AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಬ್ಲ್ಯೂಎಂಎ ಆದೇಶ: ವಾಸ್ತವಾಂಶ ಮುಂದಿಟ್ಟರೂ ಹಿನ್ನಡೆಯಾಗುತ್ತಿದೆ ಎಂದ ಸಿದ್ದರಾಮಯ್ಯ

ತಮಿಳುನಾಡಿಗೆ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಮತ್ತೆ ಹಿನ್ನಡೆಯಾಗುತ್ತಲೇ ಇದೆ. ಪ್ರತೀ ಬಾರಿಯೂ ತಮಿಳುನಾಡು ಪರ ಆದೇಶ ಬರುತ್ತಲೇ ಇದ್ದು, ಕರ್ನಾಟಕದ ಅಧಿಕಾರಿಗಳು ಸರಿಯಾಗಿ ವಾದ ಮಂಡಿಸುತ್ತಿಲ್ಲ ಎಂಬ ಆರೋಪವಿದೆ. ಇಂದಿನ ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ವಾಸ್ತವಾಂಶ ಮುಂದಿಟ್ಟರೂ ಹಿನ್ನಡೆಯಾಗುತ್ತಿದೆ ಎಂದು ಹೇಳಿದ್ದಾರೆ.

ಸಿಡಬ್ಲ್ಯೂಎಂಎ ಆದೇಶ: ವಾಸ್ತವಾಂಶ ಮುಂದಿಟ್ಟರೂ ಹಿನ್ನಡೆಯಾಗುತ್ತಿದೆ ಎಂದ ಸಿದ್ದರಾಮಯ್ಯ
ಸಿಡಬ್ಲ್ಯೂಎಂಎ ಆದೇಶದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ
ಕಿರಣ್​ ಹನಿಯಡ್ಕ
| Edited By: Rakesh Nayak Manchi|

Updated on:Sep 29, 2023 | 7:18 PM

Share

ಬೆಂಗಳೂರು, ಸೆ.29: ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿ ದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು (CWMA) ಕರ್ನಾಟಕಕ್ಕೆ ಆದೇಶ ಹೊರಡಿಸಿದೆ. ಈ ಬಗ್ಗೆ ರೈತರು ಹಾಗೂ ಕನ್ನಡಪರ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ವಾಸ್ತವಾಂಶ ಮುಂದಿಟ್ಟರೂ ಹಿನ್ನಡೆಯಾಗುತ್ತಿದೆ ಎಂದಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಇಂದು ಸಿಡಬ್ಲ್ಯೂಎಂಎ ಸಭೆ ಇತ್ತು. ನಾವು ಇದರ ಬಗ್ಗೆ ಸುಪ್ರೀಂ ಕೋರ್ಟ್​ನಲ್ಲಿ ಪ್ರಶ್ನೆ ಮಾಡಲು ಸಾಧ್ಯವಾ ಅಂತಾ ಕಾನೂನು ತಜ್ಞರ ತಂಡದ ಜೊತೆ ಕೇಳಿದ್ದೇನೆ. ಇಂದು ಸುಪ್ರೀಂ ಕೋರ್ಟ್ ನಿವೃತ್ತ ಜಡ್ಜ್​ಗಳ ಜೊತೆ ಸಭೆ ಕರೆದಿದ್ದೇನೆ ಎಂದರು.

ಇದನ್ನೂ ಓದಿ: Karnataka Bandh: ರ‍್ಯಾಲಿ ತೆಗೆಯಲು ಅವಕಾಶ ನೀಡದ ಸಿದ್ದರಾಮಯ್ಯ ಯಾರ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ? ವಾಟಾಳ್ ನಾಗರಾಜ್

ನಾವು ಪ್ರಾಧಿಕಾರದ ಮುಂದೆ ಎಲ್ಲಾ ವಾಸ್ತವಾಂಶಗಳನ್ನು ಮುಂದೆ ಇಟ್ಟಿದ್ದೇವೆ. ಆದರೂ ನಮಗೆ ಹಿನ್ನೆಡೆ ಆಗುತ್ತಿದೆ. ನೋಡೋಣ ಲೀಗಲ್ ಟೀಮ್, ತಜ್ಞರ ಜೊತೆ ಸಭೆ ಬಳಿಕ ಒಂದು ತೀರ್ಮಾನ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಕಾನೂನು ತಜ್ಞರ ಸಭೆ

ಸಿಡಬ್ಲ್ಯೂಎಂಎ, ಸಿಡಬ್ಲ್ಯೂಆರ್​ಸಿ ಸಭೆಯಲ್ಲಿ ಕರ್ನಾಟಕಕ್ಕೆ ಪದೇಪದೆ ಹಿನ್ನಡೆಯಾಗುತ್ತಿರುವ ಹಿನ್ನೆಲೆ ಸಿದ್ದರಾಮಯ್ಯ ಅವರು ಇಂದು ಸಂಜೆ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಕಾನೂನು ತಜ್ಞರ ಸಭೆ ಕರೆದಿದ್ದಾರೆ. ಸುಪ್ರೀಂಕೋರ್ಟ್​, ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿಗಳು ಸಭೆಯಲ್ಲಿ ಭಾಗಿಯಾಗಲಿದ್ದು, ನಿವೃತ್ತ ನ್ಯಾಯಮೂರ್ತಿಗಳಾದ ಹೆಚ್.ಎಲ್.ದತ್ತು, ಗೋಪಾಲಗೌಡ, ರವೀಂದ್ರಬಾಬು, ರಾಜೇಂದ್ರಬಾಬು, ಎಂ.ಎನ್.ವೆಂಕಟಾಚಲಯ್ಯ ಅವರಿಗೆ ಆಹ್ವಾನ ನೀಡಿದ್ದಾರೆ.

CWMA ಆದೇಶ ಉಲ್ಲಂಘಿಸಿದರೆ ಆಗುವ ಸಾಧಕ ಬಾಧಕಗಳ ಬಗ್ಗೆ ಕಾನೂನು ತಜ್ಞರ ಸಭೆಯಲ್ಲಿ ಚರ್ಚೆ ನಡೆಯಲಿದೆ. ಅಲ್ಲದೆ, ಮುಂದಿನ ಕಾನೂನು ಹೋರಾಟದ ಬಗ್ಗೆಯೂ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರು ಚರ್ಚೆ ನಡೆಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:28 pm, Fri, 29 September 23

Follow Us
Kiran Haniyadka
Kiran Haniyadka
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ