ಅನರ್ಹರ ಬಿಪಿಎಲ್​ ಕಾರ್ಡ್​ ರದ್ದು ಮಾಡಿ; ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಇಂದು ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆದಿದೆ. ಈ ಸಭೆಯಲ್ಲಿ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸದ, ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಹಂತ ಹಂತವಾಗಿ ತೆಗೆದು ಹಾಕಬೇಕು. ಅನರ್ಹ ಬಿಪಿಎಲ್‌ ಪಡಿತರ ಚೀಟಿದಾರರು ಸ್ವಯಂ ತಮ್ಮ ಬಿಪಿಎಲ್‌ ಕಾರ್ಡ್‌ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು ಎಂಬ ನಿರ್ಧಾರ ಸೇರಿದಂತೆ ಹಲವು ಸೂಚನೆಗಳನ್ನು ನೀಡಲಾಯಿತು.

ಅನರ್ಹರ ಬಿಪಿಎಲ್​ ಕಾರ್ಡ್​ ರದ್ದು ಮಾಡಿ; ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ
Karnataka Cm Siddaramaiah
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 09, 2025 | 10:19 PM

ಬೆಂಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಅವರನ್ನು ಪಟ್ಟಿಯಿಂದ ಹಂತ ಹಂತವಾಗಿ ತೆಗೆದುಹಾಕಬೇಕು. ಆದರೆ, ಒಬ್ಬನೇ ಒಬ್ಬ ಅರ್ಹನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸೂಚನೆ ನೀಡಿದ್ದಾರೆ. ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿದ ಅವರು ಅಧಿಕಾರಿಗಳು ಹಲವು ಆದೇಶಗಳನ್ನು ನೀಡಿದ್ದಾರೆ.

ಅನರ್ಹ ಬಿಪಿಎಲ್ ಕಾರ್ಡುದಾರರು ಸ್ವಯಂ ಪ್ರೇರಿತವಾಗಿ ತಮ್ಮ ಕಾರ್ಡ್‍ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು. ಅದಾದ ನಂತರ ಅಂಥವರಿಗೆ ನೊಟೀಸ್ ನೀಡಿ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಈಗಾಗಲೇ 4 ಸಾವಿರ ಸರಕಾರಿ ನೌಕರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಯಡಿ 4692 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಅಕ್ಟೋಬರ್ ಅಂತ್ಯದವರೆಗೆ 3253 ಕೋಟಿ ರೂ. ವೆಚ್ಚ ಮಾಡಲಾಗಿದೆ. 4,44,48,294 ಫಲಾನುಭವಿಗಳು ಇದರ ಲಾಭ ಪಡೆಯುತ್ತಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಇಂದಿನ ಸಭೆಯಲ್ಲಿ ಮಾಹಿತಿ ನೀಡಿದರು. ಹಾಗೇ, ರಾಜ್ಯದಲ್ಲಿ ಒಟ್ಟು 4518 ಪೆಟ್ರೋಲ್ ಬಂಕ್‍ಗಳಿದ್ದು, ಡಿಸೆಂಬರ್ ಅಂತ್ಯದವರೆಗೆ 503 ಪೆಟ್ರೋಲ್ ಬಂಕ್‍ಗಳ ತಪಾಸಣೆ ಮಾಡಲಾಗಿದೆ ಎಂದು ಮುನಿಯಪ್ಪ ತಿಳಿಸಿದರು.

ಇದನ್ನೂ ಓದಿ: ಏಪ್ರಿಲ್ ಒಳಗಾಗಿ ಸಿದ್ದರಾಮಯ್ಯ ಸರ್ಕಾರ ಪತನವಾಗುತ್ತದೆ; ಎಂಪಿ ರೇಣುಕಾಚಾರ್ಯ ಭವಿಷ್ಯವಾಣಿ!

ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಪಡಿತರ ಹಾಗೂ ಆಹಾರ ಧಾನ್ಯ ವಿತರಣಾ ವ್ಯವಸ್ಥೆಯನ್ನು ತಳಹಂತದಲ್ಲಿ ಬಲಪಡಿಸುವ ಮೂಲಕ ಜಾಗೃತಿ ಸಮಿತಿಗಳಲ್ಲಿ ಜನರ ಸಹಭಾಗಿತ್ವವನ್ನು ಹೆಚ್ಚಿಸಬೇಕು. ಸಮಿತಿ ನಿಯಮಿತವಾಗಿ ಸಭೆ ನಡೆಸಬೇಕು. ಪೆಟ್ರೋಲ್ ಬಂಕ್‍ಗಳ ತಪಾಸಣೆಯನ್ನು ಹೆಚ್ಚಿಸಿ ಅಳತೆ ಮತ್ತು ಗುಣಮಟ್ಟದಲ್ಲಿ ಮೋಸದಂತಹ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದು ಹೇಳಿದರು.

ಕನಿಷ್ಠ ಬೆಂಬಲ ಬೆಲೆ ಅಡಿ ಆಹಾರ ಧಾನ್ಯ ಸಂಗ್ರಹಿಸಲು ಎಲ್ಲ ವ್ಯವಸ್ಥೆ ಮಾಡಬೇಕು. ರೈತರಿಗೆ ಸಮಸ್ಯೆಯಾಗದಂತೆ ತ್ವರಿತವಾಗಿ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿದ್ದರಾಮಯ್ಯ ಸಚಿವ ಸಂಪುಟ ಸಭೆಗೆ ಮುಹೂರ್ತ ಫಿಕ್ಸ್

ಹಾಗೇ, ಕರ್ನಾಟಕದಲ್ಲಿ 1,53,69,945 ಪಡಿತರ ಚೀಟಿಗಳಿದ್ದು, 5,30,88,636 ಸದಸ್ಯರು ಫಲಾನುಭವಿಗಳಾಗಿದ್ದಾರೆ. ಇಲಾಖೆಯಲ್ಲಿ ಒಟ್ಟು 709 ಹುದ್ದೆಗಳು ಖಾಲಿಯಿವೆ. ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯಡಿ ಕರ್ನಾಟಕದಲ್ಲಿ ಬೇರೆ ರಾಜ್ಯಗಳ 13,383 ಫಲಾನುಭವಿಗಳು ಪಡಿತರ ಸೌಲಭ್ಯ ಪಡೆಯುತ್ತಿದ್ದಾರೆ. ಕುಟುಂಬದಲ್ಲಿ ಒಬ್ಬರೇ ಇರುವ, 80 ವರ್ಷ ದಾಟಿದವರಿಗೆ ಮನೆ ಬಾಗಿಲಿಗೆ ಆಹಾರ ಧಾನ್ಯ ಒದಗಿಸುವ ಅನ್ನ-ಸುವಿಧಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. 8,500 ಪಡಿತರ ಚೀಟಿದಾರರು ಯೋಜನೆಯಡಿ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಮುನಿಯಪ್ಪ ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಕರ ಸಂಕ್ರಾಂತಿ ಮತ್ತು ಮಕರ ಜ್ಯೋತಿ ಮಹತ್ವ ತಿಳಿಯಿರಿ
ಮಕರ ಸಂಕ್ರಾಂತಿ ಮತ್ತು ಮಕರ ಜ್ಯೋತಿ ಮಹತ್ವ ತಿಳಿಯಿರಿ
ಸೂರ್ಯನ ಪಥ ಬದಲಾಗುವ ಸಂಕ್ರಾಂತಿ ದಿನದ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಸೂರ್ಯನ ಪಥ ಬದಲಾಗುವ ಸಂಕ್ರಾಂತಿ ದಿನದ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ತಿರುಗೇಟು
ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ತಿರುಗೇಟು
ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ
ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ