AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ ಬಿಜೆಪಿ ಸಂಸ್ಕೃತಿ ಬಿಂಬಿಸುವ ‘ದೊಡ್ಡ ದೊಡ್ಡ‘ ಮಾತಾಡಿದ್ದಾರೆ, ಇದು ಹೊಲಸುತನದ ಪರಮಾವಧಿ: ಕರ್ನಾಟಕ ಕಾಂಗ್ರೆಸ್

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣದ ಬಗ್ಗೆ ಕಾಂಗ್ರೆಸ್ ಟೀಕೆ ಖಾರವಾಗಿ ಟೀಕೆ ಮಾಡಿದೆ. ಸಂತ್ರಸ್ತೆಗೆ ರಕ್ಷಣೆ ನೀಡುವ ಬದಲಿಗೆ ಆರೋಪಿಗೆ ಭದ್ರತೆ ನೀಡುತ್ತಿದ್ದೀರಿ ಎಂದು ಟ್ವೀಟ್​ ಮಾಡಿ ರಾಜ್ಯ ಕಾಂಗ್ರೆಸ್ ಘಟಕ ಬಿಜೆಪಿಗೆ ಪ್ರಶ್ನೆ ಮಾಡಿದೆ.

ರಮೇಶ್ ಜಾರಕಿಹೊಳಿ ಬಿಜೆಪಿ ಸಂಸ್ಕೃತಿ ಬಿಂಬಿಸುವ ‘ದೊಡ್ಡ ದೊಡ್ಡ‘ ಮಾತಾಡಿದ್ದಾರೆ, ಇದು ಹೊಲಸುತನದ ಪರಮಾವಧಿ: ಕರ್ನಾಟಕ ಕಾಂಗ್ರೆಸ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 05, 2022 | 1:10 PM

Share

ಬೆಂಗಳೂರು: ಸಂತ್ರಸ್ತೆಗೆ ರಕ್ಷಣೆ ನೀಡುವ ಬದಲಿಗೆ ಆರೋಪಿಗೆ ನೂರಾರು ಪೊಲೀಸರ ನಿಯೋಜಿಸಿ ಬಿಗಿ ಭದ್ರತೆ ನೀಡುತ್ತಿರುವ ಸರ್ಕಾರ. ಪೊಲೀಸರನ್ನು ಕಳಿಸಬೇಕಿದ್ದಿದ್ದು ಅರೆಸ್ಟ್ ಮಾಡುವುದಕ್ಕೋ ಅಥವಾ ರಕ್ಷಣೆ ಮಾಡುವುದಕ್ಕೋ ಬಸವರಾಜ ಬೊಮ್ಮಾಯಿ ಅವರೇ? ಇದೇ “ಯುಪಿ ಮಾಡೆಲ್” ಅಲ್ಲವೇ? ಎಂದು ಕರ್ನಾಟಕ ಕಾಂಗ್ರೆಸ್ ಬಿಜೆಪಿ ಪಕ್ಷದ ವಿರುದ್ಧ ಟ್ವೀಟ್ ದಾಳಿ ನಡೆಸಿದ್ದಾರೆ. ಈ ನವರಂಗಿ ಆಟಗಳನ್ನು ಬಿಟ್ಟು ಕೂಡಲೇ ಆರೋಪಿಯನ್ನು ಬಂಧಿಸಿ ಎಂದು ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಂಧಿಸುವಂತೆ ಕಾಂಗ್ರೆಸ್ ಒತ್ತಾಯಿಸಿದೆ.

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣದ ಬಗ್ಗೆ ಕಾಂಗ್ರೆಸ್ ಟೀಕೆ ಖಾರವಾಗಿ ಟೀಕೆ ಮಾಡಿದೆ. ಸಂತ್ರಸ್ತೆಗೆ ರಕ್ಷಣೆ ನೀಡುವ ಬದಲಿಗೆ ಆರೋಪಿಗೆ ಭದ್ರತೆ ನೀಡುತ್ತಿದ್ದೀರಿ ಎಂದು ಟ್ವೀಟ್​ ಮಾಡಿ ರಾಜ್ಯ ಕಾಂಗ್ರೆಸ್ ಘಟಕ ಬಿಜೆಪಿಗೆ ಪ್ರಶ್ನೆ ಮಾಡಿದೆ. ರೇಪಿಸ್ಟ್ ರಮೇಶ್​ನನ್ನು ಬಂಧಿಸಿ ಎಂದು ಕಾಂಗ್ರೆಸ್ ಹ್ಯಾಷ್​ಟ್ಯಾಗ್ ಬಳಸಿ ಟ್ವೀಟ್ ಮಾಡಿದೆ.

ತನ್ನ ಮತ್ತೊಂದು ಟ್ವೀಟ್​ನಲ್ಲಿ ರಮೇಶ್ ಜಾರಕಿಹೊಳಿಯ ದೃಶ್ಯವಷ್ಟೇ ಅಶ್ಲೀಲವಲ್ಲ. ಮಾತೂ ಅಶ್ಲೀಲ ಎಂದು ರಾಜ್ಯ ಕಾಂಗ್ರೆಸ್ ಘಟಕ ವ್ಯಂಗ್ಯವಾಡಿದೆ. ರಮೇಶ್ ಜಾರಕಿಹೊಳಿ ಬಿಜೆಪಿ ಸಂಸ್ಕೃತಿ ಬಿಂಬಿಸುವ ‘ದೊಡ್ಡ ದೊಡ್ಡ’ ಮಾತಾಡಿದ್ದಾರೆ. ಇದು ಹೊಲಸುತನದ ಪರಮಾವಧಿ. ಅಂಥಾ ಪದಗಳು ಬಿಜೆಪಿಗರ ಬಾಯಲ್ಲಿ ಮಾತ್ರ ಬರಲು ಸಾಧ್ಯ. ಬಸವರಾಜ ಬೊಮ್ಮಾಯಿಯವರೇ, ಕೇಸ್ ದಾಖಲಾಗಿದ್ದರೂ ರಮೇಶ್ ಬಂಧಿಸದೇ ಇಂತಹ ಕೀಳು ನಾಟಕ ಆಡಲು ಬಿಟ್ಟಿದ್ದೀರಾ? ರೇಪಿಸ್ಟ್ ರಮೇಶ್​ನನ್ನು ಬಂಧಿಸಿ ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಯಾರೋ ಹೆಸರು ಹೇಳಿದ್ದಕ್ಕೆ ರಾಜೀನಾಮೆ ಕೇಳುವ ಬಿಜೆಪಿಗರೇ, ಚಾಂದಿನಿ ನಾಯ್ಕ್‌ರಿಗೆ ಹಲ್ಲೆ ನಡೆಸಿದ ಶಾಸಕ ಸಿದ್ದು ಸವದಿಯನ್ನು ಉಚ್ಛಾಟಿಸಿ. ತಡೆಯಾಜ್ಞೆ ತಂದಿರುವ 6 ಸಚಿವರ ರಾಜೀನಾಮೆ ಪಡೆಯಿರಿ. ಸದನ ಸದಸ್ಯರ ಚಾರಿತ್ರ್ಯ ಪ್ರಶ್ನಿಸಿದ ಸುಧಾಕರ್ ರಾಜೀನಾಮೆ ಪಡೆಯಿರಿ. ಅತ್ಯಾಚಾರಿ ಮಾಜಿ ಸಚಿವನ ಪಕ್ಷದಿಂದ ಉಚ್ಛಾಟಿಸಿ. ನೈತಿಕತೆ ತೋರಿ ಎಂದು ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿ: Ramesh Jarkiholi Press Meet | ನಾನು ಗಂಡಸು.. ಆ ಮಹಾನಾಯಕ ಗಾಂ.. ಅವನನ್ನು ಒದ್ದು ಒಳಗಾಕಿ -ರಮೇಶ್ ಜಾರಕಿಹೊಳಿ

ನಮ್ಮ ಅಕ್ಕನನ್ನು ಡಿ.ಕೆ.ಶಿವಕುಮಾರ್ ಒತ್ತೆಯಾಳಾಗಿಸಿ ಕೊಂಡಿದ್ದಾರೆ; ಆಕೆಯನ್ನು ವಾಪಸ್​ ತಂದುಕೊಟ್ಟುಬಿಡಿ -ಸಿಡಿ ಲೇಡಿ ಸಹೋದರ

Published On - 7:19 pm, Sat, 27 March 21

Follow Us
Web contact
Web contact

TV9 Kannada

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್