ಸರ್ಕಾರ ಅಭದ್ರವಾಗುವ ಸಾಧ್ಯತೆ: ಅಧ್ಯಕ್ಷ ಖರ್ಗೆಗೆ ಸ್ಫೋಟಕ ಪತ್ರ ಬರೆದ ಕಾಂಗ್ರೆಸ್​​ ಎಂಎಲ್​ಸಿಗಳು

ಕರ್ನಾಟಕ ಸಿಎಂ ಕುರ್ಚಿಯ ಸುತ್ತಲಿನ ಚರ್ಚೆ ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ದಿನಕ್ಕೊಂದು ಹೇಳಿಕೆ, ನಾಯಕರ ನಿಗೂಢ ನಡೆಗಳು ಕುತೂಹಲವನ್ನ ಕೆರಳಿಸುತ್ತಿವೆ. ಸಚಿವರ ನಡುವಿನ ಮಾತಿನ ಸಮರದ ಮಧ್ಯೆಯೇ ಕೈ ನಾಯಕರು ದೆಹಲಿಯತ್ತ ಮುಖ ಮಾಡಿರೋದು ಅಚ್ಚರಿ ಮೂಡಿಸಿದೆ. ಇದರ ಮಧ್ಯ ಇದೀಗ ಅಂತಿಮವಾಗಿ ಇದಕ್ಕೆ ಬ್ರೇಕ್ ಹಾಕಲು ವಿಧಾನಪರಿಷತ್​ ಸದಸ್ಯರು ಮುಂದಾಗಿದ್ದಾರೆ.

ಸರ್ಕಾರ ಅಭದ್ರವಾಗುವ ಸಾಧ್ಯತೆ: ಅಧ್ಯಕ್ಷ ಖರ್ಗೆಗೆ ಸ್ಫೋಟಕ ಪತ್ರ ಬರೆದ ಕಾಂಗ್ರೆಸ್​​ ಎಂಎಲ್​ಸಿಗಳು
ಮಲ್ಲಿಕಾರ್ಜುನ ಖರ್ಗೆ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Sep 09, 2024 | 8:02 PM

ಬೆಂಗಳೂರು, (ಸೆಪ್ಟೆಂಬರ್ 09): ಮೇಲ್ನೋಟಕ್ಕೆ ಕಾಂಗ್ರೆಸ್ ಪಾಳಯದಲ್ಲಿ ಯಾವ ಅಬ್ಬರವೂ ಇಲ್ಲ, ಗೊಂದಲದ ವಾತಾವರಣವೂ ಇಲ್ಲ. ಸಿದ್ದರಾಮಯ್ಯ ಪ್ರಕರಣ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದರೆ ತಾವೆಲ್ಲ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದೇವೆ ಎಂದು ಕಾಂಗ್ರೆಸ್ ನಾಯಕರು ತಮ್ಮ ಸಾಲಿಡಾರಿಟಿಯನ್ನು ವ್ಯಕ್ತಪಡಿಸುತ್ತಿದ್ದಾರೆ. ಆದರೆ ನಡೆಯುತ್ತಿರುವ ವಿದ್ಯಮಾನ, ದೆಹಲಿಯ ದಂಡಯಾತ್ರೆಗಳು, ನಾಯಕರ ಪ್ರತ್ಯೇಕ ಸಭೆಗಳು, ಒನ್ ಟು ಒನ್ ಲಂಚ್- ಬ್ರೇಕ್ ಫಾಸ್ಟ್ ಮೀಟಿಂಗ್ ಗಳು ಬೇರೆಯದೇ ಕಥೆ ಹೇಳುತ್ತಿವೆ. ಇವೆಲ್ಲವುಗಳಿಗೆ ಬ್ರೇಕ್​ ಹಾಕಲು ಕಾಂಗ್ರೆಸ್​ ವಿಧಾನಪರಿಷತ್ ಸದಸ್ಯರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೊರೆ ಹೋಗಿದ್ದಾರೆ. ಹೌದು…ಸಿಎಂ ಕುರ್ಚಿ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡುವುದನ್ನು ನಿಲ್ಲಿಸುವಂತೆ ನಿರ್ದೇಶನ ನೀಡಿ ಎಂದು ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.

ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಂಜುನಾಥ್ ಭಂಡಾರಿ ಅವರು ಎಐಸಿಸಿ ಮಲ್ಲಿಕಾರ್ಜು ಖರ್ಗೆ ಅವರಿಗೆ ಪತ್ರ ಬರೆದಿದ್ದು, ಪಕ್ಷದ ನಿಯಮ ಉಲ್ಲಂಘಿಸಿ ಬಹಿರಂಗvಆಗಿಯೇ ಸಚಿವರು ಸಿಎಂ ಸ್ಥಾನದ ಆಕಾಂಕ್ಷೆ ಹೇಳಿಕೆ ನೀಡುತ್ತಿದ್ದಾರೆ. ಸಚಿವರ ಲಗಾಮಿಲ್ಲದ ಹೇಳಿಕೆಗಳಿಂದ ಪಕ್ಷಕ್ಕೆ ಡ್ಯಾಮೇಜ್​ ಆಗುತ್ತಿದೆ. ಅಷ್ಟೇ ಅಲ್ಲದೆ ಈ ಹೇಳಿಕೆಗಳಿಂದ ಸರ್ಕಾರ ಅಭದ್ರವಾಗುವ ಸಾಧ್ಯತೆ ಇದೆ. ಹಾಗಾಗಿ ಇಂತಹ ಚರ್ಚೆಗಳಿಗೆ ತಡೆಹಾಕುವ ಅವಶ್ಯಕತೆ ಇದೆ ಎಂದು ಖರ್ಗೆ ಅವರಿಗೆ ಪತ್ರದ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: 2028ಕ್ಕೆ ಸಿಎಂ ಆಗುವ ತಯಾರಿ ಇದೆ: ಡಿಕೆ ಶಿವಕುಮಾರ್​​ಗೆ ಶಾಕ್ ಕೊಟ್ಟ ಜಾರಕಿಹೊಳಿ

ಈ ಹೇಳಿಕೆಗಳಿಂದ ಸರ್ಕಾರ ಅಭದ್ರವಾಗುವ ಸಾಧ್ಯತೆ ಇದೆ. ಹಾಗಾಗಿ ಇಂಥ ಚರ್ಚೆಗಳಿಗೆ ತಡೆಹಾಕುವ ಅವಶ್ಯಕತೆ ಇದೆ. ತಮ್ಮ ಇಲಾಖೆಗೆ ನೀಡಿದ ಯೋಜನೆ ಜಾರಿಗೆ ಕ್ರಮವಹಿಸಲಿ. ಸಚಿವರು ರಾಜ್ಯದ ಜನರ ಸಮಸ್ಯೆಗಳನ್ನು ಆಲಿಸಬೇಕು. ಅದನ್ನು ಬಿಟ್ಟು ಸಿಎಂ ಆಕಾಂಕ್ಷಿ ಎಂದು ಹೇಳುವುದು ತಪ್ಪು. ಅಂಥವರ ವಿರುದ್ಧ ಪಕ್ಷ ಶಿಸ್ತುಕ್ರಮದ ಎಚ್ಚರಿಕೆ ನೀಡಬೇಕು ಎಂದು ಮಲ್ಲಿಕಾರ್ಜುನ ಖರ್ಗೆಗೆ ಒತ್ತಾಯಿಸಿದ್ದಾರೆ.

ಮುಡಾ ಕೇಸ್ ಫೈನಲ್ ಆಗಿಲ್ಲ. ಹೈಕೋರ್ಟ್‌ನಿಂದ ಆದೇಶ ಬಂದಿಲ್ಲ. ಕುರ್ಚಿ ಬದಲಾವಣೆ ಬಗ್ಗೆ ಹೈಕಮಾಂಡ್ ಸುಳಿವನ್ನೂ ಕೊಟ್ಟಿಲ್ಲ. ಹೀಗಿದ್ದರೂ ಕೂಸು ಹುಟ್ಟು ಮುನ್ನವೇ ಕುಲಾವಿ ಹೊಲಿಸಿದ್ರು ಎಂಬಂತೆ ಕಾಂಗ್ರೆಸ್ ಮನೆಯಲ್ಲಿ ಕೆಲ ನಾಯಕರು ಸಿಎಂ ಆಗೋದಕ್ಕೆ ಹೊಸ ಸೂಟು ರೆಡಿಮಾಡಿ ಬಿಟ್ಟಿದ್ದಾರೆ. ಸಿಎಂ ಕುರ್ಚಿಗೆ ನಾನು ನಾನು ಅಂತಾ ಟವೆಲ್ ಹಾಕ್ತಿದ್ದಾರೆ. ಅದಕ್ಕೆ ಅವರು ಬಳಸ್ತಿರೋ ಅಸ್ತ್ರವೇ ಸೀನಿಯರ್. ಸಚಿವರಾದ ಎಂಬಿ ಪಾಟೀಲ್​, ಶಿವಾನಂದಾ ಪಾಟೀಲ್​, ಸತೀಶ್ ಜಾರಕಿಹೊಳಿ, ಪರಮೇಶ್ವರ್​ ಸಿಎಂ ರೇಸ್​​ನಲ್ಲಿದ್ದಾರೆ. ಇದರ ಮಧ್ಯ ನಾನು ಸೀನಿಯರ್ ಎಂದು ಶಾಸಕ ಆರ್​ವಿ ದೇಶಪಾಂಡೆ ಸಹ ಕೈಎತ್ತಿದ್ದಾರೆ.

ಕಾಂಗ್ರೆಸ್​ನಲ್ಲಿನ ಈ ಸಿಎಂ ಕುರ್ಚಿ ಕಿತ್ತಾಟದಿಂದ ಬಿಜೆಪಿ ನಾಯಕರು ಲೇವಡಿ ಮಾಡಿಕೊಂಡು ಓಡಾಡುತ್ತಿದ್ದಾರೆ. ಆದ್ರೆ, ಇತ್ತ ಕಾಂಗ್ರೆಸ್ ಹೈಕಮಾಂಡ್​ ಮಾತ್ರ ಇದುವರೆಗೂ ಯಾವುದೇ ಸೂಚನೆ ನೀಡಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ