AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಾಂಗೆಸ್ಟ್ ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ’ ಆಗ್ತೀನಿ ಎಂದ ಸಿದ್ದರಾಮಯ್ಯ: ಸಿಎಂ ಹುದ್ದೆ ಚರ್ಚೆಗೆ ಮೆಗಾ ಟ್ವಿಸ್ಟ್

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ದೀರ್ಘಾವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮುಂದುವರಿಯುವ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದೊಳಗಿನ ಅಧಿಕಾರ ಹಂಚಿಕೆ ಕುರಿತ ಚರ್ಚೆಗಳಿಗೆ ಹೊಸ ತಿರುವು ನೀಡಿದೆ. ಈ ಹೇಳಿಕೆಯು ಕರ್ನಾಟಕ ಕಾಂಗ್ರೆಸ್‌ನ ಆಂತರಿಕ ರಾಜಕಾರಣದಲ್ಲಿ ಹೊಸ ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ.

‘ಲಾಂಗೆಸ್ಟ್ ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ’ ಆಗ್ತೀನಿ ಎಂದ ಸಿದ್ದರಾಮಯ್ಯ: ಸಿಎಂ ಹುದ್ದೆ ಚರ್ಚೆಗೆ ಮೆಗಾ ಟ್ವಿಸ್ಟ್
ಸಿದ್ದರಾಮಯ್ಯ
ಪ್ರಸನ್ನ ಗಾಂವ್ಕರ್​
| Edited By: |

Updated on: Feb 13, 2025 | 4:37 PM

Share

ಬೆಂಗಳೂರು, ಫೆಬ್ರವರಿ 13: ಆಡಳಿತಾರೂಢ ಕಾಂಗ್ರೆಸ್​ನಲ್ಲಿ ಸಿಎಂ ಹುದ್ದೆಗಾಗಿ ನಡೆಯುತ್ತಿರುವ ಪೈಪೋಟಿ ದಿನಕ್ಕೊಂದು ಸ್ವರೂಪ, ತಂತ್ರಗಾರಿಕೆ, ಕ್ಷಣಕ್ಕೊಂದು ತಿರುವು ಪಡೆಯುತ್ತಲೇ ಇದೆ. ಹಳ್ಳಿಯಿಂದ ಹಿಡಿದು ದೆಹಲಿಯ ತನಕ ಪಟ್ಟದ ರಾಜಕಾರಣ ಜೋರಾಗಿ ನಡೆಯುತ್ತಿದೆ. ಕಳೆದ ಹತ್ತು ದಿನಗಳಿಂದ ಮಂಡಿ ನೋವಿನಿಂದ ಓಡಾಡಲು ಅಸಾಧ್ಯವಾದರೂ ಕುಳಿತಲ್ಲೇ ಇರುವಂತಾಗಿದ್ದರೂ ಸಿಎಂ ಸಿದ್ದರಾಮಯ್ಯ ಉರುಳಿಸುತ್ತಿರುವ ದಾಳ ಅಸಾಧ್ಯವಾದ್ದು. ಸಿಎಂ ಸಿದ್ದರಾಮಯ್ಯ ಇದೀಗ ಮನಸ್ಸಿನ ಮಾತೊಂದನ್ನು ಬಿಚ್ಚಿಟ್ಟಿದ್ದು ಕಾಂಗ್ರೆಸ್​ನ ಆಂತರಿಕ ರಾಜಕಾರಣ ಅಷ್ಟು ಸುಲಭ ಇಲ್ಲ ಎಂಬುದನ್ನು ಬಿಂಬಿಸಿದೆ.

ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ, ಚುನಾವಣಾ ರಾಜಕೀಯದಿಂದ ನಿವೃತ್ತಿ ಆಗುವುದಿಲ್ಲ ಎಂದಿದ್ದಾರೆ. ಅಷ್ಟೇ ಅಲ್ಲ, ‘ಲಾಂಗೆಸ್ಟ್ ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ’ ಎಂಬ ದಾಖಲೆಯ ಖ್ಯಾತಿ ತಮಗೇ ಸಿಗಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ದಿವಂಗತ ದೇವರಾಜ ಅರಸು ಸುದೀರ್ಘ ಅವಧಿಗೆ ಸಿಎಂ ಆಗಿ ಸ್ಥಾನ ಅಲಂಕರಿಸಿದ್ದರು. ಬರೋಬ್ಬರಿ ಏಳು ವರ್ಷ ಏಳು ತಿಂಗಳ ಕಾಲ ದೇವರಾಜ ಅರಸು ಸಿಎಂ ಆಗಿ ಅಧಿಕಾರ ನಡೆಸಿದ್ದರು. ದೇವರಾಜ ಅರಸು ಬಳಿಕ ಐದು ವರ್ಷ ಪೂರ್ಣಾವಧಿ ಮುಗಿಸಿದ ಸಿಎಂ ಅಂದರೆ ಅದು ಸಿದ್ದರಾಮಯ್ಯ. ಇದೀಗ ದೇವರಾಜ ಅರಸು ಅವರ ಸುದೀರ್ಘ ಅವಧಿಯ ಸಿಎಂ ಎಂಬ ದಾಖಲೆಯನ್ನು ಮುರಿಯುವುದಕ್ಕೆ ಸಿದ್ದರಾಮಯ್ಯ ಇನ್ನೂ ಕೆಲವು ತಿಂಗಳು ಅಧಿಕಾರದಲ್ಲಿ ಮುಂದುವರಿಯಲೇಬೇಕಿದೆ. ಡಿಸಂಬರ್ ವರೆಗೆ ಸಿದ್ದರಾಮಯ್ಯ ಅನಾಯಾಸವಾಗಿ ಅಧಿಕಾರದಲ್ಲಿ ಮುಂದುವರಿದರೆ ದೇವರಾಜ ಅರಸು ದಾಖಲೆ ಮುರಿದು ಸುದೀರ್ಘ ಅವಧಿಯ ಸಿಎಂ ಎಂಬ ಖ್ಯಾತಿ ಸಿದ್ದರಾಮಯ್ಯಗೆ ಸಿಗಲಿದೆ. ಇದರ ಬಗ್ಗೆ ತನಗೆ ನಂಬಿಕೆ ಇದೆ ಎಂದಿರುವ ಸಿದ್ದರಾಮಯ್ಯ ಮಾತು ಹೊಸ ಕಿಚ್ಚು ಹಚ್ಚಿಸಿದೆ.

ಸಿದ್ದರಾಮಯ್ಯ ಹೀಗೆ ದಾಖಲೆಯ ಅವಧಿಯ ಬಗ್ಗೆ ಪ್ತಸ್ತಾಪ ಮಾಡುತ್ತಿದ್ದಂತೆಯೇ ಸಿದ್ದರಾಮಯ್ಯ ಆಪ್ತ ಸಚಿವರು ಹಿತೈಷಿಗಳು ಜೈ ಎಂದಿದ್ದಾರೆ.

ಸಿದ್ದರಾಮಯ್ಯ ಎರಡೂವರೆ ವರ್ಷದ ಬಳಿಕ ಸಿಎಂ ಸ್ಥಾನವನ್ನು ಡಿಕೆಶಿವಕುಮಾರ್ ಗೆ ಬಿಟ್ಟು ಕೊಡುತ್ತಾರೆ ಎಂಬ ಅಧಿಕಾರ ಹಂಚಿಕೆ ಸೂತ್ರ ಕಾಂಗ್ರೆಸ್​ನ ಆಂತರಿಕ ವಲಯದಲ್ಲಿ ಚರ್ಚೆಯಲ್ಲಿದೆ ಎನ್ನಲಾಗುತ್ತಿದೆ. ಆದರೆ ಇದನ್ನು ಅಲ್ಲಗಳೆದಿರುವ ಡಾ. ಜಿ ಪರಮೇಶ್ವರ್, ಅಂತಹ ಯಾವುದೇ ಸೂತ್ರದ ಬಗ್ಗೆ ತಮಗೆ ಗೊತ್ತಿಲ್ಲ. ಸಿದ್ದರಾಮಯ್ಯ ಐದು ವರ್ಷ ಪೂರ್ಣ ಅವಧಿಗೆ ಸಿಎಂ ಆಗಿರಲಿ ಎಂದಿದ್ದಾರೆ‌. ಎಂಬಿ ಪಾಟೀಲ್, ಎಚ್​ಸಿ ಮಹದೇವಪ್ಪ ಕೂಡ ಇದಕ್ಕೆ ದನಿಗೂಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಅಭಿವೃದ್ಧಿ ಸಚಿವರನ್ನು ಬದಲಾಯಿಸಿ: ಸಿಎಂ ಸಿದ್ದರಾಮಯ್ಯಗೆ ಶಾಸಕ ಮುನಿರತ್ನ ಪತ್ರ

ಸದ್ಯ ಕಾಂಗ್ರೆಸ್​‌ನಲ್ಲಿ ಆಂತರಿಕ ಬೇಗುದಿ ಹೆಚ್ಚಿಸಿರುವುದೇ ಸಿದ್ದರಾಮಯ್ಯ ಅಧಿಕಾರ ಮೊಟಕಾಗುತ್ತದಾ ಎಂಬ ಪ್ರಶ್ನೆಯಿಂದ. ಇದೀಗ ಸಿದ್ದರಾಮಯ್ಯ ಅವರೇ ದಾಖಲೆಯ ಅವಧಿಗೆ ತಾವು ಮುಂದುವರಿಯುತ್ತೇನೆ ಎನ್ನುವ ಮೂಲಕ ಪವರ್ ಶೇರಿಂಗ್ ಅಷ್ಟು ಸುಲಭದ ವಿಷಯವಲ್ಲ ಎಂದು ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ.

ಇದರ ಮಧ್ಯೆ ದಾಖಲೆಯ ಅವಧಿಗೆ ಸಿಎಂ ಆದ ಬಳಿಕ ಸಿದ್ದರಾಮಯ್ಯ ಸೀಟು ಬಿಟ್ಟುಕೊಡ್ತಾರಾ? ಅಥವಾ ದಾಖಲೆಯನ್ನು ಮಾಡುವುದಕ್ಕೆ ಸಿದ್ದರಾಮಯ್ಯಗೆ ಡಿಕೆಶಿವಕುಮಾರ್ ಅವಕಾಶ ಬಿಟ್ಟುಕೊಡ್ತಾರಾ? ಇದೇ ಸದ್ಯದ ಪ್ರಶ್ನೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು