AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Police Transfer: ಒಂದೇ ದಿನ 211 ಪೊಲೀಸ್​ ಇನ್ಸ್​ಪೆಕ್ಟರ್ ವರ್ಗಾವಣೆ, ಬೆಳಗಾಗುವಷ್ಟರಲ್ಲೇ ಕೆಲವರ ಟ್ರಾನ್ಸ್​ಫರ್​ಗೆ ತಡೆ ನೀಡಿದ ಸರ್ಕಾರ

ನಿನ್ನೆ (ಆಗಸ್ಟ್ 01) ಒಂದೇ ದಿನ ಬರೋಬ್ಬರಿ 211 ಪೊಲೀಸ್ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ, ಇಂದು ಬೆಳಗ್ಗೆ ಕೆಲವರ ವರ್ಗಾವಣೆಯನ್ನು ತಡೆ ಹಿಡಿದಿದೆ.

Police Transfer: ಒಂದೇ ದಿನ 211 ಪೊಲೀಸ್​ ಇನ್ಸ್​ಪೆಕ್ಟರ್ ವರ್ಗಾವಣೆ, ಬೆಳಗಾಗುವಷ್ಟರಲ್ಲೇ ಕೆಲವರ ಟ್ರಾನ್ಸ್​ಫರ್​ಗೆ ತಡೆ ನೀಡಿದ ಸರ್ಕಾರ
ವಿಧಾನಸೌಧ
Jagadisha B
| Edited By: |

Updated on:Aug 02, 2023 | 11:50 AM

Share

ಬೆಂಗಳೂರು, (ಆಗಸ್ಟ್ 02): ವಿರೋಧ ಪಕ್ಷಗಳ ಹಲವು ಆರೋಪಗ ನಡುವೆಯೂ ಕಾಂಗ್ರೆಸ್​  ಸರ್ಕಾರದಲ್ಲಿ(Congress Government)  ಸರ್ಕಾರಿ ಅಧಿಕಾರಿಗಳ ವರ್ಗಾವಣೆ (Officers Transfer) ಜೋರಾಗಿದೆ. ನಿನ್ನೆ (ಆಗಸ್ಟ್ 01) ವರ್ಗಾವಣೆ ಮಾಡಿದ್ದ ಕೆಲ ಪೊಲೀಸ್​ ಇನ್ಸ್​ಪೆಕ್ಟರ್​ಗಳ (Police Inspector) ವರ್ಗಾವಣೆಗೆ ಸರ್ಕಾರ ತಡೆ ಹಿಡಿದೆ. ​ ನಿನ್ನೆ ಬರೋಬ್ಬರಿ 211 ಇನ್ಸ್​ಪೆಕ್ಟರ್​ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಈ ಪೈಕಿ 11 ಪೊಲೀಸ್ ಇನ್ಸ್​​ಪೆಕ್ಟರ್​ಗಳ ವರ್ಗಾವಣೆಯನ್ನು ಸರ್ಕಾರ ಏಕಾಏಕಿ ಇಂದು (ಆಗಸ್ಟ್ 02) ಬೆಳಗ್ಗೆ ಏಕಾಏಕಿ ತಡೆ ಹಿಡಿದಿದ್ದು, ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ; ಪರದಾಡುತ್ತಿರುವ ರೋಗಿಗಳು

ಯಾವ-ಯಾವ ಇನ್ಸ್​ಪೆಕ್ಟರ್​ಗಳ ವರ್ಗಾವಣೆಗೆ ತಡೆ?

  • ರವಿ ಗೌಡ ಬಿ- ಯಶವಂತಪುರ ಟ್ರಾಫಿಕ್ ಸಂಚಾರ
  • ಯಶತಪುರ ಲಾ ಅಂಡ್ ಆರ್ಡರ್ – ಧನಂಜಯ್
  • ಲಕ್ಷ್ಮಣ್ ಜೆ – ನಂದಿನಿ ಲೇಔಟ್ ಪೊಲೀಸ್
  • ಅಶತ್ಥಗೌಡ- ಜಾನ್ಞಭಾರತಿ ಪೊಲೀಸ್ ಠಾಣೆ
  • ಗೋವಿಂದರಾಜು – ಪಿಣ್ಯ ಪೊಲೀಸ್ ಠಾಣೆ.
  • ಕೃಷ್ಣಕುಮಾರ್- ಬೇಗೂರು ಪೊಲೀಸ್ ಠಾಣೆ
  • ಜಗದೀಶ್ – ಕೆ ಎಸ್ ಲೇಔಟ್ ಠಾಣೆ
  • ವಜ್ರಮುನಿ – ಕೆ ಆರ್ ಮಾರ್ಕೆಟ್
  • ರವಿಕುಮಾರ್ – ಪುಟ್ಟೇನಹಳ್ಳಿ
  • ಅನಿಲ್‌ಕುಮಾರ್ – ಮಲ್ಲೇಶ್ವರಂ
  • ಜಿಗಣಿ – ಎಡ್ವಿನ್ ಪ್ರದೀಪ್

ಹೀಗೆ ಮೇಲ್ಕಾಣಿಸಿದ ಒಟ್ಟ 11 ಪೊಲೀಸ್​ ಇನ್ಸ್​ಪೆಕ್ಟರ್​ಗಳ ವರ್ಗಾವಣೆಗೆ ತಡೆ ನೀಡಿ DGIGP ಕಚೇರಿಯಿಂದ ಆದೇಶ ಹೊರಬಿದ್ದಿದೆ.

ಅಧಿಕಾರಿಗಳ ವರ್ಗಾವಣೆಯ ದಂಧೆ ನಡೆದಿದೆ ಎಂದು ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಗಂಭೀರ ಮಾಡಿವೆ. ಇದರ ಮಧ್ಯೆ ರಾಜ್ಯದಲ್ಲಿ ನೂರಕ್ಕೂ ಹೆಚ್ಚು ತಹಸೀಲ್ದಾರ್‌, ಬಳಿಕ ಡಿವೈಎಸ್‌ಪಿಗಳ ವರ್ಗಾವಣೆ ಮಾಡಿತ್ತು. ಇದಾದ ಬಳಿಕ ನಿನ್ನೆ ಅಷ್ಟೇ 211 ಪೊಲೀಸ್ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಲಾಗಿತ್ತು. ಇದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು ರಾಜ್ಯದಲ್ಲಿ “ಕಾಸಿಗಾಗಿ ಪೋಸ್ಟಿಂಗ್” ಎಂಬ ಹೊಸ ವ್ಯವಸ್ಥೆಯನ್ನು ಜಾರಿಗೆ ತಂದ ಸಿದ್ದರಾಮಯ್ಯ ಅವರ ಎಟಿಎಂ ಸರ್ಕಾರ ವರ್ಗಾವಣೆಯನ್ನು ದಂಧೆಯನ್ನಾಗಿ ಬಳಸಿಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ಅವರು ಗೌಪ್ಯ ಸಭೆ ನಡೆಸಿದ ಮರು ದಿನವೇ ಡಿವೈಎಸ್ಪಿ/ಎಸಿಪಿಗಳ ವರ್ಗಾವಣೆಯಾಗಿದೆ.. ಭ್ರಷ್ಟರು, ಕಳ್ಳರು, ಸುಲಿಗೆಕೋರರನ್ನು ಸದೆಬಡಿಯಬೇಕಾದ ಪೊಲೀಸರಿಂದಲೇ ಲಂಚ ಪಡೆಯುತ್ತಿದೆ ಈ ಭಂಡ ಸರ್ಕಾರ ಎಂದು ಬಿಜೆಪಿ ಟ್ವೀಟ್​ ಮೂಲಕ ಸಿದ್ದರಾಮಯ್ಯ ಸರ್ಕಾರಕ್ಕೆ ತಿವಿದಿದೆ.

ನಿನ್ನೆ ಒಂದೇ ದಿನ 211 ಪೊಲೀಸ್ ಇನ್ಸ್​ಪೆಕ್ಟರ್​ಗಳನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಬಹುತೇಕ ಜಿಲ್ಲೆ, ಸಿಸಿಬಿ , ಗುಪ್ತ ವಾರ್ತೆಯ ಪೊಲೀಸ್ ಇನ್ ಸ್ಪೆಕ್ಟರ್‌ಗಳ ವರ್ಗಾವಣೆ ಆಗಿತ್ತು. ಇದರಲ್ಲಿ ಇದೀಗ ಕೆಲವರ ವರ್ಗಾವಣೆಯನ್ನು ದಿಢೀರ್ ತಡೆಹಿಡಿದಿರುವುದು ಚರ್ಚೆ ಹುಟ್ಟುಹಾಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:40 am, Wed, 2 August 23

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​