AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಿಂಗ್​ಹ್ಯಾಮ್ ರಸ್ತೆ To ದೆಹಲಿ, ರೋಚಕವಾಗಿದೆ ಸಿದ್ದರಾಮಯ್ಯ ತಂತ್ರಗಾರಿಕೆ! ಡಿಕೆ ಸಹೋದರರಿಂದ ಕೌಂಟರ್ ಪ್ಲಾನ್

ಮುಖ್ಯಮಂತ್ರಿ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ರಾಜಕೀಯ ತಂತ್ರ-ಪ್ರತಿತಂತ್ರಗಳು ತಾರಕಕ್ಕೇರಿದ್ದು, ಇಂದು (ಮೇ 26) ದೆಹಲಿಯಲ್ಲಿ ನಡೆಯಲಿರುವ ಹೈಕಮಾಂಡ್ ಸಭೆಯಲ್ಲಿ ರಾಜ್ಯದ ಮುಂದಿನ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ. ಸದ್ಯ, ಹೈಕಮಾಂಡ್ ಸಭೆಯ ಬಗ್ಗೆ ಕುತೂಹಲ ಹೆಚ್ಚಿದ್ದು, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ತಂತ್ರ-ಪ್ರತಿತಂತ್ರ ಏನಿರಬಹುದು ಎಂಬ ಮಾಹಿತಿ ಇಲ್ಲಿದೆ.

ಕನ್ನಿಂಗ್​ಹ್ಯಾಮ್ ರಸ್ತೆ To ದೆಹಲಿ, ರೋಚಕವಾಗಿದೆ ಸಿದ್ದರಾಮಯ್ಯ ತಂತ್ರಗಾರಿಕೆ! ಡಿಕೆ ಸಹೋದರರಿಂದ ಕೌಂಟರ್ ಪ್ಲಾನ್
ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯImage Credit source: tv9
ಪ್ರಸನ್ನ ಗಾಂವ್ಕರ್​
| Edited By: |

Updated on: May 26, 2026 | 6:50 AM

Share

ಬೆಂಗಳೂರು, ಮೇ 26: ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಕುರಿತಾದ ಆಂತರಿಕ ರಾಜಕೀಯ ಬಿಕ್ಕಟ್ಟು ಈಗ ಅಂತಿಮ ಘಟ್ಟಕ್ಕೆ ತಲುಪಿರುವಂತೆ ಕಾಣಿಸುತ್ತಿದೆ. ಹೈಕಮಾಂಡ್‌ನಿಂದ ದಿಢೀರ್ ಕರೆ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಇಬ್ಬರೂ ದೆಹಲಿಗೆ ತೆರಳಿದ್ದು, ಇಂದು (ಮೇ 26 ರ ಬುಧವಾರ) ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಮಹತ್ವದ ಸಭೆ ತೀವ್ರ ಕುತೂಹಲ ಮೂಡಿಸಿದೆ. ಸಿದ್ದರಾಮನಹುಂಡಿಯ ಮಾಸ್ ಲೀಡರ್ ಸಿದ್ದರಾಮಯ್ಯ ಹಾಗೂ ಕನಕಪುರದ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಅವರ ನಡುವಿನ ಈ ‘ಪವರ್ ಫೈಟ್’ಗೆ ದಿಲ್ಲಿ ದರ್ಬಾರ್‌ನಲ್ಲಿ ಕ್ಲೈಮ್ಯಾಕ್ಸ್ ಸಿಗುವ ಸಾಧ್ಯತೆ ದಟ್ಟವಾಗಿದೆ. ಹೈಕಮಾಂಡ್ ಸಭೆಯ ಅಜೆಂಡಾ ಎದುರಿಸಲು ಇಬ್ಬರೂ ನಾಯಕರು ತಮ್ಮದೇ ಆದ ಅಸ್ತ್ರಗಳೊಂದಿಗೆ ಸಜ್ಜಾಗಿದ್ದಾರೆ.

ಮುಖ್ಯಾಂಶಗಳು

  • ಕನ್ನಿಂಗ್‌ಹ್ಯಾಮ್ ರಸ್ತೆಯಲ್ಲಿ ಸಿದ್ದರಾಮಯ್ಯ ಸೀಕ್ರೆಟ್ ಪ್ಲ್ಯಾನ್.
  • ಅಧಿಕಾರ ಹಂಚಿಕೆ ಪ್ರಸ್ತಾಪವಾದರೆ ಸಿದ್ದು ಪರ್ಯಾಯ ದಾಳ ಸಿದ್ಧ.
  • ಹೈಕಮಾಂಡ್ ಕರೆ ಬೆನ್ನಲ್ಲೇ ಡಿಕೆ ಸಹೋದರರು ಜಂಟಿ ಸಭೆ ನಡೆಸಿದ್ದು, ಪ್ರತಿ ತಂತ್ರ ರೂಪಿಸಿದ್ದಾರೆ.

ಪ್ರತಿಷ್ಠೆಯ ಕಣವಾದ ದಿಲ್ಲಿ ಸಭೆ: ಹೈಕಮಾಂಡ್‌ಗೆ ಸವಾಲು

ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಸಚಿವರ ದಂಡನ್ನೇ ಕಟ್ಟುಕೊಂಡು ದೆಹಲಿಗೆ ತೆರಳುವ ಮೂಲಕ ಪರೋಕ್ಷವಾಗಿ ಶಕ್ತಿ ಪ್ರದರ್ಶನಕ್ಕೆ ಇಳಿದಿದ್ದಾರೆ. ಒಂದು ವೇಳೆ ಹೈಕಮಾಂಡ್ ಮುಖ್ಯಮಂತ್ರಿ ಬದಲಾವಣೆಯ ಒತ್ತಡ ಹೇರಿದರೆ, ಜಿ. ಪರಮೇಶ್ವರ್ ಅವರ ಹೆಸರನ್ನು ಮುಂಚೂಣಿಗೆ ತರುವ ಅಥವಾ ಆಪ್ತರ ಸಲಹೆ ಪಡೆದು ನಿರ್ಧಾರ ಪ್ರಕಟಿಸುವುದಾಗಿ ಹೇಳಿ ಕಾಲಹರಣ ಮಾಡುವ ಸೂತ್ರವನ್ನು ಸಿದ್ದರಾಮಯ್ಯ ಸಿದ್ಧಪಡಿಸಿಕೊಂಡಿದ್ದಾರೆ. ಇದರೊಂದಿಗೆ ಸಂಪುಟ ವಿಸ್ತರಣೆ ಮಾಡದಿದ್ದರೆ ಉಂಟಾಗಬಹುದಾದ ರಾಜಕೀಯ ನಷ್ಟದ ಬಗ್ಗೆ ವರಿಷ್ಠರಿಗೆ ಮನವರಿಕೆ ಮಾಡಲು ತಯಾರಿ ನಡೆಸಿದ್ದಾರೆ.

ಇನ್ನೊಂದೆಡೆ, ಡಿಕೆ ಶಿವಕುಮಾರ್ ತಮಗೆ ಈ ಹಿಂದೆ ನೀಡಿದ್ದ ಭರವಸೆಯನ್ನು ಈಡೇರಿಸುವಂತೆ ಪಟ್ಟು ಹಿಡಿಯಲಿದ್ದಾರೆ. ಮುಂಬರುವ 2028ರ ವಿಧಾನಸಭೆ ಮತ್ತು 2029ರ ಲೋಕಸಭೆ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ತಮ್ಮ ನಾಯಕತ್ವದ ಅನಿವಾರ್ಯತೆ ಹಾಗೂ ಗಾಂಧಿ ಕುಟುಂಬಕ್ಕೆ, ವಿಶೇಷವಾಗಿ ಸೋನಿಯಾ ಗಾಂಧಿ ಅವರಿಗೆ ತಾವು ತೋರಿರುವ ನಿಷ್ಠೆಯ ಭಾವನಾತ್ಮಕ ವಿಷಯಗಳನ್ನು ಮುಂದಿಡಲಿದ್ದಾರೆ. ಕೇವಲ ಸಂಪುಟ ಪುನಾರಚನೆಗೆ ದೆಹಲಿ ಭೇಟಿ ಸೀಮಿತವಾದರೆ ತಮಗೆ ಹಿನ್ನಡೆಯಾಗಲಿದೆ ಎಂಬ ಆತಂಕದಲ್ಲಿರುವ ಡಿಸಿಎಂ, ಮೊದಲು ನಾಯಕತ್ವದ ಗೊಂದಲ ನಿವಾರಣೆಗೆ ಹಠ ಹಿಡಿಯುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಿದ್ದರಾಮಯ್ಯ ದೆಹಲಿ ಭೇಟಿ ಹಿಂದೆಯೇ ಸತೀಶ್ ಜಾರಕಿಹೊಳಿ ಸೇರಿ 7 ಮಂದಿ ಸಚಿವರ ಪಟಲಾಂ ರಾಜಧಾನಿಗೆ ದೌಡು!

ಒಟ್ಟಿನಲ್ಲಿ, ಇಬ್ಬರು ಮಹಾ ನಾಯಕರ ಹಿತಾಸಕ್ತಿ ಕಾಯ್ದು ಪಕ್ಷವನ್ನು ಮುನ್ನಡೆಸುವುದು ಈಗ ಎಐಸಿಸಿ ನಾಯಕತ್ವಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು 'ಪಂಕ್ಚರ್ ಮಾಫಿಯಾ' ಆಟ!
ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು 'ಪಂಕ್ಚರ್ ಮಾಫಿಯಾ' ಆಟ!