AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆ: ಉಚಿತ ಬಸ್ ಪ್ರಯಾಣ ಸೌಲಭ್ಯಕ್ಕೆ ಬಜೆಟ್ ಸಂಕಟ, ಬಜೆಟ್ ಮರುಪರಿಶೀಲನೆ ಅನಿವಾರ್ಯ

ಯೋಜನೆಗೆ ವೆಚ್ಚವು ನಿಗದಿಪಡಿಸಿದ ಹಣವನ್ನು ಮೀರುವ ಸಾಧ್ಯತೆಯಿದೆ. ಸಾರಿಗೆ ಇಲಾಖೆ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಒಟ್ಟು 94,96,41,212 ಮಹಿಳೆಯರು ಈ ಯೋಜನೆಯ ಲಾಭವನ್ನು ಪಡೆದಿದ್ದಾರೆ. ಸುಮಾರು 2,260 ಕೋಟಿ ರೂ. ಈ ವೆಚ್ಚವನ್ನು ಐದು ತಿಂಗಳಲ್ಲಿ ಭರಿಸಲಾಗಿದ್ದು, ವರ್ಷಾಂತ್ಯಕ್ಕೆ ಇನ್ನೂ ನಾಲ್ಕು ತಿಂಗಳು ಬಾಕಿ ಉಳಿದಿದೆ.

ಶಕ್ತಿ ಯೋಜನೆ: ಉಚಿತ ಬಸ್ ಪ್ರಯಾಣ ಸೌಲಭ್ಯಕ್ಕೆ ಬಜೆಟ್ ಸಂಕಟ, ಬಜೆಟ್ ಮರುಪರಿಶೀಲನೆ ಅನಿವಾರ್ಯ
ಉಚಿತ ಬಸ್ ಪ್ರಯಾಣ ಸೌಲಭ್ಯಕ್ಕೆ ಬಜೆಟ್ ಸಂಕಟ
TV9 Web
| Edited By: |

Updated on: Nov 14, 2023 | 5:42 PM

Share

ಬೆಂಗಳೂರು, ನವೆಂಬರ್ 14: ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸುವ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯ ಯಶಸ್ಸಿನ ಸಂಭ್ರಮಾಚರಣೆಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ. ಆದರೆ, ಯೋಜನೆಯನ್ನು ಮುಂದುವರಿಸಲು ಅಗತ್ಯವಿರುವ ಮೊತ್ತವೇ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಯೋಜನೆಗೆ ಮಹಿಳೆಯರಿಂದ ನಿರೀಕ್ಷೆಗೂ ಮೀರಿ ಸ್ಪಂದನೆ ವ್ಯಕ್ತವಾದ ಕಾರಣ ಬಜೆಟ್​ ಹಂಚಿಕೆಗಿಂತಲೂ ಹೆಚ್ಚಿನ ಮೊತ್ತ ಬೇಕಾಗಿಬಂದಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7 ರಂದು ಮಂಡಿಸಿದ ಬಜೆಟ್‌ನಲ್ಲಿ ಈ ವರ್ಷದ ಉಳಿದ ಅವಧಿಗೆ ಶಕ್ತಿ ಯೋಜನೆಗಾಗಿ 2,800 ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ. ಈ ಯೋಜನೆಗೆ ವರ್ಷಕ್ಕೆ 4,000 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಸರ್ಕಾರ ನಿರೀಕ್ಷಿಸಿತ್ತು.

ಯೋಜನೆಯು ಜೂನ್ 11 ರಂದು ಪ್ರಾರಂಭವಾಯಿತು ಮತ್ತು ಅಂದಿನಿಂದ ಶಕ್ತಿ ಯೋಜನೆಯು ಉತ್ತಮ ಪ್ರತಿಕ್ರಿಯೆಯನ್ನು ಪಡೆದಿದೆ.

ಆದಾಗ್ಯೂ, ಯೋಜನೆಗೆ ವೆಚ್ಚವು ನಿಗದಿಪಡಿಸಿದ ಹಣವನ್ನು ಮೀರುವ ಸಾಧ್ಯತೆಯಿದೆ. ಸಾರಿಗೆ ಇಲಾಖೆ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಒಟ್ಟು 94,96,41,212 ಮಹಿಳೆಯರು ಈ ಯೋಜನೆಯ ಲಾಭವನ್ನು ಪಡೆದಿದ್ದಾರೆ. ಸುಮಾರು 2,260 ಕೋಟಿ ರೂ. ಈ ವೆಚ್ಚವನ್ನು ಐದು ತಿಂಗಳಲ್ಲಿ ಭರಿಸಲಾಗಿದ್ದು, ವರ್ಷಾಂತ್ಯಕ್ಕೆ ಇನ್ನೂ ನಾಲ್ಕು ತಿಂಗಳು ಬಾಕಿ ಉಳಿದಿದೆ. ಬಜೆಟ್ 4,000 ಕೋಟಿ ರೂ. ದಾಟುವ ನಿರೀಕ್ಷೆಯಿದೆ.

ವೆಚ್ಚದ ಆಧಾರದ ಮೇಲೆ ಡಿಸೆಂಬರ್ ನಂತರ ಯೋಜನೆಗೆ ಬಜೆಟ್ ಅನ್ನು ಸರ್ಕಾರ ಮರುಪರಿಶೀಲಿಸುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ಶಕ್ತಿ ಯೋಜನೆ: ಮಹಿಳೆಯರ ಉಚಿತ ಪ್ರಯಾಣಕ್ಕಿನ್ನು ಮೊಬೈಲಲ್ಲೇ ಗುರುತಿನ ಚೀಟಿ ತೋರಿಸಿದ್ರೆ ಸಾಕು

ಕರ್ನಾಟಕ ಕಾಂಗ್ರೆಸ್ ಚುನಾವಣೆಗೂ ಮುನ್ನ ಭರವಸೆ ನೀಡಿದ ಐದು ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿಯೂ ಒಂದಾಗಿದ್ದು, ಅದರಲ್ಲಿ ನಾಲ್ಕನ್ನು ಅನುಷ್ಠಾನಗೊಳಿಸಲಾಗಿದೆ. ನಿರುದ್ಯೋಗಿ ಯುವಕ-ಯುವತಿಯರಿಗೆ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿರುವ ‘ಯುವ ನಿಧಿ’ಗೆ ಸಿಎಂ ಈ ವರ್ಷದ ಬಜೆಟ್‌ನಲ್ಲಿ ಹಣ ಮೀಸಲಿಡದ ಕಾರಣ ಮುಂದಿನ ವರ್ಷ ಜಾರಿಯಾಗುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?