AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕು ವರ್ಷಗಳ ಪದವಿ ಆದೇಶ ಹಿಂಪಡೆದ ಕರ್ನಾಟಕ ಸರ್ಕಾರ: ಕಾರಣವೇನು?

ಅಧಿಕಾರಕ್ಕೆ ಬಂದ ಬೆನ್ನಲ್ಲೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂಪಡೆದಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಂದು ಮಹತ್ವದ ಕ್ರಮ ಕೈಗೊಂಡಿದೆ. ಸಾಮಾಜಿಕ ನ್ಯಾಯದ ನೆಪ ಹೇಳಿ ನಾಲ್ಕು ವರ್ಷಗಳ ಪದವಿ ಆನರ್ಸ್​​ ಅಧ್ಯಯನಕ್ಕೆ 2024-25ನೇ ಶೈಕ್ಷಣಿಕ ವರ್ಷದಿಂದ ನೀಡಲಾಗಿದ್ದ ಅವಕಾಶವನ್ನು ಹಿಂಪಡೆದು ಆದೇಶ ಹೊರಡಿಸಿದೆ. ರಾಜ್ಯ ಶಿಕ್ಷಣ ನೀತಿ ಆಯೋಗದ ಮಧ್ಯಂತರ ವರದಿ ಆಧರಿಸಿ ಈ ಕ್ರಮ ಕೈಗೊಂಡಿದೆ.

ನಾಲ್ಕು ವರ್ಷಗಳ ಪದವಿ ಆದೇಶ ಹಿಂಪಡೆದ ಕರ್ನಾಟಕ ಸರ್ಕಾರ: ಕಾರಣವೇನು?
ನಾಲ್ಕು ವರ್ಷಗಳ ಪದವಿ ಆದೇಶ ಹಿಂಪಡೆದ ಕರ್ನಾಟಕ ಸರ್ಕಾರ
Follow us
Ganapathi Sharma
|

Updated on: May 09, 2024 | 8:47 AM

ಬೆಂಗಳೂರು, ಮೇ 9: ಕಾಲೇಜು ವಿದ್ಯಾರ್ಥಿಗಳಿಗೆ ನಾಲ್ಕು ವರ್ಷಗಳ ಪದವಿ ಆನರ್ಸ್​​ (Four-Year Degree Programme) ಅಧ್ಯಯನಕ್ಕೆ 2024-25ನೇ ಶೈಕ್ಷಣಿಕ ವರ್ಷದಿಂದ ನೀಡಲಾಗಿದ್ದ ಅವಕಾಶವನ್ನು ಹಿಂಪಡೆದು ಕರ್ನಾಟಕ ಕಾಂಗ್ರೆಸ್ ಸರ್ಕಾರ (Congress Government) ಬುಧವಾರ ಆದೇಶ ಹೊರಡಿಸಿದೆ. ರಾಜ್ಯ ಶಿಕ್ಷಣ ನೀತಿ (SEP) ಆಯೋಗದ ಮಧ್ಯಂತರ ವರದಿಯಲ್ಲಿನ ಶಿಫಾರಸುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ.

ಇದರೊಂದಿಗೆ, ರಾಜ್ಯವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP) ಅಳವಡಿಸಿಕೊಳ್ಳುವುದಕ್ಕಿಂತಲೂ ಮೊದಲು, ಅಂದರೆ 2021-22 ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಸಾಂಪ್ರದಾಯಿಕ ಮೂರು ವರ್ಷಗಳ ಪದವಿ ಕಾರ್ಯಕ್ರಮಕ್ಕೆ ಕರ್ನಾಟಕ ಮರಳಿದಂತಾಗಿದೆ. ಬಿಜೆಪಿ ಸರ್ಕಾರ ಇದ್ದಾಗ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸಿಕೊಂಡ ಮೊದಲ ರಾಜ್ಯವಾಗಿ ಕರ್ನಾಟಕ ಗುರುತಿಸಿಕೊಂಡಿತ್ತು. ಆದರೆ, ಕಳೆದ ವರ್ಷ ಅಧಿಕಾರಕ್ಕೆ ಬಂದ ನಂತರ ಅದನ್ನು ರದ್ದುಗೊಳಿಸಲು ಕಾಂಗ್ರೆಸ್ ನಿರ್ಧರಿಸಿತ್ತು.

ಉನ್ನತ ಶಿಕ್ಷಣ ಇಲಾಖೆ ಹೇಳುವುದೇನು?

ಇದೀಗ ತನ್ನ ಆದೇಶವನ್ನು ಸಮರ್ಥಿಸಿಕೊಂಡಿರುವ ಉನ್ನತ ಶಿಕ್ಷಣ ಇಲಾಖೆ, ಎಸ್​​​ಇಪಿ ಆಯೋಗದ ವಿಸ್ತೃತ ಸಮಾಲೋಚನೆಯನ್ನು ಆಧರಿಸಿದೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದೆ. ಐತಿಹಾಸಿಕ ಅನುಭವ, ವಿದ್ಯಾರ್ಥಿಗಳ ಒಟ್ಟಾರೆ ಹಿತಾಸಕ್ತಿ, ಸಮಾನತೆ, ಸಾಮಾಜಿಕ ನ್ಯಾಯ ಮತ್ತು ವಿವಿಧ ಸಾಮಾಜಿಕ-ಆರ್ಥಿಕ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಸಮಾನ ಅವಕಾಶವನ್ನು ನೀಡುವುದನ್ನು ಗಮನದಲ್ಲಿಟ್ಟುಕೊಂಡು ಎಸ್​​​ಇಪಿ ಆಯೋಗ ಶಿಫಾರಸುಗಳ್ನು ಮಾಡಿದೆ ಎಂದು ಇಲಾಖೆ ಹೇಳಿದೆ.

ಸಾಮಾಜಿಕ ನ್ಯಾಯದ ನೆಪ ಹೇಳಿದೆ ಸರ್ಕಾರ

ಜಾಗತಿಕ ಶಿಕ್ಷಣ ವ್ಯವಸ್ಥೆಗಳೊಂದಿಗೆ ಸಮಾನತೆಯನ್ನು ತರುವ ಉದ್ದೇಶದಲ್ಲಿ ಪದವಿ ಶಿಕ್ಷಣದ ಅವಧಿಯನ್ನು ನಾಲ್ಕು ವರ್ಷಗಳವರೆಗೆ ಬದಲಾಯಿಸಲು ಮುಂದಾಗಿರುವುದು ಕಂಡುಬಂದಿದೆ. ವಿಶೇಷವಾಗಿ ಅಮೆರಿಕದ ವ್ಯವಸ್ಥೆಗೆ ಪೂರಕವಾಗಿ ಇದನ್ನು ಮಾಡಲು ಮುಂದಾಗಲಾಗಿತ್ತು. ಇದರಿಂದ ಭಾರತದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಸ್ನಾತಕೋತ್ತರ ಪದವಿ ಪ್ರವೇಶ ಸುಲಭವಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ, ನಾಲ್ಕು ವರ್ಷಗಳ ಪದವಿ ಇಟ್ಟುಕೊಳ್ಳುವುದರಿಂದ ಬಡವರು, ಸಾಮಾಜಿಕವಾಗಿ ಹಿಂದುಳಿದ ವರ್ಗಗಳಾದ ಎಸ್‌ಸಿಗಳು, ಎಸ್‌ಟಿಗಳು, ಮಹಿಳೆಯರು ಮತ್ತು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣದ ಪ್ರವೇಶ ಕಡಿಮೆಯಾಗಲಿದೆ ಎಂದು ಸರ್ಕಾರ ವಾದಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

ಇದನ್ನೂ ಓದಿ: SSLC ಫಲಿತಾಂಶ ಪ್ರಕಟ, ರಿಸಲ್ಟ್​​​ ನೋಡಲು ಈ ವೆಬ್​ ಸೈಟ್​​​ಗಳಿಗೆ ಭೇಟಿ ನೀಡಿ

ಇಷ್ಟೇ ಅಲ್ಲದೆ, ಮೂಲಸೌಕರ್ಯಗಳ ಕೊರತೆ ಮತ್ತು ಸೌಲಭ್ಯಗಳು, ಪ್ರಾಧ್ಯಾಪಕರ ಲಭ್ಯತೆಯಿಲ್ಲದಿರುವುದು ನಾಲ್ಕು ವರ್ಷಗಳ ಪದವಿ ಕಾರ್ಯಕ್ರಮವನ್ನು ಪ್ರಾರಂಭಿಸಲು ಕಾಲೇಜುಗಳು ಮುಂದಾಗದಿರುವುದಕ್ಕೆ ಒಂದು ಕಾರಣವೆಂದು ಉಲ್ಲೇಖಿಸಲಾಗಿದೆ.

ಸರ್ಕಾರವು ವಿಶ್ವವಿದ್ಯಾಲಯಗಳಿಗೆ ಮಾನ್ಯತೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ಮತ್ತು ತಕ್ಷಣವೇ ಪ್ರವೇಶವನ್ನು ಪ್ರಾರಂಭಿಸಲು ಕೇಳಿಕೊಂಡಿದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್