AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೆರೆ ಪರಿಹಾರಕ್ಕೆ ಕೇಂದ್ರದ ಮೊರೆ ಹೋಗುವ ಅಗತ್ಯವಿಲ್ಲ’ ತೇಜಸ್ವಿ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚೆಗಷ್ಟೇ ಸುರಿದ ಭಾರೀ ಮಳೆಯ ಪ್ರವಾಹಕ್ಕೆ ಕರ್ನಾಟಕದ ಹಲವು ಜಿಲ್ಲೆಗಳು ತತ್ತರಿಸಿ ಹೋಗಿವೆ. ಅಪಾರ ಪ್ರಮಾಣದ ಸಾವು, ನೋವುಗಳಾಗಿವೆ. ರೈತರ ಮನೆ, ಜಮೀನು ಎಲ್ಲಾ ಪ್ರವಾಹದಲ್ಲೇ ಕೊಚ್ಚಿ ಹೋಗಿವೆ. ಆದ್ರೆ ಇದುವರೆಗೂ ಕೇಂದ್ರ ಸರ್ಕಾರ ಮಾತ್ರ ನೆರೆ ಪರಿಹಾರ ಬಿಡುಗಡೆ ಮಾಡಿಲ್ಲ. ಇನ್ನು ಈ ಸಂಬಂಧ ಮಾತನಾಡಿರುವ ಸಂಸದ ತೇಜಸ್ವಿ ಸೂರ್ಯ, ನೆರೆ ಪರಿಹಾರಕ್ಕೆ ಕೇಂದ್ರದ ಮೊರೆ ಹೋಗುವ ಅಗತ್ಯವಿಲ್ಲ ಎಂದಿದ್ದಾರೆ. ತೇಜಸ್ವಿ ಸೂರ್ಯ ನೀಡಿರುವ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ತೇಜಸ್ವಿ ಹೇಳಿಕೆಗೆ ಬಿಜೆಪಿಯಲ್ಲೇ ಅಸಮಾಧಾನ: […]

‘ನೆರೆ ಪರಿಹಾರಕ್ಕೆ ಕೇಂದ್ರದ ಮೊರೆ ಹೋಗುವ ಅಗತ್ಯವಿಲ್ಲ’ ತೇಜಸ್ವಿ ಹೇಳಿಕೆಗೆ ತೀವ್ರ ಆಕ್ರೋಶ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 21, 2019 | 12:24 PM

Share

ಇತ್ತೀಚೆಗಷ್ಟೇ ಸುರಿದ ಭಾರೀ ಮಳೆಯ ಪ್ರವಾಹಕ್ಕೆ ಕರ್ನಾಟಕದ ಹಲವು ಜಿಲ್ಲೆಗಳು ತತ್ತರಿಸಿ ಹೋಗಿವೆ. ಅಪಾರ ಪ್ರಮಾಣದ ಸಾವು, ನೋವುಗಳಾಗಿವೆ. ರೈತರ ಮನೆ, ಜಮೀನು ಎಲ್ಲಾ ಪ್ರವಾಹದಲ್ಲೇ ಕೊಚ್ಚಿ ಹೋಗಿವೆ. ಆದ್ರೆ ಇದುವರೆಗೂ ಕೇಂದ್ರ ಸರ್ಕಾರ ಮಾತ್ರ ನೆರೆ ಪರಿಹಾರ ಬಿಡುಗಡೆ ಮಾಡಿಲ್ಲ. ಇನ್ನು ಈ ಸಂಬಂಧ ಮಾತನಾಡಿರುವ ಸಂಸದ ತೇಜಸ್ವಿ ಸೂರ್ಯ, ನೆರೆ ಪರಿಹಾರಕ್ಕೆ ಕೇಂದ್ರದ ಮೊರೆ ಹೋಗುವ ಅಗತ್ಯವಿಲ್ಲ ಎಂದಿದ್ದಾರೆ. ತೇಜಸ್ವಿ ಸೂರ್ಯ ನೀಡಿರುವ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ

ತೇಜಸ್ವಿ ಹೇಳಿಕೆಗೆ ಬಿಜೆಪಿಯಲ್ಲೇ ಅಸಮಾಧಾನ: ನೆರೆ ಪರಿಹಾರ ಸಂಬಂಧ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ನೀಡಿರುವ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ಹಾಗು ಸಚಿವರಿಂದ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೆರೆ ಪರಿಹಾರಕ್ಕೆ ರಾಜ್ಯ ಸರ್ಕಾರ ಏನೂ ಮಾಡುತ್ತಿಲ್ಲ, ಇನ್ನು ಸಂಸದರೂ ಯಾವುದೇ ಪ್ರಯತ್ನ ಮಾಡ್ತಿಲ್ಲವೆಂಬ ಭಾವನೆ ಮೂಡುತ್ತೆ. ರಾಜ್ಯದಲ್ಲಿ ಇಂತಹ ಭಾವನೆ ಇರುವಾಗ ಸಂಸದರಾದವರು ಇಂಥ ಹೇಳಿಕೆ ಕೊಡುವುದರಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ, ಯಾಕೆ ಇಂತಹ ಹೇಳಿಕೆಗಳನ್ನು ಕೊಡುತ್ತಾರೆಂದು ತೇಜಸ್ವಿ ಸೂರ್ಯ ಹೇಳಿಕೆಗೆ ಬಿಜೆಪಿಯಲ್ಲೇ ತೀವ್ರ ಅಸಮಾಧಾನವಾಗಿದೆ.

ನೆರೆ ಪರಿಹಾರಕ್ಕೆ ಸ್ಪಂದಿಸದ ಇವರು ಉತ್ತರಕುಮಾರರು: ನೆರೆ ಪರಿಹಾರ ವಿಷಯದಲ್ಲಿ ಇಂತಹ ಯೋಗ್ಯತೆ, ಸಮರ್ಥತೆ, ಸಂವೇದನೆ ತೋರಿರುವ ಇವ್ರು ರಾಜ್ಯದ ಉತ್ತರಕುಮಾರರೇ ಸರಿ ಎಂದು ಕಾಂಗ್ರೆಸ್​ ಟ್ವೀಟ್ ಮಾಡಿದೆ. ಅಲ್ಲದೆ, ನೋಟ್ ಪ್ರಿಂಟ್ ಮಾಡುವ ಮಷಿನ್ ಇಲ್ಲ ಅಂತ ಸಿಎಂ ಬಿಎಸ್​ ಯಡಿಯೂರಪ್ಪ ಹೇಳಿದ್ದರು. ಸಂತ್ರಸ್ತರಿಗೆ 10,000 ರೂ. ಕೊಟ್ಟಿದ್ದೇ ಹೆಚ್ಚಾಯ್ತು ಅಂತ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ರು. ಇನ್ನು ಡಿಸಿಎಂ ಸಿಎನ್​ ಅಶ್ವತ್ಥ್​ ನಾರಾಯಣ, ಶಾಲಾ ಮಕ್ಕಳು ದೇಣಿಗೆ ಸಂಗ್ರಹಿಸಬೇಕು ಅಂತ ಹೇಳಿದ್ದಾರೆ. ಇದೀಗ ಸಂಸದ ತೇಜಸ್ವಿ ಸೂರ್ಯ, ನೆರೆ ಪರಿಹಾರಕ್ಕೆ ಕೇಂದ್ರದ ಮೊರೆ ಹೋಗುವ ಅಗತ್ಯವಿಲ್ಲ ಎಂದಿದ್ದಾರೆ ಎಂದು ಬಿಜೆಪಿ ನಾಯಕರ ಹೇಳಿಕೆ ಉಲ್ಲೇಖಿಸಿ ರಾಜ್ಯ ಕಾಂಗ್ರೆಸ್ ಟ್ವಿಟ್ಟರ್​ನಲ್ಲಿ ಆಕ್ರೋಶ ವ್ಯಕ್ತಪಡಿಸಿದೆ.

Published On - 11:31 am, Sat, 21 September 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ