AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಗ್ಯಾರಂಟಿ ಜಾರಿಯಾಗುವ ಟೈಂ ಬಂದೇ ಬಿಡ್ತು, ಶುಭ ಶುಕ್ರವಾರದಂದೇ ಜನರಿಗೆ ಫ್ರೀ ಗಿಫ್ಟ್‌ ಕೊಡಲು ತೀರ್ಮಾನ

ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ ಐದು ಗ್ಯಾರಂಟಿ ಜಾರಿಗೆಗೆ ನಿನ್ನೆಯೇ(ಜೂನ್ 01) ಅಂತಿಮ ಕಸರತ್ತುಗಳು ನಡೆದಿದ್ದು. ಘೋಷಣೆಗೆ ಕ್ಷಣಗಣನೇ ಶುರುವಾಗಿದೆ. ಇಂದು (ಜೂನ್ 02) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದ್ದು, ಸಂಪುಟ ಸಭೆಯ ಬಳಿಕ ಖುದ್ದು ಸಿದ್ದರಾಮಯ್ಯ ಅವರೇ ಗ್ಯಾರಂಟಿ ಘೋಷಣೆ ಮಾಡಲಿದ್ದಾರೆ.

5 ಗ್ಯಾರಂಟಿ ಜಾರಿಯಾಗುವ ಟೈಂ ಬಂದೇ ಬಿಡ್ತು, ಶುಭ ಶುಕ್ರವಾರದಂದೇ ಜನರಿಗೆ ಫ್ರೀ ಗಿಫ್ಟ್‌ ಕೊಡಲು ತೀರ್ಮಾನ
5 ‘ಗ್ಯಾರಂಟಿ’
ರಮೇಶ್ ಬಿ. ಜವಳಗೇರಾ
|

Updated on:Jun 02, 2023 | 7:25 AM

Share

ಮುಖ್ಯಾಂಶಗಳು

  • ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ
  • 5 ಗ್ಯಾರಂಟಿ ಜಾರಿ ಸಂಬಂಧ ಇಂದು ಸಂಪುಟ ಸಭೆಯಲ್ಲಿ ಚರ್ಚೆ
  • ಶುಭ ಶುಕ್ರವಾರದಂದೇ ಜನರಿಗೆ ಫ್ರೀ ಗಿಫ್ಟ್‌ ಕೊಡಲು ತೀರ್ಮಾನ

ಬೆಂಗಳೂರು: ಒಂದಲ್ಲ ಎರಡಲ್ಲ ಐದು ಗ್ಯಾರಂಟಿ(Five guarantees ). ವಿಧಾನಸಭೆ ಚುನಾವಣೆಯಲ್ಲಿ(Karnataka Assembly Elections 2023) ಕಾಂಗ್ರೆಸ್​ಗೆ ಪ್ರಚಂಡ ಗೆಲುವು ನೀಡಿದ ಗ್ಯಾರಂಟಿ.. ಇಡೀ ರಾಜ್ಯಕ್ಕೆ ರಾಜ್ಯವೇ ಎದುರು ನೋಡುತ್ತಿರುವ ಗ್ಯಾರಂಟಿ. ಹಾದಿ ಬೀದಿಯಲ್ಲಿ ಚರ್ಚೆ ಆಗುತ್ತಿರುವ ಗ್ಯಾರಂಟಿ. ಇದೀಗ ಇದೇ ಗ್ಯಾರಂಟಿ ಘೋಷಣೆಗೆ ಕ್ಷಣಗಣನೇ ಶುರುವಾಗಿದೆ. ಕಾಂಗ್ರೆಸ್(Congress) ಸರ್ಕಾರ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯ ಸಿಎಂ ಆಗಿ, ಡಿಕೆ ಶಿವಕುಮಾರ್ ಡಿಸಿಎಂ ಆಗಿ 13ನೇ ದಿನದ ಬಳಿಕ ಅಂದ್ರೆ ಕಾಂಗ್ರೆಸ್ ಘೋಷಿಸಿದ ಐದು ಗ್ಯಾರಂಟಿ ಜಾರಿ ಆಗುವ ಟೈಂ ಬಂದೇ ಬಿಟ್ಟಿದೆ. ಇಂದು ಶುಭ ಶುಕ್ರವಾರದ ದಿನ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಇವತ್ತಿನ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ಅಂತಿಮ ಮುದ್ರೆ ಬೀಳಲಿದೆ. ಖುದ್ದು ಸಿಎಂ ಸಿದ್ದರಾಮಯ್ಯ ಕ್ಯಾಬಿನೆಟ್ ಬಳಿಕ ಗ್ಯಾರಂಟಿ ಘೋಷಣೆಗೆ ಸಜ್ಜಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಎಲ್ಲಾ ಇಲಾಖೆ ಜತೆ ಸಭೆ ನಡೆಸಿದ್ದು, ಅಂತಿಮ ನಿರ್ಧಾರಕ್ಕೆ ಬಂದಿದ್ದಾರೆ. ರಾಜ್ಯದ ಜನರಿಗೆ ಫ್ರೀ ಗಿಫ್ಟ್‌ ಕೊಡಲು ತೀರ್ಮಾನಿಸಿದ್ದಾರೆ. ಅದಕ್ಕಾಗಿ ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಮಹಿಳೆಯರ ಫ್ರೀ ಬಸ್‌ಪಾಸ್‌, ಮನೆ ಒಡತಿಯರ ಅಕೌಂಟ್‌ಗೆ 2 ಸಾವಿರ ಹಣ, 200 ಯೂನಿಟ್‌ ಉಚಿತ ವಿದ್ಯುತ್‌, ನಿರುದ್ಯೋಗ ಭತ್ಯೆ ಹಾಗೂ ಫ್ರೀ 10 ಕೆಜಿ ಅಕ್ಕಿ ವಿತರಣೆ ಬಗ್ಗೆ ಸರ್ಕಾರ ತನ್ನ ನಿರ್ಧಾರ ಪ್ರಕಟಿಸಲಿದೆ.

ಸಂಪುಟ ಸಭೆಗೂ ಮುನ್ನ ಅಧಿಕಾರಿಗಳ ಜೊತೆ ಸಭೆ

ಇನ್ನೂ ಇಂದು ಬೆಳಗ್ಗೆ 11 ಕ್ಯಾಬಿನೆಟ್​​ ಸಭೆ ನಿಗಧಿಯಾಗಿದ್ದು, ಈ ಸಭೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಹಿರಿಯ ಅಧಿಕಾರಿಗಳ ಜತೆ ಫೈನಲ್​ ಮೀಟಿಂಗ್​ ಮಾಡಲಿದ್ದಾರೆ.. ಮುಖ್ಯ ಕಾರ್ಯದರ್ಶಿ, ಆರ್ಥಿಕ ಇಲಾಖೆ, ವಿಶೇಷ ಅಧಿಕಾರಿಗಳ ಜತೆ ಚರ್ಚಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳ ಆರ್ಥಿಕ ನೀಲಿನಕ್ಷೆ, ಅನುಷ್ಠಾನದ ನೀಲಿನಕ್ಷೆ ಬಗ್ಗೆ ಚರ್ಚಿಸಲಿದ್ದಾರೆ.

ಸಿಎಂ ಈಗಾಗಲೇ ಇಲಾಖಾವಾರು ಸಂಪೂರ್ಣ ಮಾಹಿತಿ ಪಡೆದಿದ್ದು, ಕ್ಯಾಬಿನೆಟ್​​ ಸಭೆಯಲ್ಲಿ ವ್ಯಕ್ತವಾಗುವ ಉತ್ತಮ ಅನುಷ್ಠಾನದ ಐಡಿಯಾವನ್ನ ಜಾರಿ ಮಾಡುವ ಸಾಧ್ಯತೆಯಿದೆ. ಸಭೆಯಲ್ಲಿ ಐದೂ ಗ್ಯಾರಂಟಿ ಯೋಜನೆ ಸ್ಪಷ್ಟತೆ ಸಿಕ್ಕರೆ ಎಲ್ಲ ಯೋಜನೆ ಘೋಷಣೆ ಸಾಧ್ಯತೆ ಇದೆ. ಇಲ್ಲವಾದಲ್ಲಿ ಅನ್ನಭಾಗ್ಯ, ಗೃಹ ಜ್ಯೋತಿ ಮತ್ತು ಯುವನಿಧಿ ಯೋಜನೆಗಳನ್ನ ಘೋಷಣೆ ಸಾಧ್ಯತೆಯಿದೆ ಎನ್ನಲಾಗಿದೆ. ಉಳಿದ ಗೃಹ ಲಕ್ಷ್ಮೀ, ಮಹಿಳೆಯರ ಫ್ರೀ ಬಸ್‌ಪಾಸ್‌ ಗ್ಯಾರಂಟಿಗಳನ್ನ ಎರಡನೇ ಹಂತದಲ್ಲಿ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನೂ ಐದು ಗ್ಯಾರಂಟಿ ಯೋಜನೆಗಳಿಗೆ ಹಣಕಾಸು ಇಲಾಖೆ ಅಧಿಕಾರಿಗಳು ಇವತ್ತು ಸರ್ಕಾರಕ್ಕೆ ವರದಿ ನೀಡಲಿದ್ದಾರೆ. ಒಟ್ಟಿನಲ್ಲಿ ಇಂದಿನ ಸಚಿವ ಸಂಪುಟ ಸಭೆ ತೀವ್ರ ಕುತಹಲ ಮೂಡಿಸಿದ್ದು, ಏನೆಲ್ಲಾ ಉಚಿತವಾಗಿ ಸಿಗಲಿದೆ ಎನ್ನುವುದನ್ನ ತಿಳಿದುಕೊಳ್ಳಲು ರಾಜ್ಯದ ಜನತೆ ಕಾತರರಾಗಿದ್ದಾರೆ.

Published On - 7:07 am, Fri, 2 June 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ