AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಗ್ಯಾರಂಟಿ ಜಾರಿಗೆಗೆ ಆದಾಯ ಮೂಲ ಹೆಚ್ಚಿಸಲು ಸರ್ಕಾರ ಪ್ಲಾನ್, ಏರುತ್ತಾ ಮದ್ಯದ ಬೆಲೆ?

ಗ್ಯಾಂರಂಟಿ ಯೋಜನೆಗಳಿಂದ ಸರ್ಕಾರದ ಆರ್ಥಿಕ ಬೊಕ್ಕಸಕ್ಕೆ ಬರೆ ಬೀಳದ ಹಾಗೆ ಆದಾಯದ ಮೂಲ ಹೆಚ್ಚಿಸಲು ಸರ್ಕಾರ ಪ್ಲಾನ್ ಮಾಡಿಕೊಂಡಿದೆ. ಸರ್ಕಾರ ಮಾರ್ಗವನ್ನು ಕಂಡುಕೊಂಡಿದ್ದು, ಅದು ಅಬಕಾರಿ ಇಲಾಖೆಯಿಂದ ಆದಾಯ ಕ್ರೋಡಿಕರಣಕ್ಕೆ ಚಿಂತನೆ ನಡೆಸಿದೆ.

5 ಗ್ಯಾರಂಟಿ ಜಾರಿಗೆಗೆ ಆದಾಯ ಮೂಲ ಹೆಚ್ಚಿಸಲು ಸರ್ಕಾರ ಪ್ಲಾನ್, ಏರುತ್ತಾ ಮದ್ಯದ ಬೆಲೆ?
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jun 10, 2023 | 3:10 PM

Share

ಬೆಂಗಳೂರು: ಕಾಂಗ್ರೆಸ್​ ಸರ್ಕಾರ ತನ್ನ ಮಹತ್ವಾಕಾಂಕ್ಷಿಯ 5 ಉಚಿತ ಗ್ಯಾರಂಟಿ (five guarantee) ಯೋಜನೆಗಳಿಗೆ ಚಾಲನೆ ನೀಡುತ್ತಿದೆ. ಈ ಯೋಜನೆಗಳಿಂದ ಸರ್ಕಾರಕ್ಕೆ (Congress Government) ಆರ್ಥಿಕ ಹೊರೆಯಾಗಲಿದೆ. ಇವುಗಳನ್ನು ಜಾರಿ ಮಾಡಲು ಸಾವಿರಾರು ಕೋಟಿ ಬೇಕು ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಈ ಯೋಜನೆಗಳಿಂದ ಸರ್ಕಾರದ ಖಜಾನೆಗೆ ಒಂದಿಷ್ಟರ ಮಟ್ಟಿಗಾದರೂ ಹೊಡೆತ ಬೀಳುವುದು ಸುಳ್ಳಲ್ಲಾ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಆರ್ಥಿಕ ಬೊಕ್ಕಸಕ್ಕೆ ಬರೆ ಬೀಳದ ಹಾಗೆ ಆದಾಯದ ಮೂಲ ಹೆಚ್ಚಿಸಲು ಸರ್ಕಾರ ಪ್ಲಾನ್ ಮಾಡಿಕೊಂಡಿದೆ.

ಹೌದು ಸರ್ಕಾರ ಮಾರ್ಗವನ್ನು ಕಂಡುಕೊಂಡಿದ್ದು, ಅದು ಅಬಕಾರಿ ಇಲಾಖೆಯಿಂದ (Excise Department) ಆದಾಯ ಕ್ರೋಡಿಕರಣಕ್ಕೆ ಚಿಂತನೆ ನಡೆಸಿದೆ. ಲಿಕ್ಕರ್ ಲೈಸೆನ್ಸ್ ಫೀಸ್​​ನ್ನು ಶೇಕಡಾ 25 ರಷ್ಟು ಹೆಚ್ಚಿಸಲು ಚಿಂತನೆ ನಡೆಸಿದೆ. ಇದರಿಂದ ವಾರ್ಷಿಕ 175 ಕೋಟಿ ರೂ. ಆದಾಯ ಬರುವ ನಿರೀಕ್ಷೆ ಇದೆ. 2016 ರಿಂದ ಲಿಕ್ಕರ್ ಲೈಸೆನ್ಸ್ ದರ ಹೆಚ್ಚಿಸಿಲ್ಲ. ಹೀಗಾಗಿ ಲಿಕ್ಕರ್ ಲೈಸೆನ್ಸ್ ಫೀಸ್ ಹೆಚ್ಚಳ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಅನ್ನಭಾಗ್ಯ ಯೋಜನೆಗೆ ಮೈಸೂರು ಜಿಲ್ಲೆಯಲ್ಲಿ ಚಾಲನೆ: ಸಿಎಂ ಸಿದ್ದರಾಮಯ್ಯ

ಲಿಕ್ಕರ್ ಹಾರ್ಡ್ ಡ್ರಿಂಕ್ಸ್ ದರವನ್ನು ಶೇಕಡಾ 10 ರಿಂದ 15 ಪರ್ಸೆಂಟ್ ಹೆಚ್ಚಳ ಮಾಡಿದರೇ ಲಿಕ್ಕರ್ ಡ್ರಿಂಕ್ಸ್​​ನಿಂದ ಶೇಕಡಾ ಸುಮಾರು 3 ಸಾವಿರ ಕೋಟಿ ಆದಾಯ ಬರುವ ನಿರೀಕ್ಷೆ ಇದೆ. ಬಿಯರ್ ದರವನ್ನ ಶೇಕಡಾ 20 ಪರ್ಸೆಂಟ್ ಹೆಚ್ಚಳ ಮಾಡಿದರೇ, ಇದರಿಂದ ವಾರ್ಷಿಕ 500 ಕೋಟಿ ಆದಾಯ ಬರಬಹುದೆಂದು ಅಂದಾಜಿಸಲಾಗಿದೆ.

2022-23 ರ ವಾರ್ಷಿಕದಲ್ಲಿ ಸರ್ಕಾರ ಈಗಾಗಲೇ 35 ಸಾವಿರ ಕೋಟಿ ಆದಾಯದ ಟಾರ್ಗೆಟ್ ನೀಡಿತ್ತು. ಇದೀಗ 2023-24ರ ಸಾಲಿನಲ್ಲಿ ಸುಮಾರು 39 ಸಾವಿರ ಕೋಟಿ ಆದಾಯ ಸಂಗ್ರಹಿಸುವ ಗುರಿ ನೀಡುವ ಸಾಧ್ಯತೆ ಇದೆ ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳು ಟಿವಿ9ಗೆ ಮಾಹಿತಿ ನೀಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್