AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸಿವಿಲ್​ ಸೇವೆ ಹುದ್ದೆ ನೇಮಕಾತಿ ಅಧಿಸೂಚನೆಗೆ ತಡೆ

ಕರ್ನಾಟಕ ಸರ್ಕಾರವು ರಾಜ್ಯದ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗೆ ಹೊಸ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿದಿದೆ. 2024ರ ನವೆಂಬರ್ 25ರ ಸುತ್ತೋಲೆಯನ್ನು ಉಲ್ಲಂಘಿಸಿ ಕೆಲವು ಪ್ರಾಧಿಕಾರಗಳು ಹೊಸ ಅಧಿಸೂಚನೆ ಹೊರಡಿಸಿರುವುದರಿಂದ ಈ ನಿರ್ಧಾರ. ನವೆಂಬರ್ 28ರ ನಂತರದ ಯಾವುದೇ ಹೊಸ ನೇಮಕಾತಿ ಅಧಿಸೂಚನೆಗಳನ್ನು ತಕ್ಷಣ ರದ್ದುಗೊಳಿಸಲು ಸರ್ಕಾರ ಸೂಚಿಸಿದೆ.

ರಾಜ್ಯ ಸಿವಿಲ್​ ಸೇವೆ ಹುದ್ದೆ ನೇಮಕಾತಿ ಅಧಿಸೂಚನೆಗೆ ತಡೆ
ವಿಧಾನಸೌಧ
ವಿವೇಕ ಬಿರಾದಾರ
|

Updated on: Apr 11, 2025 | 10:01 PM

Share

ಬೆಂಗಳೂರು, ಏಪ್ರಿಲ್​ 11: ರಾಜ್ಯ ಸಿವಿಲ್​ ಸೇವೆಗಳಲ್ಲಿನ (State Civil Service) ಹುದ್ದೆಗಳ ನೇಮಕಾತಿ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿಯುವಂತೆ ರಾಜ್ಯ ಸರ್ಕಾರ (Karnataka Government) ಸುತ್ತೋಲೆ ಹೊರಡಿಸಿದೆ. ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆಯನ್ನು ಹೊರಡಿಸಬಾರದೆಂದು 2024ರ ನವೆಂಬರ್​ 25 ರಂದು ಹೊರಡಿಸಿದ್ದ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

ಆದರೂ ಕೂಡ ಕೆಲವು ನೇಮಕಾತಿ ಪ್ರಾಧಿಕಾರಿಗಳು ಈ ಸೂಚನೆ ಉಲ್ಲಂಘಿಸಿ ನೇರ ನೇಮಕಾರಿ ಮಾಡಲು ಹೊಸ ಅಧಿಸೂಚನೆಗಳನ್ನು ಹೊರಡಿಸಿರುವುದು ಸರ್ಕಾರದ ಗಮನಕ್ಕೆ ಬಂದಿದೆ.

ಇದನ್ನೂ ಓದಿ
Image
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
Image
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
Image
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
Image
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ

ಹೀಗಾಗಿ 2024ರ ನವೆಂಬರ್​ 28ರ ನಂತರ ನೇರನೇಮಕಾತಿಗಾಗಿ ಅಥವಾ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗಾಗಿ ಯಾವುದೇ ಹೊಸ ಅಧಿಸೂಚನೆಯನ್ನು ಹೊರಡಿಸಿದ್ದಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲು ಆಯಾಯ ನೇಮಕಾತಿ ಪ್ರಾಧಿಕಾರಗಳಿಗೆ ಸರ್ಕಾರ ಸೂಚಿಸಿದೆ.

ಸಿದ್ದರಾಮಯ್ಯ ಟ್ವೀಟ್​

ಇದನ್ನೂ ಓದಿ: ಜಾತಿ ಗಣತಿ ವರದಿ ಬಗ್ಗೆ ಚರ್ಚಿಸಲು ಏ. 17ಕ್ಕೆ ಕರ್ನಾಟಕ ಸಚಿವ ಸಂಪುಟ ವಿಶೇಷ ಸಭೆ ನಿಗದಿ

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್​ ಮಾಡಿದ್ದಾರೆ. “ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆಯನ್ನು ಹೊರಡಿಸಬಾರದೆಂದು ಸೂಚಿಸಲಾಗಿದ್ದು, ಇದರನ್ವಯ ದಿನಾಂಕ 28-10-2024ರ ನಂತರ ನೇರನೇಮಕಾತಿಗಾಗಿ ಅಥವಾ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗಾಗಿ ಯಾವುದೇ ಹೊಸ ಅಧಿಸೂಚನೆಯನ್ನು ಹೊರಡಿಸಿದ್ದಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲು ಆಯಾಯ ನೇಮಕಾತಿ ಪ್ರಾಧಿಕಾರಗಳಿಗೆ ಆದೇಶಿಸಲಾಗಿದೆ” ಎಂದು ಟ್ವೀಟ್​ ಮೂಲಕ ತಿಳಿಸಿದ್ದಾರೆ.

ವರದಿ: ಈರಣ್ಣ ಬಸವ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ