AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಅನುಮತಿ: ಕಾಂಗ್ರೆಸ್ ಸರ್ಕಾರದಿಂದ ಮಹತ್ವದ ನಿರ್ಧಾರ

ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮುಡಾ ಹಗರಣ ಸಂಬಂಧ ಹಮ್ಮಿಕೊಂಡಿರುವ ಪಾದಯಾತ್ರೆಗೆ ಅನುಮತಿ ನೀಡಲು ಕೊನೆಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಅನುಮತಿ ನೀಡುವುದಿಲ್ಲ ಎಂದು ಹಲವು ಬಾರಿ ಹೇಳಿದ್ದ ಸರ್ಕಾರ ಇದೀಗ ಯೂಟರ್ನ್ ಹೊಡೆದಿದೆ. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದೇನೆಂದು ತಿಳಿಯಲು ಮುಂದೆ ಓದಿ.

ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಅನುಮತಿ: ಕಾಂಗ್ರೆಸ್ ಸರ್ಕಾರದಿಂದ ಮಹತ್ವದ ನಿರ್ಧಾರ
ಗೃಹ ಸಚಿವ ಪರಮೇಶ್ವರ
ಪ್ರಸನ್ನ ಗಾಂವ್ಕರ್​
| Edited By: |

Updated on:Aug 02, 2024 | 11:45 AM

Share

ಬೆಂಗಳೂರು, ಆಗಸ್ಟ್ 2: ಮುಡಾ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಅನುಮತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಾದಯಾತ್ರೆಗೆ ಅನುಮತಿ ಕೊಡಲು ಸರ್ಕಾರ ನಿರ್ಧರಿಸಿದೆ. ಶಾಂತಿಯುತವಾಗಿ ಪಾದಯಾತ್ರೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಹೀಗಾಗಿ ಪಾದಯಾತ್ರೆಗೆ ಅನುಮತಿ ಕೊಡಲು ನಿರ್ಧರಿಸಿದ್ದೇವೆ ಎಂದರು.

ಕೆಲವೇ ದಿನ ಹಿಂದಷ್ಟೇ ಮಾತನಾಡಿದ್ದ ಪರಮೇಶ್ವರ್, ಪಾದಯಾತ್ರೆಗೆ ನಾವು ಅನುಮತಿ ನೀಡುವುದಿಲ್ಲ. ಅವರು ಮಾಡುವುದಿದ್ದರೆ ಮಾಡಿಕೊಳ್ಳಲಿ, ಅದರ ಬಗ್ಗೆ ನಮ್ಮ ತಕರಾರಿಲ್ಲ. ಆದರೆ, ಅಧಿಕೃತವಾಗಿ ಪೊಲೀಸ್ ಇಲಾಖೆಯಿಂದ ನಾವು ಅನುಮತಿ ನೀಡುವುದಿಲ್ಲ ಎಂದಿದ್ದರು. ಇದೀಗ ಯೂಟರ್ನ್ ಹೊಡೆದಿದ್ದಾರೆ.

ಇಂದು ಬೆಳಗ್ಗೆ (ಶುಕ್ರವಾರ) ಮಾತನಾಡಿದ್ದ ಬೆಂಗಳೂರು ನಗರ ಪೊಲಿಸ್ ಆಯುಕ್ತ ಬಿ. ದಯಾನಂದ್ ಕೂಡ ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ ಎಂದೇ ಹೇಳಿದ್ದರು.

ಆತುರದಲ್ಲಿ ರಾಜ್ಯಪಾಲರಿಂದ ನೋಟಿಸ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಆತುರಾತುರವಾಗಿ ರಾಜ್ಯಪಾಲರು ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ ಎಂದು ಡಾ. ಜಿ ಪರಮೇಶ್ವರ್​ ಹೇಳಿದರು. ಗುರುವಾರ ರಾತ್ರಿಯೇ ಸಂಪುಟದ ನಿರ್ಣಯ ಕಳಿಸಲು ತೀರ್ಮಾನಿಸಿದ್ದೆವು. ರಾಜ್ಯದಲ್ಲಿ ರಾಜ್ಯಪಾಲರಿಲ್ಲ, ಕಚೇರಿಗೆ ನಿನ್ನೆಯೇ ತಲುಪಿಸಿರಬೇಕು. ರಾಜ್ಯಪಾಲರ ಮೇಲೆ ಒತ್ತಡಗಳು ಬಂದಿವೆ ಅನ್ನುವ ಅನುಮಾನ ಇದೆ. ದೂರು ಪಡೆದ ದಿನವೇ ರಾಜ್ಯಪಾಲರು ನೋಟಿಸ್​ ಕೊಟ್ಟಿದ್ದಾರೆ ಎಂದು ಪರಮೇಶ್ವರ್ ಹೇಳಿದರು.

ಇದನ್ನೂ ಓದಿ: ಬೆಂಗಳೂರು-ಮೈಸೂರು ಪಾದಯಾತ್ರೆ: ಜೆಡಿಎಸ್​​ ನಾಯಕರಿಗೊಂದು ವಿಶೇಷ ಮನವಿ ಮಾಡಿದ ಅಶೋಕ್

ಜುಲೈ 26ರಂದೇ ರಾಜ್ಯಪಾಲರಿಗೆ ಅಬ್ರಹಾಂ ಮನವಿ ಕೊಟ್ಟಿದ್ದು. ರಾಜ್ಯಪಾಲರ ಪ್ರಶ್ನೆಗಳಿಗೆ ಲಿಖಿತ ರೂಪದಲ್ಲಿ ಸಿಎಸ್ಉತ್ತರ ನೀಡಿದ್ದಾರೆ. ಇದಾದ ನಂತರ ರಾಜ್ಯಪಾಲರಿಂದ ಶೋಕಾಸ್ ನೋಟಿಸ್ ಬಂದಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಡಲ್ಲವೆಂಬ ವಿಶ್ವಾಸವಿದೆ. ಒಂದು ವೇಳೆ ಕೊಟ್ಟರೂ ಅದನ್ನು ಕಾನೂನು ಪ್ರಕಾರ ಎದುರಿಸುತ್ತೇವೆ. ರಾಜ್ಯಪಾಲರು ಏನೇ ನಿರ್ಧಾರ ಕೈಗೊಂಡ್ರೂ ನಾವು ಎದುರಿಸುತ್ತೇವೆ. ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:39 am, Fri, 2 August 24

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​