AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಂಡರ್ ಪರಿಶೀಲನೆಗೆ 2 ಸಮಿತಿ ರಚಿಸಲಾಗಿದೆ; ಪ್ರಧಾನಿಗೆ ಗುತ್ತಿಗೆದಾರರ ಪತ್ರಕ್ಕೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ಟೆಂಡರ್ ಪರಿಶೀಲನೆಗೆ ಎರಡು ಕಮಿಟಿಗಳನ್ನು ರಚಿಸಿದ್ದೇವೆ. ಆಟೋಮ್ಯಾಟಿಕ್ ಬಿಲ್ ರೈಸ್ ಆಗುವ ಕುರಿತು ವ್ಯವಸ್ಥೆ ಮಾಡಲಾಗಿದೆ. ಸಮಯಕ್ಕೆ ಸರಿಯಾಗಿ ಕಾಮಗಾರಿ ಆಗಬೇಕು, ಇಲ್ಲದಿದ್ದರೆ ಬೇರೆ ಬೇರೆ ರೀತಿಯ ಸಂದೇಶ ಹೋಗಲಿದೆ ಎಂದು ಆದೇಶಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಟೆಂಡರ್ ಪರಿಶೀಲನೆಗೆ 2 ಸಮಿತಿ ರಚಿಸಲಾಗಿದೆ; ಪ್ರಧಾನಿಗೆ ಗುತ್ತಿಗೆದಾರರ ಪತ್ರಕ್ಕೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ
ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Nov 25, 2021 | 6:50 PM

Share

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಲ್ಲ ಗುತ್ತಿಗೆಗಳಿಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಶೇ. 40ರಷ್ಟು ಕಮಿಷನ್ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರರು ಪ್ರಧಾನಿ ನರೇಂದ್ರ ಮೋದಿಗೆ (Narendra Modi) ಪತ್ರ ಬರೆದಿದ್ದರು. ಈ ವಿಚಾರವಾಗಿ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಪ್ರತಿಕ್ರಿಯೆ ನೀಡಿದ್ದು, ಜನರಲ್ ಆಗಿ ಗುತ್ತಿಗೆದಾರರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಯಾರದೇ ಹೆಸರನ್ನು ನಿರ್ದಿಷ್ಟವಾಗಿ ಉಲ್ಲೇಖ ಮಾಡಿಲ್ಲ. ಆದರೂ ನಾವು ಈ ಬಗ್ಗೆ ತನಿಖೆಯನ್ನು ಮಾಡುತ್ತೇವೆ. ಟೆಂಡರ್ ಪ್ರಕ್ರಿಯೆಯಲ್ಲಿ ದೋಷವಾಗಿದ್ದರೆ ಪರಿಷ್ಕರಣೆ ಮಾಡುತ್ತೇವೆ. ಏನಾದರೂ ದೋಷ ಆಗಿದ್ದರೂ ಪರಿಷ್ಕರಣೆ ಮಾಡುತ್ತೇವೆ ಎಂದಿದ್ದಾರೆ.

ನನ್ನ ಅವಧಿ ಅಥವಾ ಅದಕ್ಕಿಂತ ಮೊದಲು ಗುತ್ತಿಗೆದಾರರ ಬಳಿ ಕಮಿಷನ್ ತೆಗೆದುಕೊಂಡಿರುವ ಬಗ್ಗೆಯೂ ಪರಿಷ್ಕರಣೆ ಮಾಡುತ್ತೇವೆ. ನಮ್ಮದು ಪಾರದರ್ಶಕ ಸರ್ಕಾರ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಅಂತಹದ್ದೇನೂ ನಡೆದಿಲ್ಲ. ಆದರೂ ಈ ಬಗ್ಗೆ ಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ. ಟೆಂಡರ್ ಪರಿಶೀಲನೆಗೆ ಎರಡು ಕಮಿಟಿಗಳನ್ನು ರಚಿಸಿದ್ದೇವೆ. ಆಟೋಮ್ಯಾಟಿಕ್ ಬಿಲ್ ರೈಸ್ ಆಗುವ ಕುರಿತು ವ್ಯವಸ್ಥೆ ಮಾಡಲಾಗಿದೆ. ಸಮಯಕ್ಕೆ ಸರಿಯಾಗಿ ಕಾಮಗಾರಿ ಆಗಬೇಕು. ಇಲ್ಲದಿದ್ದರೆ ಬೇರೆ ಬೇರೆ ರೀತಿಯ ಸಂದೇಶ ಹೋಗಲಿದೆ. ಹಾಗಾಗಿ ನಾವು ಆದೇಶವನ್ನು ಹೊರಡಿಸಿದ್ದೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಟೆಂಡರ್ ಅಕ್ರಮ ಕಂಡರೆ ಕೂಡಲೇ ಕ್ರಮ ಕೈಗೊಳ್ತೇವೆ. ಟೆಂಡರ್ ಪರಿಶೀಲನೆ ಆದರೆ ಎಲ್ಲ ಅಕ್ರಮ ಹೊರಬರುತ್ತದೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲ ಗುತ್ತಿಗೆಗಳಿಗೆ ಅಧಿಕಾರಿಗಳು ಶೇ. 40ರಷ್ಟು ಕಮಿಷನ್ ಪಡೆಯುತ್ತಿದ್ದಾರೆ. ಜನಪ್ರತಿನಿಧಿಗಳಿಗೂ ಕಮಿಷನ್ ಹೋಗುತ್ತಿದೆ. ಇಷ್ಟು ದೊಡ್ಡ ಪ್ರಮಾಣದ ಕಮಿಷನ್ ಕೊಟ್ಟು ಉತ್ತಮ ಗುಣಮಟ್ಟದ ಕಾಮಗಾರಿ ಮಾಡಲು ಸಾಧ್ಯವಿಲ್ಲ ಎಂದು ಗುತ್ತಿಗೆದಾರರು ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಜ್ಯಪಾಲರು, ಸಿಎಂ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕರಿಗೆ ಪತ್ರ ಬರೆದಿದ್ದು ಬಹಳ ಚರ್ಚೆಗೆ ಕಾರಣವಾಗಿತ್ತು.

ರಾಜ್ಯದಲ್ಲಿ ಮಳೆಯಿಂದಾಗಿ ರಾಗಿ, ಜೋಳ, ಭತ್ತ, ತರಕಾರಿ, ಶೇಂಗಾ ಸೇರಿದಂತೆ ಹಲವಾರು ಬೆಳೆಗಳು ನಾಶವಾಗಿದೆ. ಮೊದಲು ಸರ್ವೆ ಆಗಿ ಮಾಹಿತಿ ಪರಿಹಾರ ಆ್ಯಪ್‌ನಲ್ಲಿ ಅಪ್ಲೋಡ್ ಮಾಡಲಾಗುವುದು. ಆ್ಯಪ್​ನಲ್ಲಿ ಅಪ್ಲೋಡ್​ ಆದ ತಕ್ಷಣ ಹಣ ಹಾಕಲು ಇಂದು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಹಣದ ಕೊರತೆ ಆದರೆ ಬಿಡುಗಡೆಗೆ ಮಾಡುವುದಾಗಿ ಹೇಳಿದ್ದೇನೆ ಎಂದುವಿಧಾನಸೌಧದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮೆಟ್ರೋ ಕಾಸ್ಟ್ ನೆಟ್​ವರ್ಕ್ ಇಂಡಿಯಾ ನೂತನ ಕಚೇರಿ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ವೇತನ ನೀಡದೆ ತಾತ್ಸಾರ: ಬಿಬಿಎಂಪಿ ಪೌರಕಾರ್ಮಿಕರಿಂದ ಗುತ್ತಿಗೆದಾರರ ಮನೆ ಮುಂದೆ ಧರಣಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ