Sign In

By signing in or creating an account, you agree with Associated Broadcasting Company's Terms & Conditions and Privacy Policy.

2024-25ನೇ ಶೈಕ್ಷಣಿಕ ವರ್ಷದಿಂದ ಕರ್ನಾಟದಲ್ಲಿ ಎನ್​​ಇಪಿ ಇರಲ್ಲ; ಸಿಎಂ ಸಿದ್ದರಾಮಯ್ಯ ಘೋಷಣೆ

Siddaramaiah Statement on NEP; ಎನ್​​ಇಪಿ ಅನ್ನು ರದ್ದುಗೊಳಿಸಲು ಕೆಲವು ತಯಾರಿ ಅಗತ್ಯವಿದೆ. ಈ ವರ್ಷ ಅದಕ್ಕೆ ಸಮಯ ಸಿಕ್ಕಿರಲಿಲ್ಲ. ಚುನಾವಣೆ ಮುಗಿದು ನಮ್ಮ ಸರ್ಕಾರ ಬರುವ ವೇಳೆಗೆ ಶೈಕ್ಷಣಿಕ ವರ್ಷ ಆರಂಭವಾಗಿತ್ತು. ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಈ ವರ್ಷ ಎನ್‌ಇಪಿಯನ್ನು ಮುಂದುವರಿಸಲು ನಾವು ನಿರ್ಧರಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

2024-25ನೇ ಶೈಕ್ಷಣಿಕ ವರ್ಷದಿಂದ ಕರ್ನಾಟದಲ್ಲಿ ಎನ್​​ಇಪಿ ಇರಲ್ಲ; ಸಿಎಂ ಸಿದ್ದರಾಮಯ್ಯ ಘೋಷಣೆ
ಸಿದ್ದರಾಮಯ್ಯ
Follow us
TV9 Web
| Updated By: Ganapathi Sharma

Updated on: Aug 14, 2023 | 7:27 PM

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (National Education Policy) ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸೋಮವಾರ ಘೋಷಿಸಿದ್ದಾರೆ. ಕೆಪಿಸಿಸಿ ನೂತನ ಕಟ್ಟಡದಲ್ಲಿ ನಡೆದ ಸರ್ವಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹಿಂದಿನ ಬಿಜೆಪಿ ಸರ್ಕಾರವು ಪರಿಚಯಿಸಿದ ಎನ್‌ಇಪಿಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಸಂಪೂರ್ಣವಾಗಿ ರದ್ದುಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಇದರೊಂದಿಗೆ, ಅವರು ಮೊದಲ ಬಾರಿಗೆ ಎನ್​​ಇಪಿ ರದ್ದತಿ ಬಗ್ಗೆ ಅಧಿಕೃತ ಘೋಷಣೆ ಮಾಡಿದಂತಾಗಿದೆ.

ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಎನ್‌ಇಪಿಯನ್ನು ರದ್ದುಪಡಿಸುವುದಾಗಿ ಭರವಸೆ ನೀಡಿತ್ತು. ಬದಲಿಗೆ ರಾಜ್ಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುವುದಾಗಿ ಹೇಳಿತ್ತು.

ಎನ್​​ಇಪಿ ಅನ್ನು ರದ್ದುಗೊಳಿಸಲು ಕೆಲವು ತಯಾರಿ ಅಗತ್ಯವಿದೆ. ಈ ವರ್ಷ ಅದಕ್ಕೆ ಸಮಯ ಸಿಕ್ಕಿರಲಿಲ್ಲ. ಚುನಾವಣೆ ಮುಗಿದು ನಮ್ಮ ಸರ್ಕಾರ ಬರುವ ವೇಳೆಗೆ ಶೈಕ್ಷಣಿಕ ವರ್ಷ ಆರಂಭವಾಗಿತ್ತು. ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಈ ವರ್ಷ ಎನ್‌ಇಪಿಯನ್ನು ಮುಂದುವರಿಸಲು ನಾವು ನಿರ್ಧರಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

2021 ರ ಆಗಸ್ಟ್​​ನಲ್ಲಿ, ಬಿಜೆಪಿ ಅಧಿಕಾರದಲ್ಲಿದ್ದಾಗ, ಕರ್ನಾಟಕವು ಉನ್ನತ ಶಿಕ್ಷಣದಲ್ಲಿ ಎನ್​​ಇಪಿ ಅನುಷ್ಠಾನಗೊಳಿಸಿತ್ತು. ಆ ಮೂಲಕ ಉನ್ನತ ಶಿಕ್ಷಣದಲ್ಲಿ ಎನ್​​ಇಪಿ ಅನುಷ್ಠಾನಗೊಳಿಸಿದ ಮೊದಲ ರಾಜ್ಯವಾಗಿ ಹೊರಹೊಮ್ಮಿತ್ತು. ಕಾಂಗ್ರೆಸ್ ಎನ್​​ಇಪಿಯನ್ನು ಟೀಕಿಸಿದ್ದು, ಅದನ್ನು ‘ನಾಗ್ಪುರ ಶಿಕ್ಷಣ ನೀತಿ’ ಎಂದು ವ್ಯಂಗ್ಯವಾಡಿತ್ತು.

ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಸಹ ಎನ್‌ಇಪಿ ವಿರುದ್ಧ ಇದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಬೇರೆ ಯಾವುದೇ ರಾಜ್ಯದಲ್ಲಿ ಎನ್‌ಇಪಿ ಜಾರಿಗೊಳಿಸದೆ, ಬಿಜೆಪಿಯು ಅದನ್ನು ಮೊದಲು ಕರ್ನಾಟಕದಲ್ಲಿ ಜಾರಿಗೆ ತಂದು ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ಕಡೆಗಣಿಸಿದೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಇದನ್ನೂ ಓದಿ: ಹೆಚ್​ಡಿ ಕುಮಾರಸ್ವಾಮಿ ಬಿಜೆಪಿ ವಕ್ತಾರರಂತೆ ಮಾತಾಡುತ್ತಿದ್ದಾರೆ: ಸಿಎಂ ಸಿದ್ಧರಾಮಯ್ಯ ಕಿಡಿ

ಎನ್​ಇಪಿ ರದ್ದುಗೊಳಿಸಿ ಎಸ್​​​ಇಒಇ ಅನುಷ್ಠಾನಗೊಳಿಸುವ ಬಗ್ಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇತ್ತೀಚೆಗೆ ಹಲವು ಸಭೆಗಳನ್ನು ನಡೆಸಿತ್ತು. ವಿಶ್ವವಿದ್ಯಾಲಯಗಳ ಕುಲಪತಿಗಳ ಜತೆಗೆ ಹಾಗೂ ತಜ್ಞರ ಜತೆಗೂ ಸಮಾಲೋಚನೆ ನಡೆಸಿತ್ತು. ಕುಲಪತಿಗಳ ಹಾಗೂ ತಜ್ಞರ ಜತೆಗಿನ ಸಭೆಯ ವೇಳೆ, ಎನ್​​ಇಪಿಯಲ್ಲಿರುವ ಕೆಲವು ಅಂಶಗಳನ್ನು ಎಸ್​​ಇಪಿಯಲ್ಲೂ ಮುಂದುವರಿಸಿಕೊಂಡು ಹೋಗುವುದು ಉತ್ತಮ ಎಂಬ ಸಲಹೆಗಳು ವ್ಯಕ್ತವಾದ ಬಗ್ಗೆ ವರದಿಯಾಗಿತ್ತು.

ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಕೂಡ ಹಲವು ಸುತ್ತಿನ ಸಭೆ ನಡೆಸಿ ಎನ್​​ಇಪಿ ರದ್ದತಿ ಮತ್ತು ಎಸ್​ಇಪಿ ಜಾರಿಯ ಸಾಧಕ ಬಾಧಕಗಳ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ಅಂತಿಮವಾಗಿ ಇದೀಗ ಸಿದ್ದರಾಮಯ್ಯ ಅವರು ಬಹಿರಂಗವಾಗಿ ಹೇಳಿಕೆ ನೀಡುವ ಮೂಲಕ ಮುಂದಿನ ವರ್ಷದಿಂದ ಎಸ್​ಇಪಿ ಜಾರಿ ಬಹುತೇಕ ಖಚಿತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್