On - 6:27 pm, Mon, 20 February 23

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ