AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಕಚೇರಿ ಎಡವಟ್ಟು, ಪಂಪನ ಬನವಾಸಿ ಯಾವ ಜಿಲ್ಲೆಯಲ್ಲಿದೆ ಎನ್ನುವುದೇ ಗೊತ್ತಿಲ್ಲ!

ಬನವಾಸಿಯಲ್ಲಿ ನಡೆಯುವ ಕದಂಬೋತ್ಸವವು ಇಂದಿನಿಂದ ಆರಂಭಗೊಂಡಿದ್ದು, ನಾಳೆ ಕೊನೆಗೊಳ್ಳಲಿದೆ. ಕದಂಬೋತ್ಸವಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. ಇದಕ್ಕೂ ಮುನ್ನ ಸಿಎಂ ಕಚೇರಿ, ಬನವಾಸಿಯು ಉತ್ತರ ಕನ್ನಡ ಜಿಲ್ಲೆಯ ಎಂದು ಹೇಳುವ ಬದಲು ಶಿವಮೊಗ್ಗ ಜಿಲ್ಲೆಯಲ್ಲಿದೆ ಎಂದು ಎಕ್ಸ್ ಖಾತೆಯಲ್ಲಿ ತಪ್ಪಾಗಿ ಟ್ವೀಟ್ ಮಾಡಿ ಎಡವಟ್ಟು ಮಾಡಿಕೊಂಡಿದೆ.

ಸಿಎಂ ಕಚೇರಿ ಎಡವಟ್ಟು, ಪಂಪನ ಬನವಾಸಿ ಯಾವ ಜಿಲ್ಲೆಯಲ್ಲಿದೆ ಎನ್ನುವುದೇ ಗೊತ್ತಿಲ್ಲ!
ಸಿಎಂ ಕಚೇರಿ ಎಡವಟ್ಟು, ಪಂಪನ ಬನವಾಸಿ ಯಾವ ಜಿಲ್ಲೆಯಲ್ಲಿದೆ ಎನ್ನುವುದೇ ಗೊತ್ತಿಲ್ಲ! Image Credit source: CM Image Credit to Bhanu Prakash Chandra/theweek
TV9 Web
| Edited By: |

Updated on:Mar 06, 2024 | 11:29 AM

Share

ಕಾರವಾರ, ಮಾ.5: ಬನವಾಸಿಯಲ್ಲಿ (Banavasi) ನಡೆಯುವ ಕದಂಬೋತ್ಸವವು (Kadambotsava) ಇಂದಿನಿಂದ ಆರಂಭಗೊಂಡಿದ್ದು, ನಾಳೆ ಕೊನೆಗೊಳ್ಳಲಿದೆ. ಕದಂಬೋತ್ಸವಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಚಾಲನೆ ನೀಡಿದ್ದಾರೆ. ಕನ್ನಡದ ಆದಿ ಕವಿ ವರ್ಣಿಸಿದ್ದ ಬನವಾಸಿಯು ಯಾವ ಜಿಲ್ಲೆಯ ಯಾವ ತಾಲೂಕಿನಲ್ಲಿದೆ ಎಂದು ಸಿಎಂ ಕಚೇರಿ ಸಿಬ್ಬಂದಿಗೇ ತಿಳಿದಿಲ್ಲ ಎನ್ನುವುದು ವಿಷಾದನೀಯ ಸಂಗತಿ.

ಮುಖ್ಯಮಂತ್ರಿ ಕಾರ್ಯಕ್ರಮಗಳ ವಿವರಗಳು ಮತ್ತು ಮುಖ್ಯಮಂತ್ರಿಗಳ ಹೇಳಿಕೆ, ಆದೇಶಗಳನ್ನು ತಿಳಿಸಲು ಬಳಸುವ ಅಧಿಕೃತ ಎಕ್ಸ್ ಖಾತೆಯಲ್ಲಿ (ಟ್ವಿಟರ್), ಬನವಾಸಿ ಕದಂಬೋತ್ಸವದ ನೇರಪ್ರಸಾರದ ಬಗ್ಗೆ ಪೋಸ್ಟ್ ಮಾಡಲಾಗಿದೆ. ಈ ಪೋಸ್ಟ್ ಮಾಡುವಾಗ ಸಿಬ್ಬಂದಿ ಮಾಡಿದ ಎಡವಟ್ಟೇನೆಂದರೆ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ ಎಂದು ಹೇಳುವ ಬದಲು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಬನವಾಸಿ ಎಂದು ತಪ್ಪಾಗಿ ಬರೆದುಕೊಳ್ಳಲಾಗಿದೆ.

ಇದನ್ನೂ ಓದಿ: ಲೋಕಸಭೆಗೆ ಸ್ಪರ್ಧಿಸಲು ಧಮ್ ಇದ್ದರೆ ಮುಂದೆ ಬನ್ನಿ: ಸವಾಲು ಹಾಕಿದ ಅನಂತ್ ಕುಮಾರ್ ಹೆಗಡೆ

“ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಬನವಾಸಿಯಲ್ಲಿ ನಡೆಯುತ್ತಿರುವ ಐತಿಹಾಸಿಕ ಕದಂಬೋತ್ಸವದ ನೇರಪ್ರಸಾರ ವೀಕ್ಷಿಸಲು ಈ ಕೆಳಗಿನ ಲಿಂಕ್ ಬಳಸಿ” ಎಂದು ಸಿಎಂ ಅವರ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿತ್ತು. ಇದಾದ ಕೆಲ ಹೊತ್ತಿನ ಬಳಿಕ ಪ್ರಮಾದದಿಂದ ಎಚ್ಚೆತ್ತ ಸಿಬ್ಬಂದಿ, ತಪ್ಪನ್ನು ಸರಿಪಡಿಸಿದ್ದಾರೆ. “ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಲ್ಲಿ ನಡೆಯುತ್ತಿರುವ ಐತಿಹಾಸಿಕ ಕದಂಬೋತ್ಸವದ ನೇರಪ್ರಸಾರ ವೀಕ್ಷಿಸಲು ಈ ಕೆಳಗಿನ ಲಿಂಕ್ ಬಳಸಿ” ಎಂದು ತಿಳಿಸಿದ್ದಾರೆ.

ಸಿಎಂ ಕಚೇರಿ ಟ್ವೀಟ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:52 pm, Tue, 5 March 24

Follow Us
Web contact
Web contact

TV9 Kannada

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು