AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕಿ ಖರೀದಿ ಸಂಕಷ್ಟ; ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮುಂದಿರುವ ಸಾಧ್ಯತೆಗಳೇನು?

ಸದ್ಯದ ಪರಿಸ್ಥಿತಿಯಲ್ಲಿ ಒಂದೇ ಏಜೆನ್ಸಿ ಅಥವಾ ಸಂಸ್ಥೆ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಪೂರೈಸುವುದು ಅಸಾಧ್ಯವಾಗಿದೆ. ಹೀಗಾಗಿ ರಾಜ್ಯ ಸರ್ಕಾರವು ಮೂರು ಸಂಸ್ಥೆಗಳ ಜೊತೆಗೆ ಒಡಂಬಡಿಕೆ ಮಾಡಿಕೊಂಡು ಅಕ್ಕಿ ಖರೀದಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಕ್ಕಿ ಖರೀದಿ ಸಂಕಷ್ಟ; ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮುಂದಿರುವ ಸಾಧ್ಯತೆಗಳೇನು?
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Jun 22, 2023 | 7:46 PM

Share

ಬೆಂಗಳೂರು: ಕರ್ನಾಟಕದ ನೂತನ ಕಾಂಗ್ರೆಸ್ ಸರ್ಕಾರಕ್ಕೆ ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ (Anna Bhagya Scheme) ಉಚಿತ ಅಕ್ಕಿ ನೀಡುವುದು ಸವಾಲಾಗಿ ಪರಿಣಮಿಸಿದೆ. ಕೇಂದ್ರ ಸರ್ಕಾರವು ಈಗಾಗಲೇ 5 ಕೆಜಿ ಅಕ್ಕಿ ನೀಡುತ್ತಿದ್ದರೆ, ಅದಕ್ಕೆ 5 ಕೆಜಿ ಸೇರಿಸಿ 10 ಕೆಜಿ ಅಕ್ಕಿಯನ್ನು ಬಿಪಿಎಲ್​ ಕಾರ್ಡ್​​ದಾರ ಕುಟುಂಬದವರಿಗೆ ರಾಜ್ಯ ಸರ್ಕಾರ ನೀಡಬೇಕಿದೆ. ಹೆಚ್ಚುವರಿ 5 ಕೆಜಿ ಅಕ್ಕಿಯ ಖರೀದಿಗೆ ರಾಜ್ಯ ಸರ್ಕಾರವು ಈಗಾಗಲೇ ಭಾರತೀಯ ಆಹಾರ ನಿಗಮದ (FCI) ಮೊರೆ ಹೋಗಿದ್ದು, ಅಲ್ಲಿ ಸಕಾರಾತ್ಮಕ ಸ್ಪಂದನೆ ದೊರೆತಿಲ್ಲ. ಹೀಗಾಗಿ ಯೋಜನೆಯ ಜಾರಿ ವಿಳಂಬವಾಗಲಿದೆ ಎಂದು ಸರ್ಕಾರ ತಿಳಿಸಿದೆ. ಜತೆಗೆ ಅಕ್ಕಿ ಖರೀದಿ ಸರ್ಕಾರಕ್ಕೆ ತಲೆನೋವಾಗಿಯೂ ಪರಿಣಮಿಸಿದೆ.

ಇದೀಗ ರಾಜ್ಯ ಸರ್ಕಾರ ಎಫ್​ಸಿಐ ಹೊರತುಪಡಿಸಿ ಬೇರೆ ಸಂಸ್ಥೆಗಳಿಂದ ಅಕ್ಕಿ ಖರೀದಿಗೆ ಮುಂದಾಗಿದೆ. ನ್ಯಾಷನಲ್ ಕೋ-ಆಪರೇಟಿವ್ ಕನ್ಸ್ಯೂಮರ್ಸ್ ಫೆಡರೇಷನ್ (NCCF), ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ (ನಾಫೆಡ್), ಕೇಂದ್ರೀಯ ಭಂಡಾರದಿಂದ ಅಕ್ಕಿ ಖರೀದಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಈ ಮೂರು ಸಂಸ್ಥೆಗಳು ಕೇಂದ್ರ ಸರ್ಕಾರಕ್ಕೆ ಸೇರಿದ್ದಾಗಿದ್ದು, ಇವುಗಳಲ್ಲಿ ಯಾವುದರಿಂದಲಾದರೂ ಅಕ್ಕಿ ಪಡೆಯಲು ರಾಜ್ಯಕ್ಕೆ ಅವಕಾಶವಿದೆ.

ಈಗಾಗಲೇ ಈ ಮೂರು ಸಂಸ್ಥೆಗಳಿಂದ ರಾಜ್ಯ ಸರಕಾರ ಕೊಟೇಷನ್ ಕೇಳಿದ್ದು, ಗುರುವಾರ ರಾತ್ರಿ ವೇಳೆ ಮೂರು ಸಂಸ್ಥೆಗಳ ದರಪಟ್ಟಿ ಕೈ ಸೇರುವ ಸಾಧ್ಯತೆ ಇದೆ.

ಈ ಮಧ್ಯೆ, 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಲಭ್ಯವಿರುವ ಬಗ್ಗೆ ಛತ್ತೀಸ್​ಗಢ ಈಗಾಗಲೇ ಮಾಹಿತಿ ನೀಡಿದೆ. ಆಂಧ್ರಪ್ರದೇಶದಲ್ಲೂ ಅಕ್ಕಿ ಲಭ್ಯತೆ ಇದೆ, ಆದರೆ ನಿಗದಿತ ಪ್ರಮಾಣದಲ್ಲಿ ಪೂರೈಕೆ ಸಾಧ್ಯವಿಲ್ಲ ಎಂದು ಅಲ್ಲಿನ ಸರ್ಕಾರ ಹೇಳಿದೆ. ಇದು ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ.

ಇದನ್ನೂ ಓದಿ: ವಿದ್ಯುತ್ ಆಯ್ತು, ಇನ್ನು ದುಬಾರಿಯಾಗಲಿದೆ ಅಕ್ಕಿ; ಬೆಲೆ ಹೆಚ್ಚಳಕ್ಕೆ ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ ಚಿಂತನೆ

ಕನಿಷ್ಠ ಬೆಂಬಲ ಬೆಲೆ ನೀಡಿ ರಾಜ್ಯದ ಬೆಳೆಗಾರರಿಂದಲೇ ಖರೀದಿಸುವ ಅವಕಾಶವೂ ಸರ್ಕಾರದ ಮುಂದಿದೆ. ಸರ್ಕಾರಕ್ಕೆ 2 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅಗತ್ಯವಿದೆ. ಒಂದೇ ಕಡೆಯಿಂದ ಇಷ್ಟು ಅಕ್ಕಿ ಲಭ್ಯವಾಗುವುದಿಲ್ಲ. ಹಾಗೆಂದು ಪ್ರತ್ಯೇಕ ಕಡೆಗಳಿಂದ ಅಕ್ಕಿ ಖರೀದಿ ಮಾಡಿದರೆ ಸಾಗಾಣಿಕ ವೆಚ್ಚದಲ್ಲಿ ಭಾರೀ ವ್ಯತ್ಯಾಸವಾಗಲಿದೆ. ಈ ಕಾರಣಕ್ಕೆ ಒಂದೇ ರಾಜ್ಯ ಅಥವಾ ಒಂದೇ ಸಂಸ್ಥೆಯಿಂದ ಅಕ್ಕಿ ಪಡೆಯಲು ಕಸರತ್ತು ನಡೆಸಲಾಗುತ್ತಿದೆ.

ಸದ್ಯದ ಪರಿಸ್ಥಿತಿಯಲ್ಲಿ ಒಂದೇ ಏಜೆನ್ಸಿ ಅಥವಾ ಸಂಸ್ಥೆ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಪೂರೈಸುವುದು ಅಸಾಧ್ಯವಾಗಿದೆ. ಹೀಗಾಗಿ ರಾಜ್ಯ ಸರ್ಕಾರವು ಮೂರು ಸಂಸ್ಥೆಗಳ ಜೊತೆಗೆ ಒಡಂಬಡಿಕೆ ಮಾಡಿಕೊಂಡು ಅಕ್ಕಿ ಖರೀದಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ