AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆ: ಉಚಿತ ಬಸ್ ಪ್ರಯಾಣ ಸೌಲಭ್ಯಕ್ಕೆ ಬಜೆಟ್ ಸಂಕಟ, ಬಜೆಟ್ ಮರುಪರಿಶೀಲನೆ ಅನಿವಾರ್ಯ

ಯೋಜನೆಗೆ ವೆಚ್ಚವು ನಿಗದಿಪಡಿಸಿದ ಹಣವನ್ನು ಮೀರುವ ಸಾಧ್ಯತೆಯಿದೆ. ಸಾರಿಗೆ ಇಲಾಖೆ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಒಟ್ಟು 94,96,41,212 ಮಹಿಳೆಯರು ಈ ಯೋಜನೆಯ ಲಾಭವನ್ನು ಪಡೆದಿದ್ದಾರೆ. ಸುಮಾರು 2,260 ಕೋಟಿ ರೂ. ಈ ವೆಚ್ಚವನ್ನು ಐದು ತಿಂಗಳಲ್ಲಿ ಭರಿಸಲಾಗಿದ್ದು, ವರ್ಷಾಂತ್ಯಕ್ಕೆ ಇನ್ನೂ ನಾಲ್ಕು ತಿಂಗಳು ಬಾಕಿ ಉಳಿದಿದೆ.

ಶಕ್ತಿ ಯೋಜನೆ: ಉಚಿತ ಬಸ್ ಪ್ರಯಾಣ ಸೌಲಭ್ಯಕ್ಕೆ ಬಜೆಟ್ ಸಂಕಟ, ಬಜೆಟ್ ಮರುಪರಿಶೀಲನೆ ಅನಿವಾರ್ಯ
ಉಚಿತ ಬಸ್ ಪ್ರಯಾಣ ಸೌಲಭ್ಯಕ್ಕೆ ಬಜೆಟ್ ಸಂಕಟ
TV9 Web
| Edited By: |

Updated on: Nov 14, 2023 | 5:42 PM

Share

ಬೆಂಗಳೂರು, ನವೆಂಬರ್ 14: ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸುವ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯ ಯಶಸ್ಸಿನ ಸಂಭ್ರಮಾಚರಣೆಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ. ಆದರೆ, ಯೋಜನೆಯನ್ನು ಮುಂದುವರಿಸಲು ಅಗತ್ಯವಿರುವ ಮೊತ್ತವೇ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಯೋಜನೆಗೆ ಮಹಿಳೆಯರಿಂದ ನಿರೀಕ್ಷೆಗೂ ಮೀರಿ ಸ್ಪಂದನೆ ವ್ಯಕ್ತವಾದ ಕಾರಣ ಬಜೆಟ್​ ಹಂಚಿಕೆಗಿಂತಲೂ ಹೆಚ್ಚಿನ ಮೊತ್ತ ಬೇಕಾಗಿಬಂದಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7 ರಂದು ಮಂಡಿಸಿದ ಬಜೆಟ್‌ನಲ್ಲಿ ಈ ವರ್ಷದ ಉಳಿದ ಅವಧಿಗೆ ಶಕ್ತಿ ಯೋಜನೆಗಾಗಿ 2,800 ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ. ಈ ಯೋಜನೆಗೆ ವರ್ಷಕ್ಕೆ 4,000 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಸರ್ಕಾರ ನಿರೀಕ್ಷಿಸಿತ್ತು.

ಯೋಜನೆಯು ಜೂನ್ 11 ರಂದು ಪ್ರಾರಂಭವಾಯಿತು ಮತ್ತು ಅಂದಿನಿಂದ ಶಕ್ತಿ ಯೋಜನೆಯು ಉತ್ತಮ ಪ್ರತಿಕ್ರಿಯೆಯನ್ನು ಪಡೆದಿದೆ.

ಆದಾಗ್ಯೂ, ಯೋಜನೆಗೆ ವೆಚ್ಚವು ನಿಗದಿಪಡಿಸಿದ ಹಣವನ್ನು ಮೀರುವ ಸಾಧ್ಯತೆಯಿದೆ. ಸಾರಿಗೆ ಇಲಾಖೆ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಒಟ್ಟು 94,96,41,212 ಮಹಿಳೆಯರು ಈ ಯೋಜನೆಯ ಲಾಭವನ್ನು ಪಡೆದಿದ್ದಾರೆ. ಸುಮಾರು 2,260 ಕೋಟಿ ರೂ. ಈ ವೆಚ್ಚವನ್ನು ಐದು ತಿಂಗಳಲ್ಲಿ ಭರಿಸಲಾಗಿದ್ದು, ವರ್ಷಾಂತ್ಯಕ್ಕೆ ಇನ್ನೂ ನಾಲ್ಕು ತಿಂಗಳು ಬಾಕಿ ಉಳಿದಿದೆ. ಬಜೆಟ್ 4,000 ಕೋಟಿ ರೂ. ದಾಟುವ ನಿರೀಕ್ಷೆಯಿದೆ.

ವೆಚ್ಚದ ಆಧಾರದ ಮೇಲೆ ಡಿಸೆಂಬರ್ ನಂತರ ಯೋಜನೆಗೆ ಬಜೆಟ್ ಅನ್ನು ಸರ್ಕಾರ ಮರುಪರಿಶೀಲಿಸುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ಶಕ್ತಿ ಯೋಜನೆ: ಮಹಿಳೆಯರ ಉಚಿತ ಪ್ರಯಾಣಕ್ಕಿನ್ನು ಮೊಬೈಲಲ್ಲೇ ಗುರುತಿನ ಚೀಟಿ ತೋರಿಸಿದ್ರೆ ಸಾಕು

ಕರ್ನಾಟಕ ಕಾಂಗ್ರೆಸ್ ಚುನಾವಣೆಗೂ ಮುನ್ನ ಭರವಸೆ ನೀಡಿದ ಐದು ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿಯೂ ಒಂದಾಗಿದ್ದು, ಅದರಲ್ಲಿ ನಾಲ್ಕನ್ನು ಅನುಷ್ಠಾನಗೊಳಿಸಲಾಗಿದೆ. ನಿರುದ್ಯೋಗಿ ಯುವಕ-ಯುವತಿಯರಿಗೆ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿರುವ ‘ಯುವ ನಿಧಿ’ಗೆ ಸಿಎಂ ಈ ವರ್ಷದ ಬಜೆಟ್‌ನಲ್ಲಿ ಹಣ ಮೀಸಲಿಡದ ಕಾರಣ ಮುಂದಿನ ವರ್ಷ ಜಾರಿಯಾಗುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ