AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪ ರಾಷ್ಟ್ರಪತಿ ಕರ್ನಾಟಕ ಭೇಟಿ ಅಂತ್ಯ; ತಾವು ಹೇಳಿದ ಮಾತಿನಂತೆ ನಡೆದುಕೊಂಡ ಸಿಎಂ ಬಸವರಾಜ ಬೊಮ್ಮಾಯಿ!

ಶಿಷ್ಟಾಚಾರದಂತೆ ಉಪ ರಾಷ್ಟ್ರಪತಿಯನ್ನು ಸ್ವಾಗಿತಿಸಿದ ಸಿಎಂ ಬೊಮ್ಮಾಯಿ ಹಳೆಯ ಶೈಲಿಯಲ್ಲಿ ಪೇಟ- ಗಂಧದ ಹಾರ ಹಾಕಿ ವೆಲ್ಕಂ ಹೇಳಿದ್ದರು. ಆದರೆ ಒಂದಷ್ಟು ಜನ ಅದಕ್ಕೆ ಆಕ್ಷೇಪ ಎತ್ತಿದರು. ನಮ್ಮದು ಗಂಧದ ನಾಡು, ಮೈಸೂರು ರಾಜರು ಆಳಿದ ನಾಡು. ಅದಕ್ಕೆ ತಕ್ಕಂತೆ ಪೇಟ ತೊಡಿಸಿ, ಗಂಧದ ಹಾರ ಹಾಕಿದ್ದು ಸರಿ. ಆದರೆ ತಾವೇ ತಂದಿದ್ದ ನೂತನ ಸಂಪ್ರದಾಯ ಎಲ್ಲಿ ಹೋಯಿತು ಎಂದು ಆಕ್ಷೇಪಣೆ ವ್ಯಕ್ತಪಡಿಸಿದ್ದರು.

ಉಪ ರಾಷ್ಟ್ರಪತಿ ಕರ್ನಾಟಕ ಭೇಟಿ ಅಂತ್ಯ; ತಾವು ಹೇಳಿದ ಮಾತಿನಂತೆ ನಡೆದುಕೊಂಡ ಸಿಎಂ ಬಸವರಾಜ ಬೊಮ್ಮಾಯಿ!
ಉಪ ರಾಷ್ಟ್ರಪತಿ ಕರ್ನಾಟಕ ಭೇಟಿ ಅಂತ್ಯ; ತಾವು ಹೇಳಿದ ಮಾತಿನಂತೆ ನಡೆದುಕೊಂಡ ಸಿಎಂ ಬೊಮ್ಮಾಯಿ!
TV9 Web
| Updated By: ಸಾಧು ಶ್ರೀನಾಥ್​|

Updated on:Aug 26, 2021 | 11:22 AM

Share

ಬೆಂಗಳೂರು: ಹತ್ತು ದಿನಗಳ ಕರ್ನಾಟಕ ರಾಜ್ಯ ಪ್ರವಾಸ ಮುಗಿಸಿ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ನಿನ್ನೆ ದೆಹಲಿಗೆ ಹಿಂದಿರುಗಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಸುಧಾಕರ್​ ಅವರುಗಳು ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಅವರನ್ನು ಬೀಳ್ಕೊಟ್ಟಿದ್ದಾರೆ.

ಆದರೆ ಇಲ್ಲಿನ ವಿಷಯ ಅದಲ್ಲ! ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಬರುತ್ತಿದ್ದಂತೆ ಒಂದುಹೊಸ ಸಂಪ್ರದಾಯ ಹುಟ್ಟುಹಾಕಿದರು. ಏನೆಂದರೆ ಸಭೆ ಸಮಾರಂಭಗಳಲ್ಲಿ ಮುಖ್ಯಮಂತ್ರಿ ಸೇರಿದಂತೆ ಯಾವುದೇ ವಿಐಪಿಗಳಿಗೆ ಹಾರತುರಾಯಿ ನೀಡಬೇಡಿ. ಅದರ ಬದಲು, ಒಂದು ಒಳ್ಳೆಯ ಪುಸ್ತಕ ನೀಡಿ ಸಾಕು ಎಂದು ಕರೆಕೊಟ್ಟಿದ್ದರು. ಸಿಎಂ ಬೊಮ್ಮಾಯಿ ಹೀಗೆ ಹೊಸ ಸಂಪ್ರದಾಯ ಹುಟ್ಟುಹಾಕಿದ್ದು ಅನೇಕರ ಪ್ರಶಂಸೆಗೆ ಪಾತ್ರವಾಯಿತು. ಅದೇ ವೇಳೆ ಹೂ ಬೆಳೆಗಾರರು, ಮಾರಾಟಗಾರರಿಂದ ವಿರೋಧವೂ ವ್ಯಕ್ತವಾಯಿತು ಅನ್ನೀ.

ಆದರೆ ಇಲ್ಲಿನ ವಿಷಯ ಅದಲ್ಲ! ಏನಂದ್ರೆ ಹಾರ ತುರಾಯಿ ವೆಲ್ಕಂ ಬೇಡ ಎಂದಿದ್ದ ಸಿಎಂ ಬೊಮ್ಮಾಯಿ 75ನೇ ಸ್ವಾತಂತ್ರ್ಯೋತ್ಸವದ ಮಾರನೆಯ ದಿನ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು 10 ದಿನಗಳ ಭೇಟಿಗೆಂದು ಬೆಂಗಳೂರಿಗೆ ಬಂದಿದ್ದರು. ಆ ವೇಳೆ ಶಿಷ್ಟಾಚಾರದಂತೆ ಉಪ ರಾಷ್ಟ್ರಪತಿಯನ್ನು ಸ್ವಾಗಿತಿಸಿದ ಸಿಎಂ ಬೊಮ್ಮಾಯಿ ಹಳೆಯ ಶೈಲಿಯಲ್ಲಿ ಪೇಟ- ಗಂಧದ ಹಾರ ಹಾಕಿ ವೆಲ್ಕಂ ಹೇಳಿದ್ದರು. ಆದರೆ ಒಂದಷ್ಟು ಜನ ಅದಕ್ಕೆ ಆಕ್ಷೇಪ ಎತ್ತಿದರು. ನಮ್ಮದು ಗಂಧದ ನಾಡು, ಮೈಸೂರು ರಾಜರು ಆಳಿದ ನಾಡು. ಅದಕ್ಕೆ ತಕ್ಕಂತೆ ಪೇಟ ತೊಡಿಸಿ, ಗಂಧದ ಹಾರ ಹಾಕಿದ್ದು ಸರಿ. ಆದರೆ ತಾವೇ ತಂದಿದ್ದ ನೂತನ ಸಂಪ್ರದಾಯ ಎಲ್ಲಿ ಹೋಯಿತು ಎಂದು ಆಕ್ಷೇಪಣೆ ವ್ಯಕ್ತಪಡಿಸಿದ್ದರು.

ಅದಕ್ಕೆ ಉತ್ತರವೆಂಬಂತೆ, ನಿನ್ನೆ ಹತ್ತು ದಿನಗಳ ಪ್ರವಾಸ ಮುಗಿಸಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ದೆಹಲಿಗೆ ತೆರಳುವಾಗ ಸಿಎಂ ಬೊಮ್ಮಾಯಿ ಹೆಚ್.ಎ.ಎಲ್. ವಿಮಾನ ನಿಲ್ದಾಣದಲ್ಲಿ ಬೀಳ್ಕೊಟ್ಟರು. ಆದರೆ ಆ ವೇಳೆ ನಾಡಿನ ಜನರಲ್ಲಿ ಗೊಂದಲವುಂಡು ಮಾಡುವುದು ಬೇಡ ಎಂದು ಒಂದು ದಪ್ಪನೆಯ ಪುಸ್ತಕವನ್ನು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರ ಕೈಗಿತ್ತು, ವಿನಮ್ರವಾಗಿ ಬೀಳ್ಕೊಟ್ಟರು. ಅಲ್ಲಿಗೆ ತಾವೇ ಆಚರಣೆಗೆ ತಂದಿದ್ದ ಹಾರ ತುರಾಯಿ ಬದಲು ಪುಸ್ತಕ ನೀಡುವ ಸಂಪ್ರದಾಯವನ್ನು ಪಾಲಿಸಿದರು! ತನ್ಮೂಲಕ ತಾವು ಕೊಟ್ಟ ಮಾತಿಗೆ ಬದ್ಧವಾಗಿರುವುದಾಗಿ ತೋರಿಸಿಕೊಟ್ಟರು.

ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಹಾರ ಹಾಕಿ, ಪುಸ್ತಕ ನೀಡಿ ಸಿಎಂ ಸ್ವಾಗತ

(Karnataka CM Basavaraj Bommai sends off President M Venkaiah Naidu with a book but not flower bouquet)

Published On - 11:11 am, Thu, 26 August 21

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!