AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Tauktae in Karnataka: ಉಡುಪಿ‌, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ ಯಡಿಯೂರಪ್ಪ

ಸಿಕ್ಕಿಹಾಕಿಕೊಂಡಿರುವ ಮೀನುಗಾರರ ರಕ್ಷಣೆಯ ಕಾರ್ಯಾಚರಣೆ ಸಂಬಂಧ ಕೇಂದ್ರದ ಜೊತೆ ನಿಕಟ ಸಂಪರ್ಕ ಇಟ್ಟುಕೊಳ್ಳಿ. ಹೆಲಿಕಾಪ್ಟರ್ ಸೇರಿ ಇನ್ನಿತರ ಯಾವುದೇ ಅಗತ್ಯವಿದ್ದರೂ ಕೂಡಲೇ ವ್ಯವಸ್ಥೆ ಮಾಡಿ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದರು.

Cyclone Tauktae in Karnataka: ಉಡುಪಿ‌, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ ಯಡಿಯೂರಪ್ಪ
ಬಿ.ಎಸ್​. ಯಡಿಯೂರಪ್ಪ (ಸಂಗ್ರಹ ಚಿತ್ರ)
guruganesh bhat
|

Updated on: May 16, 2021 | 10:50 PM

Share

ಬೆಂಗಳೂರು: ರಾಜ್ಯದಲ್ಲಿ ತೌಕ್ತೆ ಚಂಡಮಾರುತದಿಂದ ಉಂಟಾದ ಹಾನಿಯ ಬಗ್ಗೆ ಉಡುಪಿ‌, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಂದ ಸಿಎಂ ಬಿ.ಎಸ್.ಯಡಿಯೂರಪ್ಪ ಮಾಹಿತಿ ಪಡೆದರು. ಇದೇ ವೇಳೆ ಸಮುದ್ರದಲ್ಲಿ ಸಿಲುಕಿರುವವರ ರಕ್ಷಣೆಗೆ ಎಲ್ಲಾ ರೀತಿ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಜತೆಗೆ ಸಿಕ್ಕಿಹಾಕಿಕೊಂಡಿರುವ ಮೀನುಗಾರರ ರಕ್ಷಣೆಯ ಕಾರ್ಯಾಚರಣೆ ಸಂಬಂಧ ಕೇಂದ್ರದ ಜೊತೆ ನಿಕಟ ಸಂಪರ್ಕ ಇಟ್ಟುಕೊಳ್ಳಿ. ಹೆಲಿಕಾಪ್ಟರ್ ಸೇರಿ ಇನ್ನಿತರ ಯಾವುದೇ ಅಗತ್ಯವಿದ್ದರೂ ಕೂಡಲೇ ವ್ಯವಸ್ಥೆ ಮಾಡಿ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದರು.

ತೌಕ್ತೆ ಚಂಡಮಾರುತದ ಅಬ್ಬರ ರಾಜ್ಯದಲ್ಲಿ ಅತ್ಯಂತ ಜೋರಾಗಿಯೇ ಇದೆ. ತೌಕ್ತೆ ಚಂಡಮಾರುತದ ಪ್ರಭಾವದಿಂದ ಕಳೆದ ಎರಡು ದಿನಗಳಿಂದಲೂ ರಾಜ್ಯದಲ್ಲಿ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಒಂದೇ ಸಮನೆ ಮಳೆ ಸುರಿಯುತ್ತಿದ್ದು, ಗಾಳಿಯೂ ಜೋರಾಗಿದೆ. ಇನ್ನು ನಾಳೆ ಕೂಡ ರಾಜ್ಯಾದ್ಯಂತ ಮಳೆಯ ಪ್ರಭಾವ ಜೋರಾಗಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಕೂಡ ಬೆಳಗ್ಗೆಯಿಂದಲೂ ಒಂದೇ ಸಮ ಜಿಟಿಜಿಟಿ ಮಳೆ ಸುರಿಯುತ್ತಲೇ ಇದೆ. ಕರಾವಳಿ ಭಾಗದಲ್ಲಿ ಇಂದು ಬೆಳಗ್ಗೆಯವರೆಗೂ ರೆಡ್ ಅಲರ್ಟ್​ ಇತ್ತು. ನಾಳೆ ಮೇ 17ರಂದು ಕೂಡ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಸಿಕ್ಕಾಪಟ್ಟೆ ಮಳೆಯಾಗಲಿದೆ. ಹಾಗೇ ಮೇ 20ರವರೆಗೂ ಅಲ್ಲಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಂಡಮಾರುತದ ಎಚ್ಚರಿಕೆ ನೀಡಿದ್ದರೂ ಅದನ್ನು ಲೆಕ್ಕಿಸದೆ ಸಮುದ್ರಕ್ಕೆ ಇಳಿದ ದೋಣಿ ಮುಳುಗಡೆಯಾಗಿತ್ತು. ಈ ಅಲಾಯನ್ಸ್ ಎಂಬ ಹೆಸರಿನ ವಿಗ್ಗ್ ಬೋಟ್​​​ ಎಂಆರ್​ಪಿಎಲ್​ ಕಚ್ಚಾತೈಲ ಹಡಗಿನ ಪೈಪ್​ಲೈನ್​ ನಿರ್ವಹಣೆ ಮಾಡುತ್ತಿದ್ದ ದೋಣಿಯಾಗಿತ್ತು. ಒಟ್ಟು 9 ಜನರು ಸಮುದ್ರಕ್ಕೆ ಇಳಿದಿದ್ದರು. ಇದೀಗ 7ಮಂದಿ ನಾಪತ್ತೆಯಾಗಿದ್ದರು. ಅವರಲ್ಲಿ ಇಬ್ಬರು ಮೊಮಿರುಲ್ ಮುಲ್ಲಾ( 34), ಕರೀಮುಲ್ಲಾ ಶೇಕ್ (24) ಎಂಬುವರು ಟ್ಯೂಬ್​ನಲ್ಲಿ ಈಜಿಕೊಂಡು ಬಂದು ಜೀವ ಉಳಿಸಿಕೊಂಡಿದ್ದರು. ಇಬ್ಬರೂ ಉಡುಪಿಯ ಮಟ್ಟುಕೊಪ್ಲ ಎಂಬಲ್ಲಿ ದಡ ಸೇರಿದ್ದರು.

ಇದನ್ನೂ ಓದಿ: ಮನೆಯಲ್ಲಿ ಜಾಗವಿಲ್ಲದೆ, ಮರದ ಮೇಲೆ 11 ದಿನ ಐಸೋಲೇಟ್ ಆದ ಕೊವಿಡ್​ 19 ಸೋಂಕಿತ ಯುವಕ..

ಕಣ್ಮುಂದೆಯೇ ನಮ್ಮ ಕಚೇರಿ ಕಟ್ಟಡ ಉರುಳಿ ಬಿತ್ತು, ಪ್ರಾಣಭಯದಿಂದ ನಾನು ಓಡಿದೆ: ಇಸ್ರೇಲ್ ವೈಮಾನಿಕ ದಾಳಿಯ ಬಗ್ಗೆ ಪತ್ರಕರ್ತನ ಅನುಭವ ಬರಹ   (Karnataka CM BS Yediyurappa calls Udupi Dakshina Kannada And Uttara Kannada DCs to know situation about Cyclone Tauktae in Karnataka)

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್