AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Waqf Notice: ರೈತರಿಗೆ ನೀಡಿದ್ದ ವಕ್ಫ್​ ನೋಟಿಸ್ ವಾಪಸ್​ಗೆ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಕರ್ನಾಟಕದಲ್ಲಿ ಇದೀಗ ವಕ್ಫ್​ ಆಸ್ತಿ ವಿವಾದ ಭುಗಿಲೆದ್ದಿದೆ. ಈ ಮಧ್ಯೆ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದು ಅಧಿಕೃತ ಆದೇಶವೂ ಹೊರಬಿದ್ದಿದೆ.

Waqf Notice: ರೈತರಿಗೆ ನೀಡಿದ್ದ ವಕ್ಫ್​ ನೋಟಿಸ್ ವಾಪಸ್​ಗೆ ಕರ್ನಾಟಕ ಸರ್ಕಾರ ಅಧಿಕೃತ ಆದೇಶ
ಸಿದ್ದರಾಮಯ್ಯ
ನಯನಾ ರಾಜೀವ್
|

Updated on:Nov 10, 2024 | 7:51 AM

Share

ಕರ್ನಾಟಕದಲ್ಲಿ ಇದೀಗ ವಕ್ಫ್​ ಆಸ್ತಿ ವಿವಾದ ಭುಗಿಲೆದ್ದಿದೆ. ಈ ಮಧ್ಯೆ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದು ಅಧಿಕೃತ ಆದೇಶವೂ ಹೊರಬಿದ್ದಿದೆ.

ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್‌ ಪಡೆರಿಯಿ. ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಸೂಚಿಸಿದ್ದರು. ಕಾನೂನು ಬಾಹಿರವಾಗಿ ಹಾಗೂ ನೋಟಿಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಕೆಲಸ ದಿನಗಳ ಹಿಂದೇ ಸೂಚನೆ ನೀಡಿದ್ದರು. ಇದೀಗ ಅಧಿಕೃವಾಗಿ ಆದೇಶ ಹೊರಬಿದ್ದಿದೆ.

ರೈತರ ಜಮೀನಿನಿಂದ ಆರಂಭವಾದ ಈ ವಕ್ಫ್ ಆಸ್ತಿ ವಿವಾದ ಕೊನೆಗೆ ಮಠ ಹಾಗೂ ಹಿಂದೂ ದೇವಾಲಯಗಳಿಗೂ ನೋಟಿಸ್ ನೀಡುವವರೆಗೆ ಬಂದಿತ್ತು. ಬಳಿಕ ರಾಜ್ಯದಲ್ಲಿ ರೈತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಸದ್ಯ ಎಚ್ಚೆತ್ತುಕೊಂಡಿರುವ ಸರ್ಕಾರ ರೈತರಿಗೆ ನೀಡಿದ್ದ ನೋಟಿಸ್​ನ್ನು ಅಧಿಕೃತವಾಗಿ ವಾಪಾಸ್ ಪಡೆದುಕೊಂಡಿದೆ.

ಮತ್ತಷ್ಟು ಓದಿ: ರೈತರಿಗೆ ನೀಡಿರುವ ವಕ್ಫ್ ನೋಟೀಸ್ ವಾಪಸ್​ ಪಡೆಯಿರಿ, ತಕ್ಷಣ ತಿದ್ದುಪಡಿ ರದ್ದು ಮಾಡಿ: ಸಿದ್ದರಾಮಯ್ಯ ಖಡಕ್ ಸೂಚನೆ

ಮ್ಯುಟೇಷನ್ ಪ್ರಕ್ರಿಯೆ ಸ್ಥಗಿತಗೊಳಿಸಬೇಕು. ಈ ಕುರಿತು ನೀಡಲಾದ ನೋಟೀಸ್‌ಗಳನ್ನ ಹಿಂಪಡೆಯುವುದು, ಸದರಿ ಜಮೀನುಗಳಲ್ಲಿ ವ್ಯವಸಾಯ ಮಾಡುವ ರೈತರ ವಿರುದ್ಧ ಯಾವುದೇ ಕ್ರಮ ಜರುಗಿಸುವಂತಿಲ್ಲ ಎಂದು ಅದೇಶ ಹೊರಡಿಸಿದೆ.

ಆರಂಭವಾಗಿದ್ದೆಲ್ಲಿಂದ? ವಿಜಯಪುರ ಜಿಲ್ಲೆಯ ರೈತರಿಗೆ ವಕ್ಫ್ ಬೋರ್ಡ್‌ನಿಂದ ಬಂದ ನೋಟಿಸ್ ಶಾಕ್ ನೀಡಿತ್ತು. ತಲೆತಲಾಂತರಗಳಿಂದ ಉಳುಮೆ ಮಾಡಿಕೊಂಡು ಬಂದದ್ದ ರೈತರು ಜಮೀನು ಕಳೆದುಕೊಳ್ಳುವ ಆತಂಕ ಎದುರಿಸಿದ್ದರು. ನೋಟಿಸ್‌ನಲ್ಲಿ ಅವರು ಉಳುಮೆ ಮಾಡುತ್ತಿದ್ದ ಜಮೀನು ವಕ್ಪ್ ಸ್ವತ್ತು ಎಂದು ಹೇಳಲಾಗಿತ್ತು. ಅಷ್ಟೇ ಅಲ್ಲದೆ ರೈತರ ಪಹಣಿಯಲ್ಲೂ ವಕ್ಫ್ ಜಮೀನು ಎಂದು ಬದಲಾವಣೆ ಮಾಡಲಾಗಿತ್ತು. ಇದು ರೈತರ ಆತಂಕಕ್ಕೆ ಕಾರಣವಾಗಿತ್ತು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:45 am, Sun, 10 November 24

ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ