AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi: ಚುನಾವಣೆ ಹೊತ್ತಲ್ಲೇ ಬೆಳಗಾವಿ ಜಿಲ್ಲೆ ವಿಭಜನೆಗೆ ಆಸಕ್ತಿ ತೋರಿಸಿದ ಸರ್ಕಾರ

Divinding of Belagavi district: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬೆಳಗಾವಿ ಜಿಲ್ಲೆ ವಿಭಜನೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಅಲರ್ಟ್ ಆಗಿದೆ. ಜಿಲ್ಲೆ ವಿಭಜನೆ ವಿಚಾರವಾಗಿ ಸಮಗ್ರ ವರದಿ ನೀಡುವಂತೆ ಪ್ರಾದೇಶಿಕ ಆಯುಕ್ತ ಸಂಜಯ್ ಶೆಟ್ಟೆನ್ನವರಗೆ ಸರ್ಕಾರ ನಿರ್ದೇಶನ ನೀಡಿದೆ.

Belagavi: ಚುನಾವಣೆ ಹೊತ್ತಲ್ಲೇ ಬೆಳಗಾವಿ ಜಿಲ್ಲೆ ವಿಭಜನೆಗೆ ಆಸಕ್ತಿ ತೋರಿಸಿದ ಸರ್ಕಾರ
ಅಥಣಿ ಜಿಲ್ಲೆ ನೀಲ ನಕ್ಷೆ (ಸಂಗ್ರಹ ಚಿತ್ರ)
Sahadev Mane
| Updated By: Ganapathi Sharma|

Updated on: Feb 13, 2024 | 9:43 AM

Share

ಬೆಳಗಾವಿ, ಫೆಬ್ರವರಿ 13: ಲೋಕಸಭೆ ಚುನಾವಣೆ (Lok Sabha Elections) ಇನ್ನೇನು ಸಮೀಪಿಸುತ್ತಿದೆ ಎಂಬ ಹೊತ್ತಿನಲ್ಲಿಯೇ ಬೆಳಗಾವಿ (Belagavi) ಜಿಲ್ಲೆ ವಿಭಜನೆ ಎಂಬ ಜೇನಗೂಡಿಗೆ ಕಾಂಗ್ರೆಸ್ ಸರ್ಕಾರ (Congress Government) ಕೈಹಾಕುತ್ತಿರುವಂತಿದೆ. ಬೆಳಗಾವಿ ಜಿಲ್ಲೆ ರಾಜಕೀಯ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಈ ಅಸ್ತ್ರವನ್ನು ಪ್ರಯೋಗ ಮಾಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ರಾಜ್ಯದಲ್ಲಿ ಯಾವುದೇ ಪಕ್ಷದ ಸರ್ಕಾರ ಬಂದರೂ ಬೆಳಗಾವಿ ಜಿಲ್ಲೆ ಅಧಿಕಾರದ ಕೇಂದ್ರ ಬಿಂದು. ಬೆಳಗಾವಿ ರಾಜಕಾರಣಿಗಳ ಪ್ರತಿಷ್ಠೆಗೆ ಸರ್ಕಾರಗಳೇ ಪತನವಾದ ಉದಾಹರಣೆಗಳೂ ಇವೆ.

ಭೌಗೋಳಿಕವಾಗಿ ರಾಜ್ಯದಲ್ಲಿ ಎರಡನೇ ‌ಅತಿ ದೊಡ್ಡ ‌ಜಿಲ್ಲೆಯಾಗಿರುವ ಬೆಳಗಾವಿಯಲ್ಲಿ ಗಡಿ ವಿವಾದದ ಕಾರಣಕ್ಕೆ ಜಿಲ್ಲೆ ವಿಭಜನೆ ಪ್ರಸ್ತಾವ ನೆನೆಗುದ್ದಿಗೆ ಬಿದ್ದಿತ್ತು. ಆದರೆ, ಈಗ ಚುನಾವಣೆ ಹೊತ್ತಲ್ಲೇ ಸರ್ಕಾರ ಜಿಲ್ಲೆ ವಿಭಜನೆಗೆ ಆಸಕ್ತಿ ತೋರಿದೆ.

ಮತ್ತೊಂದೆಡೆ ಪ್ರತ್ಯೇಕ ಜಿಲ್ಲೆಗಾಗಿ ಗೋಕಾಕ್, ಬೈಲಹೊಂಗಲ, ಚಿಕ್ಕೋಡಿ ಹಾಗೂ ಅಥಣಿ ಜನರಿಂದ ಹೋರಾಟ‌ ನಡೆಯುತ್ತಿದೆ. ಹಲವು ದಕಶಗಳಿಂದ ಜಿಲ್ಲೆ ವಿಭಜನೆ ಕೂಗು‌‌ ಕೇಳಿ ಬರುತ್ತಿದೆ. ಈ ಮಧ್ಯೆ, ಜಿಲ್ಲಾ ವಿಭಜನೆ ಸಂಬಂಧ ಸಮಗ್ರ ವರದಿ ನೀಡುವಂತೆ ಪ್ರಾದೇಶಿಕ ಆಯುಕ್ತರಿಗೆ ಸರ್ಕಾರ ನಿರ್ದೇಶನ ನೀಡಿದೆ. ಸಮಗ್ರ ವರದಿ ಸಲ್ಲಿಸುವಂತೆ ಪ್ರಾದೇಶಿಕ ಆಯುಕ್ತ ಸಂಜಯ್ ಶೆಟ್ಟೆನ್ನವರಗೆ ಸರ್ಕಾರ ಪತ್ರ ಬರೆದಿದೆ.

ಸದ್ಯ ಅಸ್ತಿತ್ವದಲ್ಲಿರುವ ಉಪವಿಭಾಗ, ತಾಲೂಕು-ಹೋಬಳಿ ಮಧ್ಯೆ ಇರುವ ವ್ಯಾಪ್ತಿ ವಿವರ, ಸಾರ್ವಜನಿಕರು ನಿತ್ಯ ಎದುರಿಸುತ್ತಿರುವ ಸಮಸ್ಯೆಗಳೇನು? ಜನಸಂಖ್ಯೆ ಎಷ್ಟು? ಮೂಲಸೌಕರ್ಯ ಹಾಗೂ ಭೌಗೋಳಿಕ ವಿಸ್ತೀರ್ಣ ಒಳಗೊಂಡ ಮಾಹಿತಿ ಸಂಗ್ರಹಿಸಿ ವರದಿ ನೀಡಲು ಸೂಚನೆ ನೀಡಲಾಗಿದೆ.

ಹಲವು ಬಾರಿ ನಡೆದಿದ್ದ ಪ್ರತಿಭಟನೆ

ಬೆಳಗಾವಿ ಜಿಲ್ಲೆ ವಿಭಜನೆಗೆ ಆಗ್ರಹಿಸಿ ಹಲವು ಬಾರಿ ಪ್ರತಿಭಟನೆಗಳು ನಡೆದಿವೆ. ಕಳೆದ ವರ್ಷವಂತೂ ಅಥಣಿ ಜಿಲ್ಲೆ ಮಾಡುವಂತೆ ಒತ್ತಾಯಿಸಿ ಕೆಲವು ಬಾರಿ ಅಥಣಿ ಬಂದ್ ಮಾಡಲಾಗಿತ್ತು. ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಅಥಣಿ ಬಂದ್ ಸಹ ಆಚರಿಸಲಾಗಿತ್ತು. ಅಥಣಿಯನ್ನು ಜಿಲ್ಲೆ ಮಾಡುವಂತೆ ಹೋರಾಟ ಮಾಡುವ ಬಗ್ಗೆ ಮಠಾಧೀಶರ ನೇತೃತ್ವದಲ್ಲಿ ಹಲವು ಸುತ್ತಿನ ಸಭೆಗಳೂ ನಡೆದಿದ್ದವು.

ಇದನ್ನೂ ಓದಿ: ಬೆಳಗಾವಿ ಅಧಿವೇಶನದ ವೇಳೆ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ; ಅಥಣಿ ಬಂದ್

ಅಥಣಿ ಜಿಲ್ಲೆಗೆ ಆಗ್ರಹಿಸಿ ಹೋರಾಟ ಮಾಡುವ ಬಗ್ಗೆ 2023ರ ಆಗಸ್ಟ್​ನಲ್ಲಿ ಅಥಣಿ ಪಟ್ಟಣದಲ್ಲಿರುವ ಮೋಟಗಿ ಮಠದ ಪ್ರಭುಚನ್ನಬಸವ ಸ್ವಾಮೀಜಿ, ಗಚ್ಚಿನಮಠದ ಶಿವಬಸವಶ್ರೀ, ಶೆಟ್ಟರಮಠದ ಮರುಳಸಿದ್ದ ಸ್ವಾಮೀಜಿ ನೇತೃತ್ವದಲ್ಲಿ ರೈತ ಮುಖಂಡರು, ಸಾಹಿತಿಗಳು, ಮಾಜಿ ಯೋಧರ ಸಭೆ ನಡೆಸಲಾಗಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ