AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಸಿಸಿ ಅಧ್ಯಕ್ಷ ಗಾದಿಗೆ ಕಂಟಕಗಳ ಹಾದಿ, ಡಿಕೆಶಿ ಸಾರಥ್ಯಕ್ಕೆ ಕೊನೆ ಹಂತದಲ್ಲಿ ಅಡ್ಡಗಾಲು

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಗಾದಿಗೆ ಒಂದೇ ಮೆಟ್ಟಿಲು ಬಾಕಿ ಎಂಬಂತಹ ವಾತಾವರಣ ಸೃಷ್ಟಿಯಾಗಿರುವ ಬೆನ್ನಿಗೇ ರಾಜ್ಯ ಕಾಂಗ್ರೆಸ್​ನ ವರ್ಚಸ್ವೀ ನಾಯಕ ಡಿ.ಕೆ.ಶಿವಕುಮಾರ್​ಗೆ ಹಲವು ಕಂಟಕಗಳು ಎದುರಾಗಿದೆ. ಡಿಕೆಶಿ ಸಾರಥ್ಯಕ್ಕೆ ಕೊನೆಯ ಹಂತದಲ್ಲಿ ಕೆಲವರು ಜೋರಾಗಿಯೇ ಅಡ್ಡಗಾಲು ಹಅಕಿದ್ದಾರೆ. ಸದ್ಯಕ್ಕೆ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರ ಟ್ವಿಸ್ಟ್​ ಪಡೆದುಕೊಳ್ತಿದೆ. ಸಭೆ ನಡೆಸಿ ಪ್ರಾಥಮಿಕ ನಿರ್ಧಾರ ಕೈಗೊಳ್ಳುವಂತೆ ಹೈಕಮಾಂಡ್​ ಸೂಚನೆ ನೀಡಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​​, ಕೆ.ಹೆಚ್​​.ಮುನಿಯಪ್ಪ ಮತ್ತು ಡಾ.ಜಿ.ಪರಮೇಶ್ವರ್​​ ಮುಂತಾದ ಪ್ರಮುಖ ನಾಯಕರು ಚರ್ಚಿಸಿ, ಒಂದು ತೀರ್ಮಾನಕ್ಕೆ ಬರಬೇಕಿದೆ. ಬಳಿಕ […]

ಕೆಪಿಸಿಸಿ ಅಧ್ಯಕ್ಷ ಗಾದಿಗೆ ಕಂಟಕಗಳ ಹಾದಿ, ಡಿಕೆಶಿ ಸಾರಥ್ಯಕ್ಕೆ ಕೊನೆ ಹಂತದಲ್ಲಿ ಅಡ್ಡಗಾಲು
ಸಾಧು ಶ್ರೀನಾಥ್​
|

Updated on:Dec 28, 2019 | 2:46 PM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಗಾದಿಗೆ ಒಂದೇ ಮೆಟ್ಟಿಲು ಬಾಕಿ ಎಂಬಂತಹ ವಾತಾವರಣ ಸೃಷ್ಟಿಯಾಗಿರುವ ಬೆನ್ನಿಗೇ ರಾಜ್ಯ ಕಾಂಗ್ರೆಸ್​ನ ವರ್ಚಸ್ವೀ ನಾಯಕ ಡಿ.ಕೆ.ಶಿವಕುಮಾರ್​ಗೆ ಹಲವು ಕಂಟಕಗಳು ಎದುರಾಗಿದೆ. ಡಿಕೆಶಿ ಸಾರಥ್ಯಕ್ಕೆ ಕೊನೆಯ ಹಂತದಲ್ಲಿ ಕೆಲವರು ಜೋರಾಗಿಯೇ ಅಡ್ಡಗಾಲು ಹಅಕಿದ್ದಾರೆ.

ಸದ್ಯಕ್ಕೆ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರ ಟ್ವಿಸ್ಟ್​ ಪಡೆದುಕೊಳ್ತಿದೆ. ಸಭೆ ನಡೆಸಿ ಪ್ರಾಥಮಿಕ ನಿರ್ಧಾರ ಕೈಗೊಳ್ಳುವಂತೆ ಹೈಕಮಾಂಡ್​ ಸೂಚನೆ ನೀಡಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​​, ಕೆ.ಹೆಚ್​​.ಮುನಿಯಪ್ಪ ಮತ್ತು ಡಾ.ಜಿ.ಪರಮೇಶ್ವರ್​​ ಮುಂತಾದ ಪ್ರಮುಖ ನಾಯಕರು ಚರ್ಚಿಸಿ, ಒಂದು ತೀರ್ಮಾನಕ್ಕೆ ಬರಬೇಕಿದೆ. ಬಳಿಕ ದೆಹಲಿಯಲ್ಲಿ ಮತ್ತೊಂದು ಸುತ್ತಿನ ಚರ್ಚೆ ಅಗತ್ಯವಿದೆ ಎಂದು ತಿಳಿದುಬಂದಿದೆ.

ಡಿಕೆಶಿ ಸಾರಥ್ಯಕ್ಕೆ ಕೊನೆಯ ಹಂತದಲ್ಲಿ ಕೆಲವರು ಅಡ್ಡಗಾಲು ಹಾಕಿದ್ದಾರೆ. ಜೆಡಿಎಸ್​​ ಜೊತೆ ಡಿಕೆಶಿ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇದು ಮುಂದೆ ಅಡ್ಜಸ್ಟ್​​ಮೆಂಟ್​​ ಸ್ಥಿತಿಗೆ ಹೋದ್ರೆ ಪಕ್ಷಕ್ಕೆ ಕಷ್ಟ ಎಂಬುದು ಒಂದು ತರ್ಕವಾದರೆ ಮತ್ತೊಂದು ದನಿಯಲ್ಲಿ ಒಂದು ವೇಳೆ ಡಿಕೆಶಿ ಮೇಲಿನ ಕೇಸ್​​ ವಿಚಾರ ಎತ್ತಲಾಗಿದೆ. ಅಕಸ್ಮಾತ್ ಇ.ಡಿ. ಕೇಸುಗಳು ಡಿಕೆಶಿಯನ್ನು ಇಕ್ಕಟ್ಟಿಗೆ ಸಿಲುಕಿಸಿದರೆ ಪಕ್ಷಕ್ಕೆ ಮುಜುಗರವಾಗಲಿದೆ. ಹೀಗಾಗಿ ಇನ್ನೊಮ್ಮೆ ಯೋಚನೆ ಮಾಡಿ. ಡಿಕೆಶಿ ಕೆಪಿಸಿಸಿ ಅಧ್ಯಕ್ಷ ಮಾಡುವುದಕ್ಕೆ ಇನ್ನೊಮ್ಮೆ ಯೋಚಿಸಿ ಎಂದು ಕೆಲ ನಾಯಕರು ಪಕ್ಷದ ಹೈಕಮಾಂಡ್​​ಗೆ ಸಲಹೆ ಕೊಟ್ಟಿದ್ದಾರೆ. ಈ ಹಿನ್ನೆಲೆ ಸಿದ್ದರಾಮಯ್ಯರನ್ನು ದೆಹಲಿಗೆ ಕರೆಸಿಕೊಂಡು ಚರ್ಚಿಸಲು ವರಿಷ್ಠರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಅದಕ್ಕೂ ಮುನ್ನ ರಾಜ್ಯ ನಾಯಕರೂ ಒಮ್ಮೆ ಚರ್ಚಿಸಲಿ ಎಂದು ಹೈಕಮಾಂಡ್​ ಬಯಸಿದೆ ಎನ್ನುತ್ತವೆ ಪಕ್ಷದ ಮೂಲಗಳು.

Published On - 2:44 pm, Sat, 28 December 19

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ