AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರಿಬ್ಬರೇ ರಾಜಕಾರಣ ಮಾಡಿ, ಅವರಿಬ್ಬರೇ ನಡೆಸಲಿ: ಡಿಕೆ ಒಪ್ಪಂದ ಹೇಳಿಕೆಗೆ ಪರಮೇಶ್ವರ್ ತೀವ್ರ ಅಸಮಾಧಾನ

ಡಿಕೆ ಶಿವಕುಮಾರ್ ಅವರ ಅಧಿಕಾರ ಹಂಚಿಕೆ ಒಪ್ಪಂದದ ಹೇಳಿಕೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೆ ಚರ್ಚೆ ಹುಟ್ಟುಹಾಕಿದೆ. ಯಾವುದೇ ಒಪ್ಪಂದವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಒಪ್ಪಂದ ಹೇಳಿಕೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಪ್ಪಂದ ಇದ್ದರೆ ಅವರಿಬ್ಬರೇ ಸರ್ಕಾರ ನಡೆಸಲಿ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅವರಿಬ್ಬರೇ ರಾಜಕಾರಣ ಮಾಡಿ, ಅವರಿಬ್ಬರೇ ನಡೆಸಲಿ: ಡಿಕೆ ಒಪ್ಪಂದ ಹೇಳಿಕೆಗೆ ಪರಮೇಶ್ವರ್ ತೀವ್ರ ಅಸಮಾಧಾನ
ಗೃಹ ಸಚಿವ ಡಾ. ಜಿ ಪರಮೇಶ್ವರ್
Anil Kalkere
| Edited By: |

Updated on: Dec 05, 2024 | 10:39 AM

Share

ಬೆಂಗಳೂರು, ಡಿಸೆಂಬರ್ 5: ಅಧಿಕಾರ ಹಂಚಿಕೆ ಸಂಬಂಧ ಒಪ್ಪಂದವಾಗಿದೆ ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ಇದೀಗ ಕರ್ನಾಟಕ ಕಾಂಗ್ರೆಸ್​ನಲ್ಲಿ ಮತ್ತೆ ಚರ್ಚೆ ಹುಟ್ಟು ಹಾಕಿದೆ. ಡಿಕೆಶಿ ಹೇಳಿಕೆಗೆ ಬುಧವಾರ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನಮ್ಮ ನಡುವೆ ಯಾವ ಒಪ್ಪಂದವೂ ಆಗಿಲ್ಲ. ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇವೆ ಎಂದು ಹೇಳಿದ್ದರು. ಇದೀಗ ಅಧಿಕಾರ ಹಂಚಿಕೆ ಒಪ್ಪಂದ ಹೇಳಿಕೆ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಪರಮೇಶ್ವರ್, ಒಪ್ಪಂದ ಆಗಿದೆ ಎಂದಾದರೆ ನಾವೆಲ್ಲರೂ ಯಾಕೆ ಇರಬೇಕು? ಅವರಿಬ್ಬರೇ ರಾಜಕಾರಣ ಮಾಡಿ, ಅವರಿಬ್ಬರೇ ನಡೆಸಿ ಬಿಡಲಿ. ಬೇರೆಯವರು ಇರುವುದೇ ಬೇಡವಾ ಎಂದು ಪ್ರಶ್ನಿಸಿದ್ದಾರೆ.

ಯಾವ ಒಪ್ಪಂದ ಆಗಿದೆಯೋ ನಮಗೆ ಗೊತ್ತಿಲ್ಲ. ​ನಾನು 2-3 ಜನರನ್ನು ದೆಹಲಿಯಲ್ಲಿ ಕೇಳಿದೆ, ಇಲ್ಲೂ ಕೇಳಿದೆ. ಒಪ್ಪಂದ ಆಗಿದೆ ಎಂದು ಯಾರೂ ಹೇಳಿಲ್ಲ. ಡಿಕೆ ಶಿವಕುಮಾರ್ ಯಾವ ಅರ್ಥದಲ್ಲಿ ‌ಹೇಳಿದರೋ ಗೊತ್ತಿಲ್ಲ. ಯಾವುದೇ ಒಪ್ಪಂದ ಆಗಿಲ್ಲ ಎಂದು ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ. ಆ ರೀತಿ ಆಗಲು ಸಾಧ್ಯವಿಲ್ಲ, ಹೈಕಮಾಂಡ್ ಬಿಟ್ಟು ಹೋಗಲ್ಲ. ಹೈಕಮಾಂಡ್ ತೀರ್ಮಾನ ಒಪ್ಪಿಕೊಳ್ಳುತ್ತೇವೆ ಎಂದು ಪರಮೇಶ್ವರ್ ಹೇಳಿದರು.

ಪ್ರತಿಪಕ್ಷಗಳಿಗೆ ಉತ್ತರ ನೀಡಲು ಹಾಸನ ಸಮಾವೇಶ: ಪರಮೇಶ್ವರ್

ಹಾಸನದಲ್ಲಿ ಕಾಂಗ್ರೆಸ್ ಜನ ಕಲ್ಯಾಣ ಸಮಾವೇಶ ವಿಚಾರವಾಗಿ ಮಾತನಾಡಿದ ಅವರು, ಜನ ಸ್ವಾಭಿಮಾನಿ ಒಕ್ಕೂಟಗಳನ್ನು ಮಾಡಿಕೊಂಡಿದ್ದಾರೆ. ಅವರು ನಮ್ಮ ಪಕ್ಷಕ್ಕೆ, ಸರ್ಕಾರಕ್ಕೆ ಸಿಂಪಥೈಸರ್ಸ್. ಅವರೊಂದಿಗೆ ಪಕ್ಷವೂ ಸೇರಿದೆ. ಎಲ್ಲ ಒಟ್ಟಿಗೆ ಸೇರಿ ಸಮಾವೇಶ ಮಾಡುತ್ತಿದ್ದೇವೆ. ಚುನಾವಣೆ ಸಂಧರ್ಭದಲ್ಲಿ ರಾಜಕೀಯವಾಗಿ ಮಾತಾಡಿದ್ದೆವು, ಅದನ್ನು ಜನರಿಗೆ ಹೇಳಬೇಕು. ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಕೀಯ ವಿಚಾರ ಪ್ರಸ್ತಾಪ ಮಾಡಲು ಆಗಲ್ಲ. ಜನರಿಗೆ ಸತ್ಯಾಂಶವನ್ನು ತಿಳಿಸಬೇಕು. ವಿಪಕ್ಷಕ್ಕೆ ರಾಜಕೀಯವಾಗಿ ಉತ್ತರ ಕೊಡಬೇಕು. ರಾಜಕೀಯವಾಗಿ ಉತ್ತರ ಕೊಡಲು ಸಮಾವೇಶ ಮಾಡುತ್ತಿದ್ದೇವೆ ಎಂದರು.

ಇದನ್ನೂ ಓದಿ: ಅಧಿಕಾರ ಹಂಚಿಕೆ ಒಪ್ಪಂದ: ಡಿಕೆ ಶಿವಕುಮಾರ್ ಹೇಳಿಕೆ ಅಲ್ಲಗಳೆದ ಸಿಎಂ ಸಿದ್ದರಾಮಯ್ಯ

ಇದು ಪಕ್ಷದ ಕಾರ್ಯಕ್ರಮ, ನಮ್ಮಲ್ಲಿ ಯಾವುದೇ ಬಣವಿಲ್ಲ. ಬಿಜೆಪಿಯಲ್ಲಿ ಮೂರು ಬಣವಿದೆ. ನಮ್ಮಲ್ಲಿ ಬಣವನ್ನು ಸೃಷ್ಟಿಸಲು ಬಿಜೆಪಿ ಯತ್ನಿಸಬಹುದು ಅಷ್ಟೇ ಎಂದರು.

ಮುಡಾ ವಿಚಾರವಾಗಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ಅಲಿಬಾಬ ಮತ್ತು 40 ಕಳ್ಳರ ಸರ್ಕಾರ ಎಂದು ಆರೋಪ ಮಾಡಿದ್ದಕ್ಕೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅನೇಕ ವಿಚಾರಗಳನ್ನು ಪ್ರಸ್ತಾಪ ಮಾಡುತ್ತಾರೆ. ಅದಕ್ಕೆಲ್ಲ ನಾವೇನು ಉತ್ತರ ಕೊಡಬೇಕಾಗಿಲ್ಲ. ಅದು ಅವರ ವ್ಯಾಖ್ಯಾನ. ಸಂದರ್ಭ ಬಂದಾಗ ಉತ್ತರ ‌ಕೊಡುತ್ತೇವೆ ಎಂದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್