AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬದಲಾವಣೆ ಚರ್ಚೆಗೆ ಸ್ವಾಮೀಜಿಗಳೂ ಎಂಟ್ರಿ: ಒಪ್ಪಂದದಂತೆ ಸಿಎಂ ಸ್ಥಾನ ಕಲ್ಪಿಸಿಕೊಟ್ಟರೆ ಒಳ್ಳೆಯದೆಂದ ಸ್ವಾಮೀಜಿ

ಕಾಂಗ್ರೆಸ್​ನಲ್ಲಿ ಬದಲಾವಣೆಯ ಗಾಳಿ ಬೀಸಿದೆ. ನಾಯಕತ್ವ ಬದಲಾವಣೆ ಕೂಗು ಎದ್ದಿದೆ. ಕಾಂಗ್ರೆಸ್​ ಪಾಳಯದಲ್ಲಿನ ಆಂತರಿಕ ಕಚ್ಚಾಟ ದೆಹಲಿ ಮಟ್ಟಕ್ಕೂ ಮುಟ್ಟಿದ್ದು, ಶಾಸಕರ ಅಭಿಪ್ರಾಯ ಸಂಗ್ರಹಕ್ಕೆ ಸುರ್ಜೇವಾಲ ಸಭೆಗಳ ಮೇಲೆ ಸಭೆಗಳನ್ನು ನಡೆಸುತ್ತಿದ್ದಾರೆ. ಈಮಧ್ಯೆ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸ್ವಾಮೀಜಿಗಳೂ ಧ್ವನಿಗೂಡಿಸಿದ್ದು, ಹೇಳಿಕೆಗಳನ್ನು ನೀಡಲು ಆರಂಭಿಸಿದ್ದಾರೆ.

ಸಿಎಂ ಬದಲಾವಣೆ ಚರ್ಚೆಗೆ ಸ್ವಾಮೀಜಿಗಳೂ ಎಂಟ್ರಿ: ಒಪ್ಪಂದದಂತೆ ಸಿಎಂ ಸ್ಥಾನ ಕಲ್ಪಿಸಿಕೊಟ್ಟರೆ ಒಳ್ಳೆಯದೆಂದ ಸ್ವಾಮೀಜಿ
ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರಸನ್ನ ಗಾಂವ್ಕರ್​
| Edited By: |

Updated on: Jul 07, 2025 | 6:58 AM

Share

ಬೆಂಗಳೂರು, ಜುಲೈ 7: ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಡುತ್ತಾರೆ. ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸಿಎಂ ಪಟ್ಟಕ್ಕೇರುತ್ತಾರೆ ಎಂಬ ಪುಕಾರು ಕಾಂಗ್ರೆಸ್ ಪಾಳಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಇದರ ಮಧ್ಯೆ ಈ ವಿಚಾರಕ್ಕೆ ಸ್ವಾಮೀಜಿಗಳೂ ಕೂಡ ಧ್ವನಿಗೂಡಿಸಿದ್ದಾರೆ. ಜೂನ್​ 27 ರಂದು ಕೆಂಪೇಗೌಡ ಜಯಂತಿಯಂದು ಮಾತನಾಡಿದ್ದ ನಿಶ್ಚಲಾನಂದ ಸ್ವಾಮೀಜಿ, ಡಿಕೆಶಿ ನಾಡ ಪ್ರಭುವಾಗಲಿ ಎಂದಿದ್ದರು. ಭಾನುವಾರ ಮಾತನಾಡಿರುವ ರಂಭಾಪುರ ಶ್ರೀಗಳು, ಕಾಂಗ್ರೆಸ್ ವರಿಷ್ಠರ ಸಮ್ಮುಖದಲ್ಲಿ ನಡೆದ ಒಪ್ಪಂದಂತೆ ಮತ್ತು ಒಡಂಬಡಿಕೆಯಂತೆ ಡಿಕೆ ಶಿವಕುಮಾರ್​​ಗೆ ಸಿಎಂ ಸ್ಥಾನ ಕಲ್ಪಿಸಿಕೊಟ್ಟರೆ ಒಳ್ಳೆಯದು ಎಂದಿದ್ದಾರೆ.

ಏತನ್ಮಧ್ಯೆ, ಒಡಂಬಡಿಕೆ ಬಗ್ಗೆ ನಾನು ಬಹಿರಂಗವಾಗಿ ಯಾಕೆ ಮಾತನಾಡಲಿ ಎಂದು ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಮತ್ತೊಂದೆಡೆ, ಧ್ವನಿ ಇಲ್ಲದವರಿಗೆ ಧ್ವನಿ ಕೊಟ್ಟಿದ್ದು ನಮ್ಮ ದೊರೆ ರಾಜ ಸಿದ್ದರಾಮಯ್ಯ ಎಂದು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಹೇಳಿದ್ದಾರೆ. ಇತ್ತ ಸಿದ್ದರಾಮಯ್ಯ ಪುತ್ರ ಯತೀಂದ್ರ ಕೂಡ, 5 ವರ್ಷ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಹೇಳಿದ್ದಾರೆ.

ಇನ್ನು ಗದಗ ಜಿಲ್ಲೆ ರೋಣ ತಾಲೂಕು ಕೌಜಗೇರಿ ಗ್ರಾಮದ ಮೊಹರಂ ಹಬ್ಬದ ಅಲಿ ದೇವರ ವಾಣಿಯೂ ಸಿದ್ದರಾಮಯ್ಯ ಪರವೇ ಬಂದಿದೆ. ‘‘ಹಾಲು ಕೆಟ್ಟರೂ, ಹಾಲಮತ ಕೆಡಂಗಿಲ್ಲ. ಅಂಥವ್ರ ಕೈಯಾಗ ಅಧಿಕಾರ ಸಿಕ್ಕಿದೆ. ನೀವು ಕೊಟ್ಟೀರಿ. ಅದನ್ನು ಬದಲಿ ಮಾಡುವುದು ಅಷ್ಟು ಸುಲಭವಲ್ಲ. ಬಹಳ‌ ಕಠಿಣ ಐತಿ’’ ಎಂದು ದೇವರ ವಾಣಿ ಹೇಳಿದೆ.

ಇದನ್ನೂ ಓದಿ
Image
ಹೃದಯಾಘಾತ ಪ್ರಕರಣ: ಸಿಎಂ ಹೇಳಿಕೆ ಬೇಜವಾಬ್ದಾರಿ ಪರಮಾವಧಿ, ಜೋಶಿ
Image
ಸಿದ್ದರಾಮಯ್ಯಗೆ ಹೈಕಮಾಂಡ್ ಮಹತ್ವದ ಹುದ್ದೆ: ಅಂತೆ-ಕಂತೆಗಳಿಗೆ ಸಿಎಂ ತೆರೆ
Image
ಒಕ್ಕಲಿಗರು ಹಾಗೂ ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಓಬಿಸಿಗಳು:ಡಿಕೆ ಶಿವಕುಮಾರ್
Image
ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆ ಬಂದ್: ರಾಯರೆಡ್ಡಿ..!

ಶಾಸಕರ ಜೊತೆ ಸುರ್ಜೇವಾಲ ಇಂದು ಮತ್ತೆ ಸಭೆ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಎರಡನೇ ಹಂತದ ಶಾಸಕರ ಮೀಟಿಂಗ್ ನಡೆಸಲು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮತ್ತೆ ಮೂರು ದಿನಗಳ ಕಾಲ ಶಾಸಕರ ಜೊತೆಗೆ ಚರ್ಚೆ ನಡೆಸಲಿರುವ ಸುರ್ಜೆವಾಲ, ಸಚಿವರ ಕಾರ್ಯವೈಖರಿ ಬಗ್ಗೆಯೂ ಮಾಹಿತಿ ಸಂಗ್ರಹಿಸುವ ಸಾಧ್ಯತೆಗಳು ದಟ್ಟವಾಗಿವೆ. ಆಯಾಯ ಕ್ಷೇತ್ರದಲ್ಲಿ ಆಗದೇ ಇರುವ ಕೆಲಸಗಳ ಬಗ್ಗೆಯೂ ಸುರ್ಜೇವಾಲ ಮಾಹಿತಿ ಸಂಗ್ರಹ ಮಾಡಲಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯಗೆ ಹೈಕಮಾಂಡ್ ಮಹತ್ವದ ಹುದ್ದೆ: ರಾಷ್ಟ್ರ ರಾಜಕಾರಣ, ಅಂತೆ-ಕಂತೆಗಳಿಗೆ ತೆರೆ ಎಳೆದ ಸಿಎಂ

ಶಾಸಕರ ಜೊತೆಗಿನ ಸಭೆಯ ಬಳಿಕ ಸಚಿವರಿಗೂ ಪ್ರತ್ಯೇಕವಾಗಿ ಸುರ್ಜೆವಾಲ ಬುಲಾವ್ ಹೊರಡಿಸಲಿದ್ದಾರೆ. ಶಾಸಕರು ಹೇಳಿದ ಅಭಿಪ್ರಾಯಗಳನ್ನು ಇಟ್ಟುಕೊಂಡು ಸಂಪುಟ ಪುನರ್​ರಚನೆಗೂ ಹೈಕಮಾಂಡ್ ಹೋಂ ವರ್ಕ್ ನಡೆಸಲಿದೆ. ಈಗಾಗಲೇ ಸಚಿವರಿಂದ ಹೈಕಮಾಂಡ್ ರಿಪೋರ್ಟ್ ಕಾರ್ಡ್ ಪಡೆದುಕೊಂಡು ಪರಿಶೀಲನೆ ನಡೆಸಿದೆ. ಆಯಾಯ ಇಲಾಖೆಗೆ ಸಂಬಂದಿಸಿ 5 ಪ್ರಶ್ನೆಗಳ ರಿಪೋರ್ಟ್ ಕಾರ್ಡ್ ಪಡೆದಿರುವ ಹೈಕಮಾಂಡ್, ಸಚಿವರ ರಿಪೋರ್ಟ್ ಆಧರಿಸಿ ಪ್ರಗತಿ ಪರಿಶೀಲನೆ ನಡೆಸುತ್ತಿದೆ. ಸಚಿವರ ರಿಪೋರ್ಟ್​​ಗೂ ಶಾಸಕರ ದೂರಿಗೂ ತಾಳೆ ಹಾಕಲಿರುವ ಹೈಕಮಾಂಡ್, ಸಚಿವರ ಕಾರ್ಯವೈಖರಿ ಗಮನಿಸಿ ಕ್ಯಾಬಿನೆಟ್​​ನಲ್ಲಿ ಮುಂದುವರಿಸಬೇಕಾ ಕೈ ಬಿಡಬೇಕಾ ಎಂದು ತೀರ್ಮಾನಿಸಲಿದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು